ಬಂಟ್ವಾಳ: ಸಾಮಾಜಿಕ ಜಾಲತಾಣದಲ್ಲಿ ಕಲಾಬಾಗಿಲಿನ ಮಹಮ್ಮದ್ ನದಿಮ್ ಎಂಬಾತ ಸ್ವಾತಂತ್ರ್ಯ ದಿನಾಚರಣೆಯ ದಿನ ವಿದೇಶದಲ್ಲಿದ್ದು ಪಾಕಿಸ್ತಾನದ ಧ್ವಜದ ಚಿತ್ರಹಾಕಿ ದೇಶ ದ್ರೋಹ ಕೆಲಸ ಮಾಡಿದ್ದು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಪೊಲೀಸ್ ಅಧಿಕಾರಿಗಳೊಂದಿಗೆ ಮಾತನಾಡಿ ಆರೋಪಿಯು ದೇಶದ್ರೋಹದ ಕೃತ್ಯದಲ್ಲಿ ಭಾಗಿಯಾಗಿದ್ದು ಬಂಟ್ವಾಳದಲ್ಲಿ ಶಾಂತಿ ಕದಡುವ ಈ ಪ್ರಕರಣದ ಬಗ್ಗೆ ತನಿಖೆ ನಡೆಸಿ ತಕ್ಷಣವೇ ಕಠೀಣಕ್ರಮಕೈಗೊಳ್ಳಲು ಸೂಚಿಸಿದ್ದಾರೆ.

