Monday, February 2, 2026

ವಿದ್ಯಾರ್ಥಿಗಳು ಸಮಾಜದ ಆಗು, ಹೋಗುಗಳ ಜ್ಙಾನ ವಿಸ್ತರಿಸಬೇಕು : ಪ್ರೋ.ತುಕರಾಂ ಪೂಜಾರಿ

ಬಂಟ್ವಾಳ: ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಚಟುವಟಿಕೆಯ ಜೊತೆ ಸಮಾಜದ ಆಗು, ಹೋಗುಗಳ ಬಗ್ಗೆಯು ಜ್ಙಾನವನ್ನು ವಿಸ್ತರಿಸಬೇಕು ಎಂದು ಬಿ.ಸಿ.ರೋಡಿನ  ರಾಣಿ ಅಬ್ಬಕ್ಕ ತುಳು ಅಧ್ಯಯನ  ಕೇಂದ್ರದ ಅಧ್ಯಕ್ಷ ಪ್ರೋ.ತುಕರಾಂ ಪೂಜಾರಿ ತಿಳಿಸಿದ್ದಾರೆ. ಬಿ.ಸಿ.ರೋಡಿ ಗಾಣದಪಡ್ಪು ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದಲ್ಲಿ ಬಂಟ್ವಾಳ ತಾಲೂಕು ಬಿಲ್ಲವ ಸಮಾಜಸೇವಾ ಸಂಘದ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಮೊಬೈಲ್,ಇಂಟರ್ ನೆಟ್ ಇತ್ಯಾದಿಗಳನ್ನು ತಮ್ಮ ಜ್ಙಾನದ ಬೆಳವಣಿಗೆಗೆ ಬಳಸಿಕೊಳ್ಳಬೇಕೇ ವಿನಹ ಅದನ್ನೊಂದು ದುಶ್ಚಟವನ್ನಾಗಿಸಬಾರದು ಎಂದು ಕಿವಿಮಾತು ಹೇಳಿದರು.

ಇನ್ನೋರ್ವ ಅತಿಥಿಯಾಗಿದ್ದ ಮಂಗಳೂರು ಐಎಎಸ್ ಆಕಾಡೆಮಿ ನಿರ್ದೇಶಕ ಸುರೇಶ್ ಮಾತನಾಡಿ, ಶಿಕ್ಷಣದ ಬಳಿಕ ವಿದ್ಯಾರ್ಥಿಗಳು ಉತ್ತಮವಾದ ಉದ್ಯೋಗ ಪಡೆಯಲು ವಿವಿಧ ಪರೀಕ್ಷೆಯನ್ನು ಯಾವರೀತಿ ಎದುರಿಸಬೇಕೆಂಬುದರ ಕುರಿತು ಮಾಹಿತಿ ನೀಡಿದರು.ಸಂಘದ ಅಧ್ಯಕ್ಷ ಸೇಸಪ್ಪ ಕೋಟ್ಯಾನ್ ಸಭಾಧ್ಯಕ್ಷತೆ ವಹಿಸಿದ್ದರು.ಸಂಘದ ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್, ಉಪಾಧ್ಯಕ್ಷಬೊಳ್ಳುಕಲ್ಲು ನಾರಾಯಣ ಪೂಜಾರಿ, ಲೆಕ್ಕಪರಿಶೋಧಕ ಬಿ.ಸತೀಶ್, ಜತೆ ಕಾರ್ಯದರ್ಶಿ ಆನಂದ ಸಾಲಿಯಾನ್,  ತಾಲೂಕು ಬಿಲ್ಲವ ಮಹಿಳಾ ಸಮಿತಿ ಅಧ್ಯಕ್ಷೆ ಜಯಲಕ್ಷ್ಮಿ ಭುವನೇಶ್ ವೇದಿಕೆಯಲ್ಲಿದ್ದರು. ಈ ಸಂದರ್ಭದಲ್ಲಿ ಸಮಾಜದ 37 ವಿದ್ಯಾರ್ಥಿಗಳಿಗೆ ಒಟ್ಟು 2.75 ಲಕ್ಷ ರೂ.ಪ್ರೋತ್ಸಾಹಧನವನ್ನು ಸಂಘದ ವತಿಯಿಂದ ವಿತರಿಸಲಾಯಿತು. ಸಂಘದ ಪ್ರ.ಕಾರ್ಯದರ್ಶಿ ರಮೇಶ್ ತುಂಬೆ ಪ್ರಸ್ತಾವಿಸಿ, ಸ್ವಾಗತಿಸಿದರು. ಕೋಶಾಧಿಕಾರಿ ಉಮೇಶ್ ಸುವರ್ಣ ವಂದಿಸಿದರು.

