Thursday, February 13, 2025

ಬಂಟ್ವಾಳ ಕ್ಕೆ 30 ಕೋಟಿ ರೂ. ನೀಡುವಂತೆ ಸಿ.ಎಂ.ಯಡಿಯೂರಪ್ಪ ರಿಗೆ ಶಾಸಕ ರಾಜೇಶ್ ನಾಯ್ಕ್ ಮನವಿ

ಬಂಟ್ವಾಳ: ರಾಜ್ಯದ ಮುಖ್ಯಮಂತ್ರಿ ಬಿ‌.ಎಸ್.ಯಡಿಯೂರಪ್ಪ ಅವರು ಇಂದು ಸಂಜೆ 4.30 ರ ವೇಳೆ ಬಂಟ್ವಾಳ ಕ್ಕೆ ಆಗಮಿಸಿದರು.
ಅವರು ಪಾಕೃತಿಕ ವಿಕೋಪದಲ್ಲಿ ಉಂಟಾದ ಸಮಸ್ಯೆಗಳ ಬಗ್ಗೆ ಅವಲೋಕನ ನಡೆಸಲು ಬೆಳ್ತಂಗಡಿ ತಾಲೂಕಿಗೆ ಆಗಮಿಸಿ ವಾಪಾಸು ಬರುವಾಗ ಬಂಟ್ವಾಳಕ್ಕೆ ಆಗಮಿಸಿದರು.
ಬಂಟ್ವಾಳ ತಾಲೂಕಿನ ಲ್ಲಿ ನೆರೆಯಿಂದ ಹಾನಿಯಾದ ಸಂಪೂರ್ಣ ಮಾಹಿತಿ ಯನ್ನೊಳಗೊಂಡ ಮನವಿ ಹಾಗೂ 30ಕೋಟಿ ರೂಗಳನ್ನು ಪರಿಹಾರ ನೀಡುವಂತೆ ಮನವಿ ಮಾಡಿದರು.


ಬಳಿಕ ಮಾತನಾಡಿ ದ ಸಿ.ಎಂ. ಪಾಕೃತಿಕ ಹಾನಿಗೆ ನೀಡುತ್ತಿದ್ದ 95 ಸಾವಿರ ರೂಗಳನ್ನು ಈ ಬಾರಿ 5 ಲಕ್ಷ ರೂ ನೀಡುತ್ತೇವೆ.
ನೆರೆಯಿಂದ ಮುಳುಗಡೆಯಾದ ಅಂಗಡಿಗಳಿಗೆ ರೂ 5 ಸಾವಿರ ನೀಡುತ್ತೇವೆ, ಮನೆ ರಿಪೇರಿ ಮಾಡಲು 1 ಲಕ್ಷ ರೂ ನೀಡುತ್ತೇವೆ. ನೆರೆಯಿಂದ ಸಂಪೂರ್ಣ ಹಾನಿಯಾದ ಮನೆಗಳ ಕುಟುಂಬ ಹೊಸಮನೆ ನಿರ್ಮಾಣ ದ ವರೆಗೆ ಅವರ ಮನೆಯ ಬಾಡಿಗೆ ತಿಂಗಳಿಗೆ ರೂ5 ಸಾವಿರ ನೀಡುತ್ತೇವೆ ಎಂದ ಅವರು ಯಾವುದೇ ರೀತಿಯ ಭಯ ಬೇಡ ನಿಮ್ಮ ಜೊತೆ ಸರಕಾರ ಇದೆ ಎಂದು ಅವರು ಅಭಯ ನೀಡಿದರು.
ಈ ಸಂದರ್ಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲು, ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಎಂ.ಎಲ್.ಸಿ.ಕೋಟಶ್ರೀನಿವಾಸ ಪೂಜಾರಿ, ಶಾಸಕ ಸಂಜೀವ ಮಠಂದೂರು, ವೇದವ್ಯಾಸ ಕಾಮತ್ ಪ್ರಮುಖ ರಾದ ದೇವದಾಸ ಶೆಟ್ಟಿ, ಎಂ.ತುಂಗಪ್ಪ ಬಂಗೇರ, ಮಾಜಿ ಶಾಸಕ ರುಕ್ಮಯ ಪೂಜಾರಿ, ಎ.ಗೋವಿಂದ ಪ್ರಭು, ದಿನೇಶ್ ಅಮ್ಟೂರು, ಉದಯಕುಮಾರ್ ರಾವ್, ದಿನೇಶ್ ಭಂಡಾರಿ, ಮೋನಪ್ಪ ದೇವಶ್ಯ, ರಾಮ್ ದಾಸ ಬಂಟ್ವಾಳ, ರೋನಾಲ್ಡ್ ಬಂಟ್ವಾಳ ಮತ್ತಿತರರು ಉಪಸ್ಥಿತರಿದ್ದರು.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...