Tuesday, July 1, 2025

ವಿದ್ಯಾರ್ಥಿಗಳು ಸಮಾಜದ ಆಗು, ಹೋಗುಗಳ ಜ್ಙಾನ ವಿಸ್ತರಿಸಬೇಕು : ಪ್ರೋ.ತುಕರಾಂ ಪೂಜಾರಿ

ಬಂಟ್ವಾಳ: ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಚಟುವಟಿಕೆಯ ಜೊತೆ ಸಮಾಜದ ಆಗು, ಹೋಗುಗಳ ಬಗ್ಗೆಯು ಜ್ಙಾನವನ್ನು ವಿಸ್ತರಿಸಬೇಕು ಎಂದು ಬಿ.ಸಿ.ರೋಡಿನ  ರಾಣಿ ಅಬ್ಬಕ್ಕ ತುಳು ಅಧ್ಯಯನ  ಕೇಂದ್ರದ ಅಧ್ಯಕ್ಷ ಪ್ರೋ.ತುಕರಾಂ ಪೂಜಾರಿ ತಿಳಿಸಿದ್ದಾರೆ. ಬಿ.ಸಿ.ರೋಡಿ ಗಾಣದಪಡ್ಪು ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದಲ್ಲಿ ಬಂಟ್ವಾಳ ತಾಲೂಕು ಬಿಲ್ಲವ ಸಮಾಜಸೇವಾ ಸಂಘದ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಮೊಬೈಲ್,ಇಂಟರ್ ನೆಟ್ ಇತ್ಯಾದಿಗಳನ್ನು ತಮ್ಮ ಜ್ಙಾನದ ಬೆಳವಣಿಗೆಗೆ ಬಳಸಿಕೊಳ್ಳಬೇಕೇ ವಿನಹ ಅದನ್ನೊಂದು ದುಶ್ಚಟವನ್ನಾಗಿಸಬಾರದು ಎಂದು ಕಿವಿಮಾತು ಹೇಳಿದರು.

ಇನ್ನೋರ್ವ ಅತಿಥಿಯಾಗಿದ್ದ ಮಂಗಳೂರು ಐಎಎಸ್ ಆಕಾಡೆಮಿ ನಿರ್ದೇಶಕ ಸುರೇಶ್ ಮಾತನಾಡಿ, ಶಿಕ್ಷಣದ ಬಳಿಕ ವಿದ್ಯಾರ್ಥಿಗಳು ಉತ್ತಮವಾದ ಉದ್ಯೋಗ ಪಡೆಯಲು ವಿವಿಧ ಪರೀಕ್ಷೆಯನ್ನು ಯಾವರೀತಿ ಎದುರಿಸಬೇಕೆಂಬುದರ ಕುರಿತು ಮಾಹಿತಿ ನೀಡಿದರು.ಸಂಘದ ಅಧ್ಯಕ್ಷ ಸೇಸಪ್ಪ ಕೋಟ್ಯಾನ್ ಸಭಾಧ್ಯಕ್ಷತೆ ವಹಿಸಿದ್ದರು.ಸಂಘದ ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್, ಉಪಾಧ್ಯಕ್ಷಬೊಳ್ಳುಕಲ್ಲು ನಾರಾಯಣ ಪೂಜಾರಿ, ಲೆಕ್ಕಪರಿಶೋಧಕ ಬಿ.ಸತೀಶ್, ಜತೆ ಕಾರ್ಯದರ್ಶಿ ಆನಂದ ಸಾಲಿಯಾನ್,  ತಾಲೂಕು ಬಿಲ್ಲವ ಮಹಿಳಾ ಸಮಿತಿ ಅಧ್ಯಕ್ಷೆ ಜಯಲಕ್ಷ್ಮಿ ಭುವನೇಶ್ ವೇದಿಕೆಯಲ್ಲಿದ್ದರು. ಈ ಸಂದರ್ಭದಲ್ಲಿ ಸಮಾಜದ 37 ವಿದ್ಯಾರ್ಥಿಗಳಿಗೆ ಒಟ್ಟು 2.75 ಲಕ್ಷ ರೂ.ಪ್ರೋತ್ಸಾಹಧನವನ್ನು ಸಂಘದ ವತಿಯಿಂದ ವಿತರಿಸಲಾಯಿತು. ಸಂಘದ ಪ್ರ.ಕಾರ್ಯದರ್ಶಿ ರಮೇಶ್ ತುಂಬೆ ಪ್ರಸ್ತಾವಿಸಿ, ಸ್ವಾಗತಿಸಿದರು. ಕೋಶಾಧಿಕಾರಿ ಉಮೇಶ್ ಸುವರ್ಣ ವಂದಿಸಿದರು.

