Wednesday, February 12, 2025

ಟಿಪ್ಪು ಜಯಂತಿ ರದ್ದು : ಹಿ.ಜಾ.ವೇ. ಹರ್ಷ

ಬಂಟ್ವಾಳ: ಟಿಪ್ಪು ಜಯಂತಿ ಆಚರಣೆ ರದ್ದು ಮಾಡಿದ ಕ್ರಮ ಸ್ವಾಗತರ್ಹ ಎಂದು ಹೇಳಿದ ಹಿಂದುಜಾಗರಣ ವೇದಿಕೆ.
ಸಮಾಜದ ಸಾಮರಸ್ಯ ಮತ್ತು ಸ್ವಾಸ್ಥ್ಯ ವನ್ನು ಕಳೆದ ಕೆಲವು ದಿನಗಳಿಂದ ಕೆಡಿಸುತ್ತಿದ್ದ ಮತಾಂಧ ಟಿಪ್ಪು ಜಯಂತಿ ಯನ್ನು ಸರಕಾರ ಆಯೋಜಿಸಿ ಆಚರಣೆ ಮಾಡಿಕೊಂಡು ಬರುತ್ತಿದ್ದು ಕರ್ನಾಟಕ ಸರಕಾರಕ್ಕೆ ಕಪ್ಪು ಚುಕ್ಕೆಯಾಗಿ ಪರಿಣಮಿಸಿತ್ತು.
ಇದೀಗ ನೂತನಾವಗಿ ಆಯ್ಕೆ ಯಾದ ಯಡಿಯೂರಪ್ಪ ಸರಕಾರ ಜಯಂತಿಯನ್ನು ರದ್ದುಪಡಿಸಿ ಅದೇಶ ಹೊರಡಿಸಿರುವುದು ಸ್ವಾಭಿಮಾನ ರಾಷ್ಟ್ರ ಭಕ್ತ ಹೋರಾಟ ಗಾರರಿಗೆ ಸಿಕ್ಕಿದ ಜಯ ಎಂದು ಹೇಳಿದ್ದಾರೆ.
ಜೊತೆಗೆ ಟಿಪ್ಪು ವಿರೋಧಿ ಅಂದೋಲನದಲ್ಲಿ ಭಾಗಿಯಾದ ಹುತಾತ್ಮರ ಬಲಿದಾನವೂ ವ್ಯರ್ಥವಾಗಿಲ್ಲ ಎಂದು ಹಿಂದೂ ಜಾಗರಣಾ ವೇದಿಕೆ ಬಂಟ್ವಾಳ ಘಟಕ ಹೇಳಿದ್ದಲ್ಲದೆ ಯಡಿಯೂರಪ್ಪ ಅವರ ಸರಕಾರಕ್ಕೆ ಕೃತಜ್ಞತೆ ಸಲ್ಲಿಸಿದೆ.
ಅಲ್ಲದೆ ಟಿಪ್ಪು ಜಯಂತಿ ಆಚರಣೆ ವಿರುದ್ಧ ನಡೆದ ಅಂದೋಲನದಲ್ಲಿ ಭಾಗಿಯಾದ ಯುವಕರ ಮೇಲೆ ಅಂದಿನ ಸರಕಾರ ಹಾಕಿರುವ ಕೇಸನ್ನು ಸರಕಾರ ವಾಪಾಸು ಪಡೆಯುವಂತೆ ಹಿ.ಜಾ.ವೇ ಮಂಗಳೂರು ವಿಭಾಗ ಪ್ರಧಾನ ಕಾರ್ಯದರ್ಶಿ ರವಿರಾಜ್ ಬಿಸಿರೋಡು ಹಾಗೂಬಂಟ್ವಾಳ ಹಿಂ.ಜಾವೇ ಬಂಟ್ವಾಳ ತಾಲೂಕು ಅಧ್ಯಕ್ಷರಾದ ಚಂದ್ರ ಕಲಾಯಿ ಹಾಗೂ ಬಂಟ್ವಾಳ ವಿಭಾಗದ ಕಾರ್ಯದರ್ಶಿ ಪ್ರಶಾಂತ್ ಕೆಂಪುಗುಡ್ಡೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

