Thursday, February 13, 2025

ಸಂಗಬೆಟ್ಟು ಗ್ರಾಮ ಪಂಚಾಯತ್ ವಲಯ ಮಟ್ಟದ ಪಂಚಾಯತ್ ಮಿಲನ 2019 ಕಾರ್ಯಕ್ರಮ

ಬಂಟ್ವಾಳ: ಬಂಟ್ವಾಳ ವಿಧಾನಸಭಾ ಕ್ಷೇತ್ರದ ಸಂಗಬೆಟ್ಟು ಗ್ರಾಮ ಪಂಚಾಯತ್ ವಲಯ ಮಟ್ಟದ ಪಂಚಾಯತ್ ಮಿಲನ 2019 ಕಾರ್ಯಕ್ರಮ ಸಿದ್ದಕಟ್ಟೆ ಹರ್ಷಾಲಿ ಸಭಾ ಭವನದಲ್ಲಿ ಜರುಗಿತು. ಈ ಕಾರ್ಯಕ್ರಮವನ್ನು ಮಾಜಿ ಸಚಿವ ಬಿ ರಮಾನಾಥ ರೈ ಅವರು ಉದ್ಘಾಟಿಸಿ ಪಕ್ಷದ ಕಾರ್ಯಕರ್ತರು ಮುಂಬರುವ ಗ್ರಾಮ ಪಂಚಾಯತ್ ಚುನಾವಣೆಗೆ ಸಜ್ಜಾಗುವಂತೆ ಕರೆ ನೀಡಿದರು. ವಿಧಾನಸಭೆ ಹಾಗೂ ಲೋಕಸಭಾ ಚುನಾವಣೆಯಲ್ಲಿ ವಿರೋಧ ಪಕ್ಷದವರ ಅಪಪ್ರಚಾರ ಹಾಗೂ ಸುಳ್ಳು ಆರೋಪಗಳಿಂದ ಪಕ್ಷಕ್ಕೆ ಸೋಲಾಯಿತು. ಮುಂದಿನ ದಿನಗಳಲ್ಲಿ ವಿರೋಧ ಪಕ್ಷದವರ ಆರೋಪಕ್ಕೆ ಪ್ರತ್ಯುತ್ತರ ನೀಡುವ ಮುಖಾಂತರ ನಾವೆಲ್ಲರೂ ಒಗ್ಗಟ್ಟಾಗಿ ಶ್ರಮಿಸೋಣ ಎಂದರು. ಯಾವುದೇ ಕಾರಣಕ್ಕೂ ದೃತಿ ಗೆಡದೆ ಪಕ್ಷದ ಸಂಘಟನೆಯಲ್ಲಿ ಹಾಗೂ ಬಲವರ್ದನೆಯಲ್ಲಿ ಸಕ್ರೀಯವಾಗಿ ಭಾಗವಹಿಸುವ ಮುಖಾಂತರ ಪಕ್ಷವನ್ನು ಬಲಿಷ್ಟಗೊಳಿಸುವಂತೆ ಕರೆ ನೀಡಿದರು. ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್ ಅಧ್ಯಕ್ಷತೆ ವಹಿಸಿ ವಲಯ ಕಾಂಗ್ರೆಸ್ ಹಾಗೂ ಬೂತ್ ಸಮಿತಿಯನ್ನು ಪುನರ್‌ರಚಿಸಿ ಪಕ್ಷದಲ್ಲಿ ಯುವಕರಿಗೆ ಹೆಚ್ಚು ಆದ್ಯತೆಯನ್ನು ನೀಡುವ ಮುಖಾಂತರ ಬಲಿಷ್ಠಗೊಳ್ಳುವಂತೆ ಕಾರ್ಯಕರ್ತರಲ್ಲಿ ವಿನಂತಿಸಿದರು. ವಿಧಾನಸಭೆ ಹಾಗೂ ಲೋಕಸಭಾ ಚುನಾವಣೆಯಲ್ಲಿ ಆದ ಸೋಲಿನ ಬಗ್ಗೆ ಪರಾಮವರ್ಶಿಸಿದರು. ಸಂಗಬೆಟ್ಟು ಗ್ರಾಮ ಪಂಚಾಯತ್ ಸಮಿತಿ ಅಧ್ಯಕ್ಷರನ್ನಾಗಿ ದಿನೇಶ್ ಶೆಟ್ಟಿಗಾರ್ ಇವರನ್ನು ಆಯ್ಕೆ ಮಾಡಲಾಯಿತು ಈ ಕಾರ್ಯಕ್ರಮದಲ್ಲಿ ಬೂತ್ ಅಧ್ಯಕ್ಷರಾದ ಹಮೀದ್ ಎಸ್.ಎ, ದೇವರಾಜ್ ಸಾಲ್ಯನ್, ನೋಣಯ್ಯ ಪೂಜಾರಿ, ಜಯಕರ್ ಶೆಟ್ಟಿ, ದಾಮೋದರ ನಾಯಕ್, ವಾಮನ್ ಬುನ್ನನ್ ಪಂಚಾಯತ್ ಸದಸ್ಯರಾದ ದೇವಪ್ಪ ಕರ್ಕೇರ, ಶೇಖರ್ ನಾಯ್ಕ, ಸುಭಾಶಿನಿ, ಶಾರದ, ಮಯ್ಯದ್ದಿ, ಹಾಗೂ ಮುಖಂಡರಾದ ಡಾ.ಪ್ರಭಾಚಂದ್ರ, ಮಂಜಯ್ಯ ಶೆಟ್ಟಿ, ದಾಮೋದರ ಮಂಚಕಲ್ಲು, ಸೀತರಾಮ್ ಶೆಟ್ಟಿ, ಬುಜಬಳಿ ಕಂಬಳಿ,ಲೋಕಯ್ಯ ಪೂಜಾರಿ, ಫಾರೂಕ್ ಕೆರೆಬಳಿ, ಶಿವಾನಂದ ರೈ, ಉಸ್ಮಾನ್, ಅಶೋಕ್ ಆಚಾರಿ, ಮೋನಾಕ ಕಲ್ಕುರಿ, ಶಶಿಕುಮಾರ್, ಅಲ್ತಾಫ್ ಅಹಮದ್, ಜಲಜ ಪೂಜಾರಿ ಹಾಗೂ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು. ದಿನೇಶ್ ಶೆಟ್ಟಿಗಾರ್ ಸ್ವಾಗತಿಸಿ ಜಯಕರ್ ಶೆಟ್ಟಿ ವಂದನಾರ್ಪಣೆಗೈದರು.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...