Tuesday, February 3, 2026

ಕ್ರಿಯಾಶೀಲತೆ ಹೆಚ್ಚಿಸುವ ಅತ್ಯತ್ತುಮ ವೇದಿಕೆ; ಶಾಸಕ ನಾಯ್ಕ್

ಬಂಟ್ವಾಳ: ಶಿಕ್ಷಣ ಕೇವಲ ಅಂಕಗಳಿಕೆಗೆ ಸೀಮಿತವಾಗದೇ, ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಪ್ರೇರೇಪಣೆ ನೀಡುವಂತಿರಬೇಕು, ಪ್ರತಿಭಾಕಾರಂಜಿ ವಿದ್ಯಾರ್ಥಿಗಳ ಕ್ರಿಯಾಶೀಲತೆ ಹೆಚ್ಚಿಸುವ ಅತ್ಯುತ್ತಮ ವೇದಿಕೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಹೇಳಿದರು.
ಬಂಟ್ವಾಳ ಎಸ್. ವಿ.ಎಸ್ ದೇವಳ  ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶುಕ್ರವಾರ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ತಾಲೂಕು ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.ತನ್ನ ತಾಯಿ,ಮಾವ 70 ವರ್ಷಗಳ ಹಿಂದೆ  ಇದೇ ಎಸ್ ವಿ ಎಸ್ ಕನ್ನಡ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಗಳಾಗಿದ್ದರು.ಈ ಶಿಕ್ಷಣ ಸಂಸ್ಥೆಯಲ್ಲಿ ಕಲಿತ ತನ್ನ ಮಾವ ವೈದ್ಯರಾಗಿದ್ದರು.ತಾಯಿ  ಬಂಟ್ವಾಳ ಅಂದಾಕ್ಷಣ ಈ ಶಾಲೆಯನ್ನು  ಈಗಲು ನೆನಪಿಸುತ್ತಾರೆ ಹಾಗಾಗಿ ತನಗೂ  ಬಂಟ್ವಾಳದ ನಂಟು ಬೆಳೆಯಿತು  ಇಲ್ಲಿ ನ ಜನರ ಆಶೀರ್ವಾದದಿಂದ ಶಾಸಕನಾಗುವ ಭಾಗ್ಯ ಸಿಕ್ಕಿತು ಎಂದು ಮೆಲುಕು ಹಾಕಿದರು.   ಶ್ರೀ  ವೆಂಕಟರಮಣ ದೇವಳದ ಆಡಳಿತ ಮೊಕ್ತೇಸರ ಪುರುಷೋತ್ತಮ ಶೆಣ್ಯೆ ಅಧ್ಯಕ್ಷತೆ ವಹಿಸಿ ಶುಭ ಹಾರೈಸಿದರು.
ವೇದಿಕೆಯಲ್ಲಿ ಶಿಕ್ಷಣ ಸಂಯೋಜಕಿ ಸುಶೀಲಾ,ಶಾಲಾ ಸಂಚಾಲಕರಾದ ಎ. ಗೋವಿಂದ ಪ್ರಭು, ಆಡಳಿತ ಮಂಡಳಿ ಸದಸ್ಯ ಶ್ರೀನಿವಾಸ್ ಪೈ,ಶಾಲಾ ಮುಖ್ಯೋಪಾಧ್ಯಾಯರಾದ ರೋಶನಿ ಡಿ’ಸೋಜ, ಕುಸುಮಾವತಿ ಉಪಸ್ಥಿತರಿದ್ದರು.
ಶಿಕ್ಷಣ ಸಂಯೋಜಕಿ ಸುಶೀಲ ಸ್ವಾಗತಿಸಿದರು. ಶಿಕ್ಷಕ ಮುರಳೀಧರ್ ಪ್ರಸ್ತಾವನೆಗೈದರು.
 ಸಿ.ಆರ್. ಪಿ ರೇಷ್ಮಾ ವಂದಿಸಿದರು. ದೈಹಿಕ ಶಿಕ್ಷಕ ಚಂದ್ರಹಾಸ ಕಾರ್ಯಕ್ರಮ ನಿರ್ವಹಿಸಿದರು. 22 ಶಾಲೆಯ ವಿದ್ಯಾರ್ಥಿಗಳು ಇದರಲ್ಲಿ ಭಾಗವಹಿಸಿದ್ದರು.

