Monday, February 10, 2025

ನೆರೆ ಸಂತ್ರಸ್ತರಿಂದ ಊಟೋಪಚಾರಕ್ಕೆ ಬೇಡಿಕೆ, ನಿಂದನೆ: ಆರೋಪ ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬಂಟ್ವಾಳ: ಬಿ.ಮೂಡ ಗ್ರಾಮಕರಣಿಕರೊಬ್ಬರು ಅವಾಚ್ಯ ಶಬ್ದಗಳಿಂದ ನಿಂದಿಸಿ, ಊಟೋಪಚಾರಕ್ಕೆ ಬೇಡಿಕೆ ಇಟ್ಟಿರುವುದಾಗಿ ಆರೋಪಿಸಿ ನೆರೆ ಸಂತ್ರಸ್ತರೊಬ್ಬರು ಬಂಟ್ವಾಳ ನಗರ ಪೊಲೀಸ್ ಠಾಣೆಗೆ ಮಂಗಳವಾರ ದೂರು ನೀಡಿದ್ದಾರೆ.


ತಾಲೂಕಿನ ಬಿ.ಮೂಡ ಗ್ರಾಮದ ತಲಪಾಡಿ ನಿವಾಸಿ, ನೆರೆ ಸಂತ್ರಸ್ತ ಲತೀಫ್ ಬಿ.ಸಿ. ಎಂಬವರು ಈ ದೂರು ನೀಡಿದ್ದು, ಕಳೆದ ವಾರದಿಂದ ಭಾರೀ ಮಳೆಯಿಂದಾಗಿ ನೆರೆ ಬಂದು ತನ್ನ ಮನೆ ಸಹಿತ ಸುತ್ತಮುತ್ತಲಿನ ಮನೆಗಳೂ ಜಲಾವೃತಗೊಂಡಿತ್ತು. ಈ ನಿಟ್ಟಿನಲ್ಲಿ ಆ. 12ರಂದು ಬೆಳಿಗ್ಗೆ 11.30ಗಂಟೆ ಸುಮಾರಿಗೆ ಗ್ರಾಮಕಣಿಕರು ಹಾಗೂ ಇತರ ಸಿಬ್ಬಂದಿ ತಲಪಾಡಿ ಪ್ರದೇಶದ ನೆರೆ ಸಂತ್ರಸ್ತರ ಸರ್ವೇ ಕಾರ್ಯಕ್ಕಾಗಿ ತಮ್ಮ ಮನೆಗೆ ಬಂದು ಅಜಿಗಳನ್ನು ಭರ್ತಿ ಮಾಡಿದ್ದಾರೆ. ಆದರೆ, ಅಂದು ರಾತ್ರಿ 10.15ಗಂಟೆ ಸುಮಾರಿಗೆ ವಿಎಯ ಹೆಸರಿನಲ್ಲಿ 8618461060 ಮೊಬೈಲ್ ನಂಬರ್‌ನಿಂದ ತನಗೆ ಕರೆ ಮಾಡಿ, “ನೆರೆ ಬಂದ 14 ಮನೆಗಳಿಗೆ ಸರ್ವೇ ಮಾಡಲು ನಮಗೆ ನೀನು ಉಪಚರಿಸಿಲ್ಲ. ಅದಲ್ಲದೆ, ಕುಡಿಯಲು ಕೊಡಲು ಯೋಗ್ಯತೆ ಇಲ್ಲ. ನಿನಗೆ ಅಹಂಕಾರ ಇದೆ ಎಂದೇಳಿ” ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ.
ಇದರಿಂದ ಗೊಂದಲಗೊಂಡ ತಾನು ಈ ವಿಚಾರವಾಗಿ ಮತ್ತೆ ಅದೇ ನಂಬರ್‌ಗೆ ಕರೆ ಮಾಡಿದ್ದು, ಕರೆಯನ್ನು ನಿರಾಕರಿಸಿದ್ದಾರೆ. ನೆರೆಯಿಂದ ತನ್ನ ಮನೆ ಅವ್ಯವಸ್ಥೆಯಿಂದ ಕೂಡಿದ್ದು, ಶುಚಿ ಕಾರ್ಯವನ್ನು ಇನ್ನೂ ಮಾಡಿಲ್ಲ. ತಾನು ತನ್ನ ಕುಟುಂಬವು ಸಂಬಂಧಿಕರ ಮನೆಯಲ್ಲಿ ವಾಸವಾಗಿ ಅಲ್ಲಿಯೇ ಹಬ್ಬವನ್ನು ಮಾಡಿರುತ್ತೇವೆ, ಈಗಿರುವಾಗ ತಾನು ಇವರಿಗೆ ಹೇಗೆ ಊಟೋಪಚಾರ ಮಾಡಲಿ?. ಇದರಿಂದ ನೆರೆ ಸಂತ್ರಸ್ತನಾದ ತಾನು ಮಾನಸಿಕವಾಗಿ ನೊಂದುಕೊಂಡಿದ್ದೇನೆ. ಆದ್ದರಿಂದ ತಾವು ಈ ಬಗ್ಗೆ ವಿಚಾರಣೆ ಮಾಡಿ ನ್ಯಾಯ ಒದಗಿಸಬೇಕಾಗಿ ಪೊಲೀಸ್ ದೂರಿನಲ್ಲಿ ಒತ್ತಾಯಿಸಲಾಗಿದೆ.
ಈ ಸಂಬಂಧ ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

