Wednesday, February 12, 2025

ಗಿಡಮೂಲಿಕಾ ದಿನಾಚರಣೆ, ಔಷದೀಯ ಸಸಿಗಳ ವಿತರಣೆ

ಬಂಟ್ವಾಳ: ಭಾರತ್ ಸ್ವಾಭಿಮಾನ್ ಟ್ರಸ್ಟ್, ಪತಂಜಲಿ ಯೋಗ ಸಮಿತಿ ವತಿಯಿಂದ ಗಿಡಮೂಲಿಕ ದಿನಾಚರಣೆ ಹಾಗೂ ಔಷಧಿಯ ಸಸಿಗಳ ವಿತರಣಾ ಕಾರ್ಯಕ್ರಮ ಮಂಚಿ ಲಯನ್ಸ್ ಸೇವಾಮಂದಿರದಲ್ಲಿ ನಡೆಯಿತು.   ಲಯನ್.ಡಾ.ಗೋಪಾಲ್ ಆಚಾರ್ ಸಭಾಧ್ಯಕ್ಷತೆ ವಹಿಸಿದ್ದರು. ಪತಂಜಲಿ ಯೋಗ ಸಮಿತಿಯ ರಾಜ್ಯ ಪ್ರಭಾರಿ ಡಾ.ಜ್ಙಾನೇಶ್ವರನಾಯಕ್ ಅವರು ಪತಂಜಲಿಯೋಗ ಪೀಠ ಹಾಗೂ ಆಚಾರ್ಯ ಬಾಲಕೃಷ್ಣಜೀಯವರ ಸಾಧನೆಯ ಬಗ್ಗೆ ಮಾಹಿತಿ ನೀಡಿದರು.

ಗಾಯತ್ರಿ ಮಹಂದಳೆ ಔಷಧೀಯ ಸಸ್ಯಗಳ ಮಾಹಿತಿ ಮತ್ತು ಉಪಯುಕ್ತತೆಯ ಬಗ್ಗೆ ವಿವರಿಸಿದರು.ಈ ಸಂದರ್ಭ ಹಿರಿಯ ಆರ್ಯವೇದ ವೈದ್ಯ ಗಣಪತಿ ಭಟ್ ಕುಕ್ಕಾಜೆ,ಗಾಯತ್ರಿ ಮಹಂದಳೆ ಅವರನ್ನು ಗೌರವಿಸಲಾಯಿತು.

ಪತಂಜಲಿ ಯೋಗ ಸಮಿತಿ ಪದಾಧಿಕಾರಿಗಳಾದ ರಾಘವೇಂದ್ರಜೀ,ಸುಜಾತಾ ಮಾರ್ಲ,ಕೇಶವ ಮಾರ್ಲ,ಸರಸ್ವತಿಜೀ,ಪ್ರದೀಪ್ ಜೀ,ಪ್ರಭಾಕರಜೀಯೋಗಶಿಕ್ಷಕರಾದ ಪದ್ಮನಾಭ ಸಾಲ್ಯಾನ್,ಲೋಕೇಶ್ ಪೂಜಾರಿ ಮೊದಲಾದವರಿದ್ದರು.ರಮೇಶ್ ರಾವ್ ಸ್ವಾಗತಿಸಿ,ಯಶೋದಾ ಬಿ ಶೆಟ್ಟಿ ವಂದಿಸಿದರು.ಮಂಜುಳಾ ಕಾರ್ಯಕ್ರಮ ನಿರೂಪಿಸಿದರು.

More from the blog

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...

ನೇಣು ಬಿಗಿದು ಯುವಕ ಆತ್ಮಹತ್ಯೆ

ಬಂಟ್ವಾಳ: ಖಿನ್ನತೆಯಿಂದ ಅವಿವಾಹಿತ ವ್ಯಕ್ತಿಯೊರ್ವನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಮ್ಟಾಡಿ ನಿವಾಸಿ ಮೆಕ್ಸಿನ್ ತಾವ್ರೋ ಅವರ ಮಗ ಜೀವನ್  ತಾವ್ರೋ ( 37) ಆತ್ಮಹತ್ಯೆ ಮಾಡಿಕೊಂಡ ಯುವಕ. ‌‌‌ಜೀವನ್ ಅವರು ಅಗಾಗ...

ಅಕ್ರಮ ಮಸೀದಿ ನಿರ್ಮಾಣ ಆರೋಪ: ಕರಿಯಂಗಳ ಗ್ರಾ.ಪಂ.ಗೆ ಮುತ್ತಿಗೆ

ಬಂಟ್ವಾಳ: ಗ್ರಾಮ ಪಂಚಾಯತ್ ಅನುಮತಿ ಇಲ್ಲದೆ ಅಕ್ರಮವಾಗಿ ಸರಕಾರಿ ಜಾಗದಲ್ಲಿ ಕಟ್ಟಡ ನಿರ್ಮಿಸಿ ಅದರಲ್ಲಿ ಮದರಸ ಮಾಡಲು ಮುಂದಾಗಿದ್ದರೆ ಎಂದು ಆರೋಪಿಸಿದ ಗ್ರಾಮಸ್ಥರು ಇದನ್ನು ತಡೆಯುವಂತೆ ಗ್ರಾಮ ಪಂಚಾಯತ್ ಗೆ ಮುತ್ತಿಗೆ ಹಾಕಿದ...

ಪುರಸಭೆ ಎಡವಿದೆಲ್ಲಿ? ಬ್ಯಾನರ್ ವಿವಾದ!

ಬಂಟ್ವಾಳ: ಬಂಟ್ವಾಳ ಪುರಸಭೆ ನಿಯಮ ಉಲ್ಲಂಘಿಸಿ ಹಾಕಲಾದ ಫ್ಲೆಕ್ಸ್ ತೆರವು ಕಾರ್ಯಾಚರಣೆಯನ್ನು ತಡವಾಗಿ ಪ್ರಾರಂಭಿಸಿದೆ. ಜನವರಿ 29ರಂದು ಪುರಸಭೆಯ ಸಾಮಾನ್ಯ ಸಭೆಯಲ್ಲಿ ಈ ಕುರಿತು ಪುರಸಭೆಯ ಮುಖ್ಯಾಧಿಕಾರಿ ತೆರವು ಕಾರ್ಯಾಚರಣೆ ನಡೆಸುವುದಾಗಿ ಘೋಷಿಸಿ,...