Tuesday, July 15, 2025

ಫರಂಗಿಪೇಟೆ: ನೆರೆ ಸಂತ್ರಸ್ತರಿಗಾಗಿ ಅಗತ್ಯ ವಸ್ತುಗಳ ಸಂಗ್ರಹ

ಬಂಟ್ವಾಳ: ಬಂಟ್ವಾಳ ತಾಲೂಕಿನ ಪುದು ಗ್ರಾಮದ ಮಾರಿಪಳ್ಳ ಸಮೀಪದ ಪೇರಿಮಾರಿನ ಮಸ್ಜಿದುಲ್ ಖಿಳ್ ರ್ ಜುಮಾ ಮಸೀದಿಯಲ್ಲಿ ಸೋಮವಾರ ಬಕ್ರೀದ್ ಆಚರಿಸಲಾಯಿತು. ಮಸೀದಿಯಲ್ಲಿ ನಡೆದ ಬಕ್ರೀದ್ ವಿಶೇಷ ಪ್ರಾರ್ಥನೆ ಹಾಗೂ ಖುತುಬಾ ನೇತೃತ್ವವನ್ನು ಖತೀಬ್ ರಫೀಕ್ ಸಅದಿ ಅಲ್‌ಅಫ್ಳಲಿ ವಹಿಸಿದ್ದರು. ಇದೇ ವೇಳೆ ನೆರೆ ಸಂತ್ರಸ್ತರಿಗಾಗಿ ಎಸ್ಸೆಸ್ಸೆಫ್, ಎಸ್‌ವೈಎಸ್ ಹಾಗೂ ಎಸ್‌ಬಿಎಸ್ ವತಿಯಿಂದ ಪರಿಹಾರ ಧನ ಸಂಗ್ರಹ, ಬಟ್ಟೆ ಬರೆಗಳು, ಆಹಾರ-ಸಾಮಗ್ರಿಗಳು, ಪಾತ್ರೆ ಪಗಡಿಗಳು ಹಾಗೂ ಇನ್ನಿತರ ತುರ್ತು ವಸ್ತುಗಳನ್ನು ಸಂಗ್ರಹಿಸಲಾಯಿತು.
ಈ ಸಂದರ್ಭದಲ್ಲಿ ಎಸ್ಸೆಸ್ಸೆಫ್ ಪೇರಿಮಾರ್ ಶಾಖಾ ಅಧ್ಯಕ್ಷ ನಝೀರ್ ಪೇರಿಮಾರ್, ಪ್ರಧಾನ ಕಾರ್ಯದರ್ಶಿ ರಹೀಂ ಬಿ.ಆರ್, ಕೋಶಾಧಿಕಾರಿ ಅಬ್ದುಲ್ ಸಮದ್ ಬಾಲ್ದಬೆಟ್ಟು, ಮಸ್ಜಿದುಲ್ ಖಿಳ್‌ರ್ ಜುಮಾ ಮಸೀದಿಯ ಉಪಾಧ್ಯಕ್ಷ ಹಾಜಿ ಅಬ್ದುಲ್ ರಝಾಕ್.ಬಿ, ಜೊತೆ ಕಾರ್ಯದರ್ಶಿ, ಪುದು ಗ್ರಾಮ ಪಂಚಾಯತ್ ಸದಸ್ಯ ಹಾಶೀರ್ ಪೇರಿಮಾರ್, ಕೋಶಾಧಿಕಾರಿ ಬಿ. ಹುಸೈನ್ ಬಾಲ್ದಬೆಟ್ಟು, ಪೇರಿಮಾರ್ ಶಾಖಾ ಸದಸ್ಯ ಅಮೀನ್ ಬಾಲ್ದಬೆಟ್ಟು, ಅನ್ಸಾರ್, ಆಸಿಫ್ ಬಾಲ್ದಬೆಟ್ಟು ಉಪಸ್ಥಿತರಿದ್ದರು.