More from the blog

ಬಂಟ್ವಾಳ : ಜ್ಞಾನ ವಿಕಾಸ ತಾಲೂಕು ಮಟ್ಟದ ಮಹಿಳಾ ಕಾರ್ಯಕ್ರಮ

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬಂಟ್ವಾಳ ತಾಲೂಕು ಜ್ಞಾನ ವಿಕಾಸ ತಾಲೂಕು ಮಟ್ಟದ ಮಹಿಳಾ ಕಾರ್ಯಕ್ರಮ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲ್ಯಾಣ ಮಂಟಪದಲ್ಲಿ ನಡೆಯಿತು. ಕಾರ್ಯಕ್ರಮವನ್ನು ತಾಲೂಕು...

ವಿಟ್ಲ ಪಟ್ಟಣ ಪಂಚಾಯತ್ ನಲ್ಲಿ ಹೊಸ ಬೈಲಾದಂತೆ ಅಭಿವೃದ್ಧಿ ಶುಲ್ಕ : ಸಾಮಾನ್ಯ ಸಭೆ ಸ್ಪಷ್ಟನೆ

ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ನ ಸಾಮಾನ್ಯ ಸಭೆ ಅಧ್ಯಕ್ಷ ಕರುಣಾಕರ ನಾಯ್ತೊಟ್ಟು ಅವರ ಅಧ್ಯಕ್ಷತೆಯಲ್ಲಿ ಜ.31ರಂದು ಪಂಚಾಯತ್ ಸಭಾಭವನದಲ್ಲಿ ನಡೆಯಿತು. ವಿಟ್ಲ ಪಟ್ಟಣ ಪಂಚಾಯತ್ ಗೆ ಬಂದ ಅಭಿವೃದ್ಧಿ ಶುಲ್ಕ ದ ಸುತ್ತೋಲೆಯ...

ಬಿ. ಜನಾರ್ದನ ಪೂಜಾರಿ ಮನೆಗೆ ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿ ಭೇಟಿ

ಬಂಟ್ವಾಳ: ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿಯವರು ಇಂದು ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ ಅವರ ಮನೆಗೆ ತೆರಳಿ ಅವರ ಯೋಗ ಕ್ಷೇಮ ವಿಚಾರಿಸಿ, ಜಿಲ್ಲೆಯ ರಾಜಕೀಯ ವ್ಯವಸ್ಥೆ ಬಗ್ಗೆ...

ಮಿತ್ತೂರು: ನೌರತ್ತುಲ್ ಮದೀನಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕ : ಪ್ರಕರಣ ದಾಖಲು

ವಿಟ್ಲ: ಇಡ್ಕಿದು ಗ್ರಾಮದ ಮಿತ್ತೂರು ನೌರತ್ತುಲ್ ಮದೀನಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿನಿಗೆ ಅಮಾನುಷವಾಗಿ ಬೆತ್ತದಿಂದ ಗಂಭೀರವಾಗಿ ಹಲ್ಲೆ ನಡೆಸಿದ ಶಾಲಾ ಶಿಕ್ಷಕ ಇಸ್ತಿಕಾರ್ ಮೇಲೆ ವಿಟ್ಲ ಪೊಲೀಸ್‌ ಠಾಣೆಯಲ್ಲಿ...