Tuesday, July 15, 2025

ಬಂಟ್ವಾಳದ ನದಿ ತೀರದ ಮುಳುಗಡೆ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ಭೇಟಿ

ಬಂಟ್ವಾಳ: ನೇತ್ರಾವತಿ ನದಿ ತೀರದ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು ಈ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ಮಂಗಳೂರು ಆಯುಕ್ತ ರವಿ ಚಂದ್ರ ನಾಯಕ್ ಹಾಗೂ ಬಂಟ್ವಾಳ ತಹಶೀಲ್ದಾರ್ ರಶ್ಮಿ. ಎಸ್.ಆರ್.ಬೇಟಿ ನೀಡಿ ಪರಿಶೀಲನೆ ನಡೆಸಿ ದರು.
ಬಂಟ್ವಾಳ, ಬಡ್ಡಕಟ್ಟೆ, ಜಕ್ರಿಬೆಟ್ಟು, ಪಾಣೆಮಂಗಳೂರು , ಆಲಡ್ಕ, ಕಂಚಿಕಾರ್ ಪೇಟೆ ಮುಂತಾದ ಪ್ರದೇಶಗಳಿಗೆ ಬೇಟಿ ನೀಡಿ ಅಲ್ಲಿ ನ ನಿವಾಸಿಗಳಿಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಮತ್ತು ಯಾವುದೇ ಸಂದರ್ಭದಲ್ಲಿ ಅಧಿಕಾರಿಗಳನ್ನು ಸಂಪರ್ಕ ಮಾಡುವಂತೆ ತಿಳಿಸಿದರು.

ನೇತ್ರಾವತಿ ನದಿಯಲ್ಲಿ ನೀರು ಉಕ್ಕಿ ಹರಿಯುತ್ತಿದ್ದು ನೀರಿನ ಮಟ್ಟ 8.8 ಮೀ ಅಗಿದೆ ಎಂದು ತಹಶೀಲ್ದಾರ್ ಕಚೇರಿ ಮೂಲಗಳು ತಿಳಿಸಿದೆ.
ಮಳೆ ಕಡಿಮೆಯಾಗಿದ್ದರೂ ಕೂಡಾ ನೀರಿನ ಮಟ್ಟ ಏರಿಕೆ ಯಾಗುತ್ತಿದೆ.
ಈಗಾಗಲೇ ಶಂಭೂರು ಎ.ಎಂ.ಆರ್ ಡ್ಯಾಂ ನ 17 ಗೇಟ್ ಗಳ ತೆರವು ಮಾಡಲಾಗಿದೆ ಎಂದು ಅಧಿಕೃತ ಮಾಹಿತಿ.
ಎ.ಎಂ.ಆರ್.ನ ಗೇಟ್ ತೆರವಿನ ಸಂದರ್ಭದಲ್ಲಿ ಸೈರನ್ ಮೊಳಗಿಸಲಾಗಿದೆ. ಗೇಟ್ ತೆರವಾದ ಬಳಿಕ ನೇತ್ರಾವತಿ ನೀರಿನ ಮಟ್ಟ ಏರಿಕೆಯಾಗುತ್ತಿದೆ ಎಂದು ಸ್ಥಳೀಯರು ಹೇಳುತ್ತಿದ್ದಾರೆ.
ಸಂಜೆಯ ವೇಳೆ ನೀರಿನ ಮಟ್ಟ ಕಡಿಮೆಯಾಗಬಹುದು ಮತ್ತೆ ರಾತ್ರಿಯ ವೇಳೆ ನೀರು ಏರಿಳಿಕೆ ಕಾಣಬಹುದು ಎಂದು ಹೇಳುತ್ತಾರೆ.
ಯಾವುದಕ್ಕೂ ನದಿ ತೀರದ ನಿವಾಸಿಗಳು ಎಚ್ಚರಿಕೆಯಿಂದ ಇರಬೇಕಾಗಿದೆ ಎಂದು ಸ್ಥಳೀಯ ನಿವಾಸಿಗಳು ಹೇಳುತ್ತಾರೆ.
ಘಟ್ಟ ಪ್ರದೇಶಗಳಲ್ಲಿ ಮಳೆ ನಿರಂತರವಾಗಿ ಸುರಿಯುತ್ತಿರುವುದರಿಂದ ನದಿ ತೀರದಲ್ಲಿ ವಾಸಿಸುವ ಜನರು ಹೆಚ್ಚು ಜಾಗರೂಕತೆಯಿಂದ ಇರಬೇಕು ಎಂದು ಹೇಳುತ್ತಾರೆ.