More from the blog

ಕರಾವಳಿ ಮರಳು ನೀತಿ ರೂಪಿಸಲು ಒತ್ತಾಯಿಸಿ AICCTU ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ.

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ಮತ್ತು ಕೆಂಪು ಕಲ್ಲು ಗಣಿಗಾರಿಕೆಯನ್ನು ಪೂರ್ತಿಯಾಗಿ ನಿಷೇಧ ಮಾಡಿರುವುದನ್ನು ಪ್ರಗತಿಪರ ದ.ಕ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ...

ನೆತ್ತರಕೆರೆ: ನವೋದಯ ಮಿತ್ರ ಕಲಾ ವೃಂದ (ರಿ) ನೂತನ ಅಧ್ಯಕ್ಷರಾಗಿ ಜಗದೀಶ್ ಎನ್ ಆಯ್ಕೆ..

ಬಂಟ್ವಾಳ : ಪ್ರತಿಷ್ಠಿತ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಸ್ಥೆ, ನವೋದಯ ಮಿತ್ರ ಕಲಾ ವೃಂದ (ರಿ) ನೆತ್ತರಕೆರೆ ಇದರ ವಾರ್ಷಿಕ ಮಹಾಸಭೆಯು ಜೂ 29ರಂದು ಸಂಘದ ಸಭಾಭವನದಲ್ಲಿ ನಡೆದು...

ಕೊಲೆಯತ್ನ ಪ್ರಕರಣ : 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ..

ಬಂಟ್ವಾಳ : ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಬಂಟ್ವಾಳದ ಬಿ ಮೂಡ ಗ್ರಾಮ ನಿವಾಸಿ ಅಕ್ಬರ್ ಸಿದ್ದಿಕ್ ಬಂಧಿತ ಆರೋಪಿ. 2011ನೇ ಸಾಲಿನಲ್ಲಿ ಬಂಟ್ವಾಳ ತುಂಬೆ ಗ್ರಾಮದ ಅರ್ಬನಗುಡ್ಡೆ ಎಂಬಲ್ಲಿ...

‘ಅಂತರಂಗದ ಕೃಷಿ, ಆಧ್ಯಾತ್ಮದ ಕೃಷಿ ಜತೆಗೆಯಾಗಿ ನಡೆಯಬೇಕು’- ಒಡಿಯೂರು ಶ್ರೀ

ವಿಟ್ಲ: ಕೃಷಿ ಎಂಬುದು ಶ್ರೇಷ್ಠವಾಗಿದ್ದು, ಹೃದಯಕ್ಕೂ, ಭೂಮಿಯಲ್ಲಿಯೂ ಕೃಷಿ ನಡೆಯಬೇಕು. ಪ್ರತಿಯೊಂದಕ್ಕೂ ಸಂಸ್ಕಾರ ನೀಡುವ ಕಾರ್ಯವಾದಾಗ ಸುಸೂತ್ರವಾಗಿ ನಡೆಯುತ್ತದೆ. ಅಂತರಂಗದ ಕೃಷಿ, ಆಧ್ಯಾತ್ಮದ ಕೃಷಿ ಜತೆಗೆಯಾಗಿ ನಡೆಯಬೇಕು. ಆಧ್ಯಾತ್ಮದ ಜಾಗೃತಿಯಿಂದ ಬದುಕು ಸುಂದರವಾಗುತ್ತದೆ. ಕಲೆ,...