More from the blog

ಒಡಿಯೂರು ಶ್ರೀ ಜನ್ಮದಿನೋತ್ಸವ ಸೇವಾ ಸಂಭ್ರಮದ ಅಂಗವಾಗಿ ಬೃಹತ್ ಉಚಿತ ವೈದ್ಯಕೀಯ ಶಿಬಿರ

ವಿಟ್ಲ : ನಮ್ಮ ಶಾರೀರಿಕ ಮತ್ತು ಮಾನಸಿಕ ಆರೋಗ್ಯ ಬದುಕಿನ ಉತ್ತುಂಗಕ್ಕೆ ಕಾರಣವಾಗುತ್ತದೆ. ಬದುಕು ಪೂರ್ತಿ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಋತುವಿಗನುಗುಣವಾಗಿ ಹಿತ, ಮಿತ ಆಹಾರ ಸೇವಿಸಿದಾಗ ಉತ್ತಮ ಆರೋಗ್ಯ ಪಡೆಯಬಹುದು...

ಧನಾತ್ಮಕ ಚಿಂತನೆಗಳಿಂದ ಮಾತ್ರ ಉತ್ತಮ ಕಾರ್ಯಗಳು ನಡೆಯಲು ಸಾಧ್ಯ- ಮಾಣಿಲಶ್ರೀ

ವಿಟ್ಲ: ನಮ್ಮ ಕಣ್ಣುಗಳಿಗೆ ಕಾಣದಿರುವ ಶಕ್ತಿಯೇ ದೇವರು. ದೇವರನ್ನು ಬಿಟ್ಟು ನಾವು ಯಾವ ಕಾರ್ಯವನ್ನೂ ಮಾಡಿದರೂ ನಿಷ್ಪ್ರಯೋಜಕ. ಉಸಿರು ಇದ್ದಷ್ಟು ದಿನ ಲೋಕಹಿತ ಕಾರ್ಯ ಮಾಡಬೇಕು. ಧನಾತ್ಮಕ ಚಿಂತನೆಗಳಿಂದ ಮಾತ್ರ ಉತ್ತಮ ಕಾರ್ಯಗಳು...

ನೈಸರ್ಗಿಕ ವಿಪತ್ತುಗಳಿಗೆ ಮೂಲ ಕಾರಣವೆ ಅರಣ್ಯ ನಾಶ : ಮನೋಜ್ ಮಿನೇಜಸ್ 

ಬಂಟ್ವಾಳ: ನೈಸರ್ಗಿಕ ವಿಪತ್ತುಗಳಿಗೆ  ಮೂಲ ಕಾರಣವೆ ಅರಣ್ಯನಾಶ. ಜಲ ನೆಲ ಪ್ರಾಣಿ ಸಂಕುಲಗಳು ದೇವರ ಆಸ್ತಿ ಅವುಗಳನ್ನು ಸರಿಯಾಗಿ ನಡೆಸುವ ಜವಾಬ್ದಾರಿ ನಮ್ಮದು. ಪರಿಸರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ .ಕಳೆದ 5 ವರ್ಷಗಳಿಂದ...

B.C. ROAD : ಕೆಂಪುಕಲ್ಲು, ಮರಳು ಅಭಾವ : ಬಂಟ್ವಾಳ ಬಿಜೆಪಿ ವತಿಯಿಂದ ಪ್ರತಿಭಟನಾ ಸಭೆ..

ಬಂಟ್ವಾಳ: ಕೆಂಪುಕಲ್ಲು ಕಲ್ಲಿನ ರಾಜಧನವನ್ನು 40 ರೂ.ಗಳಿಂದ 280 ರೂ.ಗಳಿಗೆ ಏರಿಕೆ ಮಾಡಿರುವ ರಾಜ್ಯ ಸರಕಾರವು ಮರಳು ತೆಗೆಯುವ ಕಾನೂನನ್ನೂ ಸರಳಗೊಳಿಸದೆ ಜನರಿಗೆ ಕದಿಯಲು ಪ್ರೇರಣೆ ನೀಡುತ್ತಿದೆ. ಕೆಂಪು ಕಲ್ಲು ಹಾಗೂ ಮರಳಿನ...