Tuesday, July 1, 2025

ಬಂಟ್ವಾಳ ಭೂ ಬ್ಯಾಂಕ್ ನಲ್ಲಿ ಮಾಜಿ ಅಧ್ಯಕ್ಷರ ಭಾವಚಿತ್ರ ಅನಾವರಣ

ಬಂಟ್ವಾಳ: ಬಂಟ್ವಾಳ ತಾಲೂಕು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ದಿ ಬ್ಯಾಂಕ್  1963ರಲ್ಲಿ ಸ್ಥಾಪನೆಯಾದ ಬಳಿಕ ಸೇವೆ ಸಲ್ಲಿಸಿದ ಅಧ್ಯಕ್ಷರುಗಳು ಭಾವಚಿತ್ರಗಳ ಅನಾವರಣ ಕಾರ್ಯಕ್ರಮ ನಡೆಯಿತು. ಬ್ಯಾಂಕಿನ ಮಾಜಿ ಅಧ್ಯಕ್ಷ, ಮಾಜಿ ಸಚಿವರಾದ ಬಿ.ರಮಾನಾಥ ರೈ ಅವರು ಭಾವಚಿತ್ರಗಳ ಅನಾವರಣಗೊಳಿಸಿ ಮಾತನಾಡಿ, ರಾಜ್ಯದ 177 ಪಿಎಲ್ ಡಿ ಬ್ಯಾಂಕ್ ಗಳಲ್ಲಿ ಉಭಯ ಜಿಲ್ಲೆಯ ಪಿಎಲ್ ಡಿ  ಬ್ಯಾಂಕ್ ಗಳು ಸಾಲ ವಸೂಲಾತಿಯಲ್ಲಿ ಉತ್ತಮ ಸಾಧನೆಗೈದಿರುವುದು ಅಭಿನಂದನೀಯವಾಗಿದೆ. ರೈತರಿಗೆ ಸಕಾಲದಲ್ಲಿ ಸಾಲನೀಡಿ ಅವರ ಅಭಿವೃದ್ದಿಯಲ್ಲಿಯೂ ಬ್ಯಾಂಕ್ ಮಹತ್ತರವಾದ ಪಾತ್ರ ವಹಿಸಿರುವುದು ಶ್ಲಾಘನೀಯ ಎಂದರು. ಬಂಟ್ವಾಳ ಭೂ ಬ್ಯಾಂಕ್ ನಲ್ಲಿ ಅಧ್ಯಕ್ಷನಾಗಿದ್ದುಕೊಂಡು ರಾಜಕೀಯ ಜೀವನ ಆರಂಭಿಸಿರುವುದನ್ನು ಮೆಲುಕು ಹಾಕಿದ ರೈ ಅವರು ಪ್ರಸ್ತುತ ಬಂಟ್ವಾಳ ಭೂ ಬ್ಯಾಂಕ್ ಸಾಲ ವಸೂಲಾತಿಯಲ್ಲಿ ಜಿಲ್ಲೆಯಲ್ಲೆ ಉತ್ತಮ ಸಾಧನೆಮಾಡಿದ್ದು, ಇದಕ್ಕೆ ಶ್ರಮಿಸಿದ ಬ್ಯಾಂಕಿನ ಆಡಳಿತ ಮಂಡಳಿ, ಸಿಬಂದಿಗಳನ್ನು ಅಭಿನಂದಿಸಿದರು. ಬ್ಯಾಂಕಿನ ಅಧ್ಯಕ್ಷ ಪ್ರಸ್ತಾವಿಸಿ, ಸ್ವಾಗತಿಸಿದರು. ಉಪಾಧ್ಯಕ್ಷ ಸಂಜೀವ ಪೂಜಾರಿ, ಮಾಜಿ ಅಧ್ಯಕ್ಷರುಗಳಾದ ಜಿನರಾಜ ಆರಿಗವೆಂಕಪ್ಪ ಕಾಜವ, ನಿರ್ದೇಶಕರುಗಳಾದ ಮುರಳೀಧರ ಶೆಟ್ಟಿ,ಚಂದ್ರಶೇಖರ ಶೆಟ್ಟಿ, ಹೊನ್ನಪ್ಪ ನಾಯ್ಕ್, ಪರಮೇಶ್ವರ ಎಂ.ಚಮನದ್ರಹಾಸ ಕರ್ಕೇರ, ಸುಜಾತ, ಪುಪ್ಪಾವತಿ, ಕಸ್ಕಾಡ್೯ ಬ್ಯಾಂಕಿನ ಜಿಲ್ಲಾ ವ್ಯವಸ್ಥಾಪಕ ಸುರೇಶ್, ಬ್ಯಾಂಕಿನ ವ್ಯವಸ್ಥಾಪಕ ಶೇಖರ ಎಂ.ವರ್ತಕರ ಬ್ಯಾಂಕಿನ ಅಧ್ಯಕ್ಷ ಸುಭಾಶ್ಚಂದ್ರ ಜೈನ್, ಪ್ರಕಾಶ್ ಬಿ.ಶೆಟ್ಟಿ,ಪದ್ಮನಾಭ ನರಿಂಗಾನ, ಪ್ರಶಾಂತ್ ಕಾಜವ ಮೊದಲಾದವರಿದ್ದರು.ಜಿಪಂ ಸದಸ್ಯ, ನಿರ್ದೇಶಕ ಚಂದ್ರಪ್ರಕಾಶ್ ಶೆಟ್ಟಿ ವಂದಿಸಿದರು.

