Tuesday, July 15, 2025

ಬಕ್ರೀದ್ ಹಬ್ಬ ಶಾಂತಿಯುತ ಆಚರಣೆಗೆ ಶಾಂತಿಸಭೆ

ಬಂಟ್ವಾಳ: ಜಿಲ್ಲೆಯ ಅತೀ ಸೂಕ್ಷ್ಮ ಪ್ರದೇಶ ಬಂಟ್ವಾಳ ತಾಲೂಕಾದ್ಯಂತ ಮುಂದಿನವಾರ ಆಚರಿಸಲಾಗುವ ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಪೊಲೀಸರು ಕಟ್ಟೆಚ್ಚರ ವಿಧಿಸಿದ್ದಾರೆ‌.
ಬಂಟ್ವಾಳ ಸರ್ಕಲ್ ಇನ್ಸ್ಪೆಕ್ಟರ್ ಟಿ.ಡಿ.ನಾಗರಾಜ್ ಅವರ ಮಾರ್ಗದರ್ಶನದಂತೆ ತಾಲೂಕಿನ ಮೂರು ಠಾಣೆಗಳಲ್ಲೂ ಠಾಣಾಧಿಕಾರಿಗಳು ಶಾಂತಿ ಸಭೆ ಕರೆಯಲಾಗಿದ್ದು, ಕಾನೂನು ಸುವ್ಯವಸ್ಥೆ ಕಾಪಾಡಲು ಮುಂಜಾಗ್ರತಾ ಕ್ರಮ ಜರಗಿಸಿದ್ದಾರೆ.‌ ರೌಡಿ ಶೀಟರ್ ಮತ್ತು ಕ್ರಿಮಿನಲ್ ಹಿನ್ನೆಲೆಯುಳ್ಳ ವ್ಯಕ್ತಿಗಳನ್ನು ಈಗಾಗಲೇ ಠಾಣೆಗೆ ಕರೆಯಿಸಿ ಎಚ್ಚರಿಕೆ ನೀಡಲಾಗಿದೆ.
ಬಕ್ರೀದ್ ಹಬ್ಬದ ಹಿನ್ನೆಲೆಯಾಗಿಸಿಕೊಂಡು ಸಮಾಜ ಘಾತುಕ ವ್ಯಕ್ತಿಗಳು ಅಕ್ರಮವಾಗಿ ದನ ಸಾಗಾಟ ನಡೆಸಲಾಗುತ್ತಿದೆ. ದನ ಮಾಂಸಗಳನ್ನು ಕಾನೂನು ಬಾಹಿರವಾಗಿ ಮಾರಾಟ ಮಾಡುತ್ತಿದೆ ಎಂದು ಹಿಂದೂ ಸಂಘಟಕರು ಆರೋಪಿಸಿದ್ದು, ಈ ಹಿನ್ನೆಲೆಯಲ್ಲೂ ಕಾರ್ಯಾಚರಣೆ ಕೈಗೆತ್ತಿಕೊಂಡಿದ್ದಾರೆ. ಅಲ್ಲದೇ ಆಸುಪಾಸಿನ ಪ್ರದೇಶದಲ್ಲಿ ದನಗಳ ಸಹಿತ ಜಾನುವಾರುಗಳು ಕಳವಾಗುತ್ತಿರುವ ಪ್ರಕರಣ ನಡೆಯುತ್ತಿದ್ದು, ರಾತ್ರಿ ವೇಳೆ ಕರ್ತವ್ಯ ನಿರ್ವಹಿಸುವ ಪೊಲೀಸರು ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕಾಗಿ ಪೊಲೀಸ್ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

‌ ಎರಡೂ ಕಡೆಯಿಂದ ವಾಟ್ಸ್ ಅಪ್ ವಾರ್! 
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುವ ವಾಹನಗಳನ್ನು ತಕ್ಷಣ ತಡೆಹಿಡಿದು, ಮುಂದೇನು ಮಾಡಬೇಕೆಂದು ಸೂಚಿಸಲಾದ ಸಲಹೆ ಹಾಗೂ ಬುದ್ದಿ ಮಾತು ಹೇಳಿರುವ ಹಿಂದೂ ಸಂಘಟನೆಗಳ ಪೋಸ್ಟರ್ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ದನ ಸಾಗಾಟಕಾರರಿಗೆ ಹಲ್ಲೆ ನಡೆಸಬೇಡಿ. ಅವರ ವಾಹನವನ್ನು ತಡೆದು ನಿಲ್ಲಿಸಿ ದನಗಳಿಗೆ ನೀಡಲಾದ ಚಿತ್ರಹಿಂಸೆಯನ್ನು ಚಿತ್ರೀಕರಿಸಿ ಎಂದು ಬುದ್ದಿ ಹೇಳಲಾಗಿದೆ.
ಅಕ್ರಮ ದನ ಸಾಗಾಟಕ್ಕೆ ವಿರುದ್ಧವೂ ಮುಸ್ಲಿಂ ಸಮಾಜದಲ್ಲಿ ಜಾಗೃತಿ ಮೂಡಿಸುವ ಕಾರ್ಯ ನಡೆಯುತ್ತಿದ್ದು, ದನಗಳ ಅಕ್ರಮ ಸಾಗಾಟ ಮತ್ತು ಕಳ್ಳತನಕ್ಕೆ ಬೆಂಬಲಿಸಬೇಡಿ ಎಂದು ಮುಸ್ಲಿಂ ಸಂಘಟಕರು ಎಚ್ಚರಿಕೆ ನೀಡಿದ್ದಾರೆ. ಈ ನಡುವೆಯೂ ಸಮಾಜದಲ್ಲಿ ಅಶಾಂತಿ ಉಂಟು ಮಾಡುವ ಉದ್ವೇಗಕಾರಿ ಸಂದೇಶಗಳು ಹರಿದಾಡುತ್ತಿದ್ದು, ವೈರಲ್ ಆಗುತ್ತಿದೆ.