More from the blog

ಅಕ್ರಮ ಮಸೀದಿ ನಿರ್ಮಾಣ ಆರೋಪ: ಕರಿಯಂಗಳ ಗ್ರಾ.ಪಂ.ಗೆ ಮುತ್ತಿಗೆ

ಬಂಟ್ವಾಳ: ಗ್ರಾಮ ಪಂಚಾಯತ್ ಅನುಮತಿ ಇಲ್ಲದೆ ಅಕ್ರಮವಾಗಿ ಸರಕಾರಿ ಜಾಗದಲ್ಲಿ ಕಟ್ಟಡ ನಿರ್ಮಿಸಿ ಅದರಲ್ಲಿ ಮದರಸ ಮಾಡಲು ಮುಂದಾಗಿದ್ದರೆ ಎಂದು ಆರೋಪಿಸಿದ ಗ್ರಾಮಸ್ಥರು ಇದನ್ನು ತಡೆಯುವಂತೆ ಗ್ರಾಮ ಪಂಚಾಯತ್ ಗೆ ಮುತ್ತಿಗೆ ಹಾಕಿದ...

ಪುರಸಭೆ ಎಡವಿದೆಲ್ಲಿ? ಬ್ಯಾನರ್ ವಿವಾದ!

ಬಂಟ್ವಾಳ: ಬಂಟ್ವಾಳ ಪುರಸಭೆ ನಿಯಮ ಉಲ್ಲಂಘಿಸಿ ಹಾಕಲಾದ ಫ್ಲೆಕ್ಸ್ ತೆರವು ಕಾರ್ಯಾಚರಣೆಯನ್ನು ತಡವಾಗಿ ಪ್ರಾರಂಭಿಸಿದೆ. ಜನವರಿ 29ರಂದು ಪುರಸಭೆಯ ಸಾಮಾನ್ಯ ಸಭೆಯಲ್ಲಿ ಈ ಕುರಿತು ಪುರಸಭೆಯ ಮುಖ್ಯಾಧಿಕಾರಿ ತೆರವು ಕಾರ್ಯಾಚರಣೆ ನಡೆಸುವುದಾಗಿ ಘೋಷಿಸಿ,...

ಸರಕಾರಿಯೋ, ತಾ.ಪಂ.ಗೆ ಸೇರಿದ ಜಾಗವೋ? ಇದೊಂದು ಬೇಲಿಯ ಕಥೆ!

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಗಳ ಮೂಲಕ ಬೇಲಿ ಹಾಕಿದ್ದು, ಇದಿಗ ಈ ಜಾಗವು ಸರಕಾರಿ ಯೋ, ಅಥವಾ ತಾಲೂಕು ಪಂಚಾಯತ್ ಗೆ ಸೇರಿದ್ದೊ ಎಂಬ ಚರ್ಚೆಗೆ...

ನಂದಾವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಪ್ರಭಾಕರ್ ಶೆಟ್ಟಿ ಆಯ್ಕೆ

ಬಂಟ್ವಾಳ: ತಾಲೂಕಿನ ಸಜೀಪಮಾಗಣೆಯ ಪ್ರಧಾನ ದೇವಾಲಯ ಪಾಣೆಮಂಗಳೂರಿಗೆ ಸಮೀಪದ ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುಗಾಂಭ ಕ್ಷೇತ್ರದ ನೂತನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಕಾಂತಾಡಿಗುತ್ತು ಪ್ರಭಾಕರ ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ. ಉಳಿದಂತೆ ಸಮಿತಿ ಸದಸ್ಯರಾಗಿ...