Wednesday, February 12, 2025

ಕಾಶ್ಮೀರ ಭಾರತದ ಅವಿಭಾಜ್ಯ ಅಂಗ ಪ್ರಧಾನಿ ಮೋದಿ ನಿರ್ಧಾರ ಸಂತಸದ ಕ್ಷಣ: ರಾಜೇಶ್ ನಾಯ್ಕ್

ಬಂಟ್ವಾಳ : ಆರ್ಟಿಕಲ್ 370 ಮತ್ತು 35(ಎ) ರದ್ದು ಆದೇಶವನ್ನು ಸ್ವಾಗತಿಸಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು .
ಅವರ ಕಚೇರಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು ಇನ್ಮುಂದೆ ಭಾರತದ ಸಂವಿಧಾನ ಕಾಶ್ಮೀರಕ್ಕೆ ಅನ್ವಯವಾಗುತ್ತದೆ.
ಅಂದಿನ ನಾಯಕರು ಯಾವ ಉದ್ದೇಶದಿಂದ ಪಕ್ಷವನ್ನು ಕಟ್ಟಿದ್ದಾರೋ ಅದು ಈ ದಿನ ನೆರವೇರಿತು. ಇದಕ್ಕಿಂತ ದೊಡ್ಡ ಸಂತೋಷ ನನಗೆ ಇಲ್ಲ ಎಂದು ಅವರು ಹೇಳಿದರು.
ನೆಹರೂ ರವರ ಸಚಿವ ಸಂಪುಟದದಲ್ಲಿ ಕೈಗಾರಿಕಾ ಮಂತ್ರಿಯನ್ನು ತ್ಯಜಿಸಿ ಹೊರ ಬಂದ ಡಾ| ಶ್ಯಾಮಪ್ರಸಾದ್ ಮುಖರ್ಜಿಯವರ ಚಿಂತನೆ ಕನಸು ಇಂದು ಈಡೇರಿತು.
ಕಾಶ್ಮೀರ ಭಾರತದ ಅವಿಭಾಜ್ಯ ಅಂಗವಾಗಬೇಕು ಎಂಬ ಮಹತ್ವದ ನಿರ್ಧಾರ ದ ಮೂಲಕ “ಏಕ್ ದೇಶ್ ದೋ ವಿಧಾನ್ ದೋ ಪ್ರಧಾನ್ ದೋ ನಿಶಾನ್ ನಹಿ ಚಲೇಗೆ ನಹಿ ಚಲೇಗೆ” ಎಂಬ ಘೋಷಣೆಯೊಂದಿಗೆ ಅಂದಿನ ಕಾಲದಲ್ಲಿ ಕಾಂಗ್ರೇಸ್ ಪಕ್ಷದಿಂದ ಹೊರಬಂದು ಜನಸಂಘ ಎಂಬ ಪಕ್ಷವನ್ನು ಕಟ್ಟಿ ದ ಅವರ ಕನಸಿಗೆ ಸಾಕಾರನೀಡಿದ ಕಾಶ್ಮೀರದ ವಿಶೇಷ ಅಧಿಕಾರ ರದ್ದು ಮಾಡಿದ ನರೇಂದ್ರ ಮೋದಿಯವರ ಸರಕಾರದ ಅವಧಿಯಲ್ಲಿ ನಾನು ಶಾಸಕನಾಗಿರುವುದು ಅತ್ಯಂತ ಸಂತಸದ ಕ್ಷಣವಾಗಿದೆ.
ಹಾಗೂ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಸಂಪುಟದ ಮಂತ್ರಿ, ಸಂಸದರಿಗೆ ಅಭಿನಂದನೆ ಎಂದು ಅವರು ಹೇಳಿದರು.

More from the blog

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...

ನೇಣು ಬಿಗಿದು ಯುವಕ ಆತ್ಮಹತ್ಯೆ

ಬಂಟ್ವಾಳ: ಖಿನ್ನತೆಯಿಂದ ಅವಿವಾಹಿತ ವ್ಯಕ್ತಿಯೊರ್ವನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಮ್ಟಾಡಿ ನಿವಾಸಿ ಮೆಕ್ಸಿನ್ ತಾವ್ರೋ ಅವರ ಮಗ ಜೀವನ್  ತಾವ್ರೋ ( 37) ಆತ್ಮಹತ್ಯೆ ಮಾಡಿಕೊಂಡ ಯುವಕ. ‌‌‌ಜೀವನ್ ಅವರು ಅಗಾಗ...