Sunday, January 25, 2026

ಬೊರ್ ವೆಲ್ ಎಂದು ಪೈಪ್ ಲೈನ್ ಒಡೆದರು…..ವಿಚಿತ್ರವಾದರೂ ಸತ್ಯ!

ಬಂಟ್ವಾಳ: ಬೊರ್ ವೆಲ್ ತೋಡಿದಾಗ ನೀರು ಸಿಕ್ಕಿತು ಎಂದು ಖುಷಿಯಿಂದ ಕುಣಿದು ಕುಪ್ಪಳಿಸಿದ ನಾಗರಿಕರಿಗೆ ಕೆಲಕ್ಷಣದಲ್ಲಿಯೇ  ನಿರಾಸೆ ಉಂಟಾದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಗ್ರಾಮ ಪಂಚಾಯತ್ ಅನುದಾನದಲ್ಲಿ ತೊಡಲಾದ ಬೊರ್ ವೆಲ್ ಅದು ಪೈಪ್ ಲೈನ್ ತುಂಡು ಮಾಡಿದೆ ಎಂದು ಗೊತ್ತಾದಾಗ ಅಲ್ಲಿನ ಜನರಿಗೆ ಶಾಕ್ ಆಗಿದೆ.
ಈ ಬಗ್ಗೆ ಬಿಗ್ ಬ್ರೇಕಿಂಗ್ ನ್ಯೂಸ್ ಎಂದು ಸಾಮಾಜಿಕ ಜಾಲತಾಣದಲ್ಲಿ ಮೆಸೇಜ್ ಹರಿದಾಡುತ್ತಿದೆ.
ಘಟನೆಯ ವಿವರ:
ಸಜೀಪ ಮೂಡ ಗ್ರಾಮ ಪಂಚಾಯತ್ ಅನುದಾನದಲ್ಲಿ ಕಂದೂರು ನಲ್ಲಿ ಕುಡಿಯುವ ನೀರಿನ ಪೂರೈಕೆ ಗಾಗಿ  ಬೋರ್ ಹಾಕಲು ಇಂದು ಸಂಜೆ ನಿಗದಿಪಡಿಸಲಾಗಿತ್ತು.
ನೀರು ಪರಿಶೋಧಕರು ನೀರು ಮೇಲ್ಬಾಗದಲ್ಲಿ ಸಿಗುತ್ತದೆ ಅಂಥ ಸೂಚನೆ ನೀಡಿ ಜಾಗ ಖಾತರಿಪಡಿಸಿದರು ,ಈದೀಗ ಬೋರ್ ವೇಲ್ ಲಾರಿ ಕೆಲಸ ಆರಂಭಿಸಿ ಕ್ಷರ್ಣದಲ್ಲಿ ರಭಸವಾಗಿ ನೀರು ಹೊರ ಚೆಮ್ಮಿತು, ಪರಿಸರದಲ್ಲಿ ನೀರಿನ ಹೊಳೆಯೇ ಹರಿಯಿತು, ಕೆಲಸಗಾರರಿಗೆ ಮತ್ತು ಸ್ಥಳೀಯರಿಗೆ ಆಶ್ಚರ್ಯದ ನಡುವೆ ಸಡಗರ ಸಂಭ್ರಮ ಮುಗಿಲು ಮುಟ್ಟಿತು, ಬಾರಿ ಜನ ಸೇರಿತ್ತು. ನೀರು ಸಿಕ್ಕಿದಾಗ ಯಾರಿಗೆ ತಾನೇ ಖುಷಿ ಆಗಲ್ಲ ನೀವೇ ಹೇಳಿ, ಆಮೇಲೆ?
ಈ ಸಂತೋಷ ಕ್ಷಣಕಾಲ ಮಾತ್ರ ಮತ್ತೆ ಗೊತ್ತಾಯಿತು ಅದು ಕೊಣಜೆಗೆ ನೀರು ಸರಬರಾಜು ಆಗುವ ಪೈಪ್ ಹೊಡೆದದ್ದು ಅಂಥ.
ಸ್ಥಳೀಯರಿಗೆ ನಿರಾಸೆಯ ನಡುವೆ  ನಗುವಿಗೆ ಪಾರವೇ ಇರಲಿಲ್ಲ. ಬಳಿಕ ನೀರು ಸರಬರಾಜು ಮಾಡಲು ಮರು ಕಾಮಗಾರಿ ನಡೆಯಿತು.
ಇಂತಹ ಘಟನೆಗಳು ನಡೆಯುವ ಮುನ್ನವೇ ಎಚ್ಚೆತ್ತುಕೊಂಡು ಕೆಲಸ ಮಾಡಿದ್ದರೆ ಪೈಪ್ ನ ಕಾಮಗಾರಿಯ ಹಣವು ಉಳಿಯುತ್ತಿತ್ತು.

More from the blog

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...

ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ – ಅಶೋಕ ಕುಮಾರ್ ರಾಜ್ಯ ಮಟ್ಟಕ್ಕೆ ಆಯ್ಕೆ..

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಆಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಕರ್ನಾಟಕ ಸರಕಾರಿ ನೌಕರ ಸಂಘ, ದಕ್ಷಿಣ...

ಜಿಲ್ಲಾ ಸರ್ಕಾರಿ ನೌಕರರ ಕ್ರೀಡಾಕೂಟ – ಕೆ.ಪಿ.ಎಸ್ ಪ್ರೌಢಶಾಲೆ ದೈಹಿಕ ಶಿಕ್ಷಣ ಶಿಕ್ಷಕಿ ರಾಜ್ಯ ಮಟ್ಟಕ್ಕೆ ಆಯ್ಕೆ..

ಬಂಟ್ವಾಳ :ದಕ್ಷಿಣ ಕನ್ನಡ ಜಿಲ್ಲಾ ಆಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಕರ್ನಾಟಕ ಸರಕಾರಿ ನೌಕರ ಸಂಘ ದಕ್ಷಿಣ ಕನ್ನಡ...

ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ..

ಬಂಟ್ವಾಳ: ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವವು ಶತರುದ್ರಾಭಿಷೇಕ ಸಹಿತ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ತಂತ್ರಿಗಳಾದ ದಿನೇಶ್‌ಕೃಷ್ಣ ತಂತ್ರಿಗಳ ನೇತೃತ್ವದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಪ್ರಾರ್ಥನೆ, ಪುಣ್ಯಾಹ, ಗಣಹೋಮ, ಶತರುದ್ರಾಭಿಷೇಕ, ನವಕ ಕಲಶಾಭಿಷೇಕ, ವೀರಾಂಜನೇಯ...