 

More from the blog

ಒಡಿಯೂರು ಶ್ರೀ ಜನ್ಮದಿನೋತ್ಸವ ಸೇವಾ ಸಂಭ್ರಮದ ಅಂಗವಾಗಿ ಬೃಹತ್ ಉಚಿತ ವೈದ್ಯಕೀಯ ಶಿಬಿರ

ವಿಟ್ಲ : ನಮ್ಮ ಶಾರೀರಿಕ ಮತ್ತು ಮಾನಸಿಕ ಆರೋಗ್ಯ ಬದುಕಿನ ಉತ್ತುಂಗಕ್ಕೆ ಕಾರಣವಾಗುತ್ತದೆ. ಬದುಕು ಪೂರ್ತಿ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಋತುವಿಗನುಗುಣವಾಗಿ ಹಿತ, ಮಿತ ಆಹಾರ ಸೇವಿಸಿದಾಗ ಉತ್ತಮ ಆರೋಗ್ಯ ಪಡೆಯಬಹುದು...

ಧನಾತ್ಮಕ ಚಿಂತನೆಗಳಿಂದ ಮಾತ್ರ ಉತ್ತಮ ಕಾರ್ಯಗಳು ನಡೆಯಲು ಸಾಧ್ಯ- ಮಾಣಿಲಶ್ರೀ

ವಿಟ್ಲ: ನಮ್ಮ ಕಣ್ಣುಗಳಿಗೆ ಕಾಣದಿರುವ ಶಕ್ತಿಯೇ ದೇವರು. ದೇವರನ್ನು ಬಿಟ್ಟು ನಾವು ಯಾವ ಕಾರ್ಯವನ್ನೂ ಮಾಡಿದರೂ ನಿಷ್ಪ್ರಯೋಜಕ. ಉಸಿರು ಇದ್ದಷ್ಟು ದಿನ ಲೋಕಹಿತ ಕಾರ್ಯ ಮಾಡಬೇಕು. ಧನಾತ್ಮಕ ಚಿಂತನೆಗಳಿಂದ ಮಾತ್ರ ಉತ್ತಮ ಕಾರ್ಯಗಳು...

ನೈಸರ್ಗಿಕ ವಿಪತ್ತುಗಳಿಗೆ ಮೂಲ ಕಾರಣವೆ ಅರಣ್ಯ ನಾಶ : ಮನೋಜ್ ಮಿನೇಜಸ್ 

ಬಂಟ್ವಾಳ: ನೈಸರ್ಗಿಕ ವಿಪತ್ತುಗಳಿಗೆ  ಮೂಲ ಕಾರಣವೆ ಅರಣ್ಯನಾಶ. ಜಲ ನೆಲ ಪ್ರಾಣಿ ಸಂಕುಲಗಳು ದೇವರ ಆಸ್ತಿ ಅವುಗಳನ್ನು ಸರಿಯಾಗಿ ನಡೆಸುವ ಜವಾಬ್ದಾರಿ ನಮ್ಮದು. ಪರಿಸರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ .ಕಳೆದ 5 ವರ್ಷಗಳಿಂದ...

B.C. ROAD : ಕೆಂಪುಕಲ್ಲು, ಮರಳು ಅಭಾವ : ಬಂಟ್ವಾಳ ಬಿಜೆಪಿ ವತಿಯಿಂದ ಪ್ರತಿಭಟನಾ ಸಭೆ..

ಬಂಟ್ವಾಳ: ಕೆಂಪುಕಲ್ಲು ಕಲ್ಲಿನ ರಾಜಧನವನ್ನು 40 ರೂ.ಗಳಿಂದ 280 ರೂ.ಗಳಿಗೆ ಏರಿಕೆ ಮಾಡಿರುವ ರಾಜ್ಯ ಸರಕಾರವು ಮರಳು ತೆಗೆಯುವ ಕಾನೂನನ್ನೂ ಸರಳಗೊಳಿಸದೆ ಜನರಿಗೆ ಕದಿಯಲು ಪ್ರೇರಣೆ ನೀಡುತ್ತಿದೆ. ಕೆಂಪು ಕಲ್ಲು ಹಾಗೂ ಮರಳಿನ...