ವಾಟ್ಸ್ ಅಪ್ ಮೇಲೂ ಕಣ್ಣು!
ದನ ಕಳ್ಳತನ, ಸಾಗಾಣಿಕೆ ಹಾಗೂ ಮಾರಾಟ ಇತ್ಯಾದಿ ಘಟನೆಗಳನ್ನು ಆಧರಿಸಿಕೊಂಡು ವಾಟ್ಸ್ ಅಪ್, ಫೇಸ್ ಬುಕ್ ಮತ್ತಿತರ ಸಾಮಾಜಿಕ ಜಾಲತಾಣದಲ್ಲಿ ಉದ್ವೇಗಕಾರಿ ಮೆಸೇಜ್ ಹರಿದಾಡುತ್ತಿದ್ದು, ಅಶಾಂತಿ ಉಂಟಾಗಲು ಕಾರಣವಾಗುತ್ತದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮ ಜರಿಸಲಾಗುವುದಾಗಿ ತಿಳಿಸಿರುವ ಸರ್ಕಲ್ ಇನ್ಸ್ಪೆಕ್ಟರ್ ಟಿ.ಡಿ.ನಾಗರಾಜ್ ಅವರು, ಸಮಾಜದಲ್ಲಿ ಅಶಾಂತಿ ಉಂಟು ಮಾಡುವ ಸಮಾಜ ಘಾತುಕರ ವಿರುದ್ಧ ಕಠಿಣ ಕ್ರಮ ಜರಗಿಸಲಾಗುವುದಾಗಿ ಪ್ರತಿಕ್ರಿಯಿಸಿದ್ದಾರೆ.

More from the blog

ಬಂಟ್ವಾಳ ತಾಲೂಕಿನ ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಸ್ವಯಂ ಸೇವಕರ ತರಬೇತಿ ಹಾಗೂ ವಾರ್ಷಿಕ ಸಭೆ..

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.) ಬಂಟ್ವಾಳ ತಾಲೂಕಿನ ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಸ್ವಯಂ ಸೇವಕರ ತರಬೇತಿ ಹಾಗೂ ವಾರ್ಷಿಕ ಸಭೆ ಸೋಮವಾರ...

ನಿರಂತರ ಮಳೆ : ಬಂಟ್ವಾಳ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ದಿನಾಂಕ 15.07.2025ರಂದು ರಜೆ ಘೋಷಿಸಲಾಗಿದೆ ಎಂದು ತಹಶೀಲ್ದಾರ್...

ಒಡಿಯೂರು ಶ್ರೀ ಜನ್ಮದಿನೋತ್ಸವ ಸೇವಾ ಸಂಭ್ರಮದ ಅಂಗವಾಗಿ ಬೃಹತ್ ಉಚಿತ ವೈದ್ಯಕೀಯ ಶಿಬಿರ

ವಿಟ್ಲ : ನಮ್ಮ ಶಾರೀರಿಕ ಮತ್ತು ಮಾನಸಿಕ ಆರೋಗ್ಯ ಬದುಕಿನ ಉತ್ತುಂಗಕ್ಕೆ ಕಾರಣವಾಗುತ್ತದೆ. ಬದುಕು ಪೂರ್ತಿ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಋತುವಿಗನುಗುಣವಾಗಿ ಹಿತ, ಮಿತ ಆಹಾರ ಸೇವಿಸಿದಾಗ ಉತ್ತಮ ಆರೋಗ್ಯ ಪಡೆಯಬಹುದು...

ಧನಾತ್ಮಕ ಚಿಂತನೆಗಳಿಂದ ಮಾತ್ರ ಉತ್ತಮ ಕಾರ್ಯಗಳು ನಡೆಯಲು ಸಾಧ್ಯ- ಮಾಣಿಲಶ್ರೀ

ವಿಟ್ಲ: ನಮ್ಮ ಕಣ್ಣುಗಳಿಗೆ ಕಾಣದಿರುವ ಶಕ್ತಿಯೇ ದೇವರು. ದೇವರನ್ನು ಬಿಟ್ಟು ನಾವು ಯಾವ ಕಾರ್ಯವನ್ನೂ ಮಾಡಿದರೂ ನಿಷ್ಪ್ರಯೋಜಕ. ಉಸಿರು ಇದ್ದಷ್ಟು ದಿನ ಲೋಕಹಿತ ಕಾರ್ಯ ಮಾಡಬೇಕು. ಧನಾತ್ಮಕ ಚಿಂತನೆಗಳಿಂದ ಮಾತ್ರ ಉತ್ತಮ ಕಾರ್ಯಗಳು...