Saturday, January 31, 2026

ಟಿಪ್ಪು ಜಯಂತಿ ರದ್ದು : ಹಿ.ಜಾ.ವೇ. ಹರ್ಷ

ಬಂಟ್ವಾಳ: ಟಿಪ್ಪು ಜಯಂತಿ ಆಚರಣೆ ರದ್ದು ಮಾಡಿದ ಕ್ರಮ ಸ್ವಾಗತರ್ಹ ಎಂದು ಹೇಳಿದ ಹಿಂದುಜಾಗರಣ ವೇದಿಕೆ.
ಸಮಾಜದ ಸಾಮರಸ್ಯ ಮತ್ತು ಸ್ವಾಸ್ಥ್ಯ ವನ್ನು ಕಳೆದ ಕೆಲವು ದಿನಗಳಿಂದ ಕೆಡಿಸುತ್ತಿದ್ದ ಮತಾಂಧ ಟಿಪ್ಪು ಜಯಂತಿ ಯನ್ನು ಸರಕಾರ ಆಯೋಜಿಸಿ ಆಚರಣೆ ಮಾಡಿಕೊಂಡು ಬರುತ್ತಿದ್ದು ಕರ್ನಾಟಕ ಸರಕಾರಕ್ಕೆ ಕಪ್ಪು ಚುಕ್ಕೆಯಾಗಿ ಪರಿಣಮಿಸಿತ್ತು.
ಇದೀಗ ನೂತನಾವಗಿ ಆಯ್ಕೆ ಯಾದ ಯಡಿಯೂರಪ್ಪ ಸರಕಾರ ಜಯಂತಿಯನ್ನು ರದ್ದುಪಡಿಸಿ ಅದೇಶ ಹೊರಡಿಸಿರುವುದು ಸ್ವಾಭಿಮಾನ ರಾಷ್ಟ್ರ ಭಕ್ತ ಹೋರಾಟ ಗಾರರಿಗೆ ಸಿಕ್ಕಿದ ಜಯ ಎಂದು ಹೇಳಿದ್ದಾರೆ.
ಜೊತೆಗೆ ಟಿಪ್ಪು ವಿರೋಧಿ ಅಂದೋಲನದಲ್ಲಿ ಭಾಗಿಯಾದ ಹುತಾತ್ಮರ ಬಲಿದಾನವೂ ವ್ಯರ್ಥವಾಗಿಲ್ಲ ಎಂದು ಹಿಂದೂ ಜಾಗರಣಾ ವೇದಿಕೆ ಬಂಟ್ವಾಳ ಘಟಕ ಹೇಳಿದ್ದಲ್ಲದೆ ಯಡಿಯೂರಪ್ಪ ಅವರ ಸರಕಾರಕ್ಕೆ ಕೃತಜ್ಞತೆ ಸಲ್ಲಿಸಿದೆ.
ಅಲ್ಲದೆ ಟಿಪ್ಪು ಜಯಂತಿ ಆಚರಣೆ ವಿರುದ್ಧ ನಡೆದ ಅಂದೋಲನದಲ್ಲಿ ಭಾಗಿಯಾದ ಯುವಕರ ಮೇಲೆ ಅಂದಿನ ಸರಕಾರ ಹಾಕಿರುವ ಕೇಸನ್ನು ಸರಕಾರ ವಾಪಾಸು ಪಡೆಯುವಂತೆ ಹಿ.ಜಾ.ವೇ ಮಂಗಳೂರು ವಿಭಾಗ ಪ್ರಧಾನ ಕಾರ್ಯದರ್ಶಿ ರವಿರಾಜ್ ಬಿಸಿರೋಡು ಹಾಗೂಬಂಟ್ವಾಳ ಹಿಂ.ಜಾವೇ ಬಂಟ್ವಾಳ ತಾಲೂಕು ಅಧ್ಯಕ್ಷರಾದ ಚಂದ್ರ ಕಲಾಯಿ ಹಾಗೂ ಬಂಟ್ವಾಳ ವಿಭಾಗದ ಕಾರ್ಯದರ್ಶಿ ಪ್ರಶಾಂತ್ ಕೆಂಪುಗುಡ್ಡೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

More from the blog

ಸಾರಿಗೆ ಬಸ್‌ಗಳ ಮೇಲೆ, ನಿಲ್ದಾಣದಲ್ಲಿ ತಂಬಾಕು ಜಾಹೀರಾತು ತೆರವಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ

ಬೆಂಗಳೂರು: ಸಾರಿಗೆ ಬಸ್, ಬಸ್ ನಿಲ್ದಾಣಗಳಲ್ಲಿ ತಂಬಾಕು ಉತ್ಪನ್ನಗಳ ಜಾಹೀರಾತುಗಳನ್ನು ಪ್ರದರ್ಶಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕರ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಸಾರಿಗೆ...

ವಿಕಾಸ್ ಪುತ್ತೂರು ಅವರಿಗೆ ನೀಡಿದ ನೋಟಿಸ್ ಇಲಾಖೆಯ ಕಣ್ಣು ತಪ್ಪಿನಿಂದ ಆಗಿದ್ದಂತೆ!!!!

ಬಂಟ್ವಾಳ: ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಜೆಪಿ ಯುವ ನಾಯಕ ವಿಕಾಸ್ ಪುತ್ತೂರು ಅವರಿಗೆ ದ್ವೇಷ ಭಾಷಣದ ಆರೋಪದ ಮೇಲೆ ಪೋಲೀಸ್ ಇಲಾಖೆ ನೀಡಿದ ನೋಟಿಸ್ ನ ವಿರುದ್ದ ಅಧಿವೇಶನದಲ್ಲಿ ವಿಧಾನ ಪರಿಷತ್ತು ಸದಸ್ಯ...

ಮಂಗಳೂರು : ಸ್ಟ್ರೀಟ್ ಫುಡ್ ಫೆಸ್ಟ್ ಗೆ ಚಾಲನೆ

ಮಂಗಳೂರು : ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಶುಕ್ರವಾರ ಚಾಲನೆ ನೀಡಲಾಯಿತು. ನಗರದ ಕದ್ರಿ ಪಾರ್ಕ್ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಖ್ಯಾತ ಚೆಫ್ ಶ್ರೀಯಾ...

Bantwal : ಫೆ.1ರಂದು ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರು ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ಫೆ.1ರಂದು ಭಾನುವಾರ ನಡೆಯಲಿದೆ. 2023-24...