More from the blog

ಯುವ ಸಂಗೀತೋತ್ಸವಕ್ಕೆ ಚಾಲನೆ

ಮಂಗಳೂರು: ಸಾಮಾಜಿಕ ಸ್ವಾಸ್ಥ್ಯ ಕ್ಕಾಗಿ ಮಾನಸಿಕ ನೆಮ್ಮದಿ ನೀಡುವಂತಹ ಸಂಗೀತ ಸಾಂಸ್ಕೃತಿಕ ಕಾರ್ಯಕ್ರಮಗಳು ಅಗತ್ಯವಿದೆ ಎಂದು ಕ್ಯಾ.ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಅವರು ಮಂಗಳೂರಿನ ಕಲಾ ಸಾಧನ ಸಂಸ್ಥೆ ವತಿಯಿಂದ ನಗರದ ಟಿಎಂಎ ಪೈ ಇಂಟರ್‌ನ್ಯಾಶನಲ್...

ದೆಹಲಿಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ…. ಸಿದ್ದಕಟ್ಟೆ ಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ*

  ದೆಹಲಿ ವಿಧಾನ ಸಭೆಗೆ ನಡೆದ ಚುನಾವಣೆ ಯಲ್ಲಿ ಭಾರತೀಯ ಜನತಾ ಪಕ್ಷ 70 ಸ್ಥಾನ ಗಳಲ್ಲಿ ಬರೋಬ್ಬರಿ 48 ಸ್ಥಾನ ಗಳನ್ನು ಗೆಲ್ಲುವ ಮೂಲಕ ಭರ್ಜರಿ ಜಯಭೇರಿ ಗಳಿಸುವುದರೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರ...

ಜುಗಾರಿ ಅಡ್ಡೆಗೆ ದಾಳಿ: ಹತ್ತು ಜನರ ಬಂಧನ

ಬಂಟ್ವಾಳ: ಹಣ ಪಣಕ್ಕಿಟ್ಟು ಜುಗಾರಿ ಆಟ ಆಡುತ್ತಿದ್ದ ಅಡ್ಡೆಗೆ ದಾಳಿ ನಡೆಸಿದ ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ನೇತ್ರತ್ವದ ತಂಡ ಆಟದಲ್ಲಿ ನಿರತರಾಗಿದ್ದ 10 ಮಂದಿ ಆರೋಪಿಗಳನ್ನು ಹಾಗೂ ಸಾವಿರಾರು...

ಮಾರ್ಬಲ್ ಲಾರಿ ಪಲ್ಟಿ

ಬಂಟ್ವಾಳ: ಮಾರ್ಬಲ್ ಲೋಡ್ ಲಾರಿಯೊಂದು ತಾಂತ್ರಿಕ ದೋಷದಿಂದ ರಸ್ತೆಯ ವಿಭಾಜಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ರಾಷ್ಟ್ರೀಯ ಮಂಗಳೂರು- ಬೆಂಗಳೂರು ರಸ್ತೆಯ ತುಂಬೆ ಸಮೀಪದ ರಾಮಲ್ ಕಟ್ಟೆ ಎಂಬಲ್ಲಿ ಪಲ್ಟಿಯಾಗಿದೆ. ಘಟನೆಯಿಂದ ಯಾವುದೇ ಅಪಾಯ...