More from the blog

ಕರಾವಳಿ ಮರಳು ನೀತಿ ರೂಪಿಸಲು ಒತ್ತಾಯಿಸಿ AICCTU ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ.

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ಮತ್ತು ಕೆಂಪು ಕಲ್ಲು ಗಣಿಗಾರಿಕೆಯನ್ನು ಪೂರ್ತಿಯಾಗಿ ನಿಷೇಧ ಮಾಡಿರುವುದನ್ನು ಪ್ರಗತಿಪರ ದ.ಕ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ...

ನೆತ್ತರಕೆರೆ: ನವೋದಯ ಮಿತ್ರ ಕಲಾ ವೃಂದ (ರಿ) ನೂತನ ಅಧ್ಯಕ್ಷರಾಗಿ ಜಗದೀಶ್ ಎನ್ ಆಯ್ಕೆ..

ಬಂಟ್ವಾಳ : ಪ್ರತಿಷ್ಠಿತ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಸ್ಥೆ, ನವೋದಯ ಮಿತ್ರ ಕಲಾ ವೃಂದ (ರಿ) ನೆತ್ತರಕೆರೆ ಇದರ ವಾರ್ಷಿಕ ಮಹಾಸಭೆಯು ಜೂ 29ರಂದು ಸಂಘದ ಸಭಾಭವನದಲ್ಲಿ ನಡೆದು...

ಕೊಲೆಯತ್ನ ಪ್ರಕರಣ : 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ..

ಬಂಟ್ವಾಳ : ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಬಂಟ್ವಾಳದ ಬಿ ಮೂಡ ಗ್ರಾಮ ನಿವಾಸಿ ಅಕ್ಬರ್ ಸಿದ್ದಿಕ್ ಬಂಧಿತ ಆರೋಪಿ. 2011ನೇ ಸಾಲಿನಲ್ಲಿ ಬಂಟ್ವಾಳ ತುಂಬೆ ಗ್ರಾಮದ ಅರ್ಬನಗುಡ್ಡೆ ಎಂಬಲ್ಲಿ...

‘ಅಂತರಂಗದ ಕೃಷಿ, ಆಧ್ಯಾತ್ಮದ ಕೃಷಿ ಜತೆಗೆಯಾಗಿ ನಡೆಯಬೇಕು’- ಒಡಿಯೂರು ಶ್ರೀ

ವಿಟ್ಲ: ಕೃಷಿ ಎಂಬುದು ಶ್ರೇಷ್ಠವಾಗಿದ್ದು, ಹೃದಯಕ್ಕೂ, ಭೂಮಿಯಲ್ಲಿಯೂ ಕೃಷಿ ನಡೆಯಬೇಕು. ಪ್ರತಿಯೊಂದಕ್ಕೂ ಸಂಸ್ಕಾರ ನೀಡುವ ಕಾರ್ಯವಾದಾಗ ಸುಸೂತ್ರವಾಗಿ ನಡೆಯುತ್ತದೆ. ಅಂತರಂಗದ ಕೃಷಿ, ಆಧ್ಯಾತ್ಮದ ಕೃಷಿ ಜತೆಗೆಯಾಗಿ ನಡೆಯಬೇಕು. ಆಧ್ಯಾತ್ಮದ ಜಾಗೃತಿಯಿಂದ ಬದುಕು ಸುಂದರವಾಗುತ್ತದೆ. ಕಲೆ,...