More from the blog

B.C.Road : ಮಹಿಳಾ ಮತ್ತು ಮಕ್ಕಳ ಸಂಭ್ರಮೋತ್ಸವ..

ಬಂಟ್ವಾಳ : ಜೀವನದ ಪ್ರತೀ ಕ್ಷಣದಲ್ಲಿ ಮಹಿಳೆಯರು ಸಂತೋಷ-ಸಂತಸ‌ ಪಡೆಯುವ ಸನ್ನಿವೇಶಗಳು ಸಮಾಜದಲ್ಲಿ ನಿರ್ಮಾಣಗೊಳ್ಳಲಿ ಎಂದು ಹಿರಿಯ ವಕೀಲ ಅಶ್ವನಿ‌ ಕುಮಾರ್ ರೈ ಹೇಳಿದರು. ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ‌ ಸಂಸ್ಥೆ ಮತ್ತು...

ಮಡಂತ್ಯಾರು : ನಕಲಿ ಚಿನ್ನದ ಸರ ಅಡವಿಟ್ಟು ವಂಚನೆ – ಇಬ್ಬರ ಬಂಧನ

ಬಂಟ್ವಾಳ: ಲಕ್ಷಾಂತರ ರೂ ಸಾಲ ಪಡೆಯುವ ಉದ್ದೇಶದಿಂದ ನಕಲಿ ಚಿನ್ನದ ಸರವನ್ನು ಅಡವಿಡಲು ಸಹಕಾರಿ ಸಂಘವೊಂದಕ್ಕೆ ಬಂದ ಇಬ್ಬರು ಆರೋಪಿಗಳು ಪೋಲೀಸರ ಅತಿಥಿಯಾಗಿದ್ದಾರೆ. ಮಡಂತ್ಯಾರು ಎಂಬಲ್ಲಿರುವ ಒಡಿಯೂರು ಶ್ರೀ ವಿವಿದ್ದೋದೇಶ ಸೌಹಾರ್ದ ಸಹಕಾರಿ ಸಂಘಕ್ಕೆ...

ಮಾಣಿ : ಪೈಪ್ ಲೈನ್ ಕಾಮಗಾರಿಯಿಂದ ಹದಗೆಟ್ಟ ರಸ್ತೆ – ಪ್ರತಿಭಟನೆಗೆ ಮುಂದಾದ ನಾಗರಿಕರು 

ವಿಟ್ಲ: ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಪೈಪ್ ಲೈನ್ ಕಾಮಗಾರಿ ನಡೆಸುವ ವೇಳೆ ಮಾಣಿ ಗ್ರಾಮದ ಅರ್ಬಿ ಪ್ರದೇಶದಲ್ಲಿ ರಸ್ತೆಯನ್ನು ಅಗೆದು ಅದರ ಮಧ್ಯ ಭಾಗದಲ್ಲಿ ಪೈಪ್ ಅಳವಡಿಕೆ ಮಾಡಿ ವ್ಯವಸ್ಥಿತವಾಗಿ ಅದನ್ನು...

B.C. Road : FTM ತರಬೇತಿ ಮತ್ತು ಅಭಿಯಾನ ಕಾರ್ಯಕ್ರಮ..

ಬಂಟ್ವಾಳ: ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ , ಜಿಲ್ಲಾ ಪ್ರಯೋಗಾಲಯ ಮಂಗಳೂರು ಇವರ ವತಿಯಿಂದ, ಗ್ರಾ.ಪಂ.ಅಧ್ಯಕ್ಷರುಗಳು,ಸದಸ್ಯರುಗಳು, ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರಿಗೆ FTM ತರಬೇತಿ ಮತ್ತು...