Thursday, July 10, 2025

ರಾಷ್ಟ್ರಮಟ್ಟದ ವಸ್ತು ಪ್ರದರ್ಶನಕ್ಕೆ ಆಯ್ಕೆ

ಬಂಟ್ವಾಳ : ಬೆಂಗಳೂರಿನ ಡೆಲ್ಲಿ ಪಬ್ಲಿಕ್ ಶಾಲೆಯಲ್ಲಿ ಎರಡು ದಿನಗಳ ಕಾಲ ರಂದು ನಡೆದ ಸಿ.ಬಿ.ಎಸ್.ಇ ಶಾಲೆಗಳ ರಾಜ್ಯಮಟ್ಟದ ವಿಜ್ಞಾನ ಮಾದರಿ ವಸ್ತು ಪ್ರದರ್ಶನದಲ್ಲಿ ಬಂಟ್ವಾಳದ ವಿದ್ಯಾಗಿರಿಯ ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟಿನರಿ ಪಬ್ಲಿಕ್ ಶಾಲೆಯು ರಾಷ್ಟ್ರಮಟ್ಟದ ವಸ್ತುಪ್ರದರ್ಶನಕ್ಕೆ ಆಯ್ಕೆಯಾಗಿದೆ.
ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟಿನರಿ ಪಬ್ಲಿಕ್ ಶಾಲೆಯು  ವಿದ್ಯಾರ್ಥಿನಿಯರಾದ 7ನೇ ತರಗತಿಯ ರಿಯಾನ ಸೊನಾಲಿ ಪಿಂಟೋ ಮತ್ತು 8ನೇ ತರಗತಿಯ ತ್ರಿಷಾ ಪ್ರದರ್ಶಿಸಿದ ಆರೋಗ್ಯ ಮತ್ತು ಶುಚಿತ್ವ ವಿಭಾಗದ ‘ಕೇರ್ ಟೇಕರ್ ವಾಕಿಂಗ್ ಸ್ಟಿಕ್’ ಮಾದರಿಯು ದೆಹಲಿಯಲ್ಲಿ ನಡೆಯಲಿರುವ ರಾಷ್ಷ್ರಮಟ್ಟದ ವಸ್ತು ಪ್ರದರ್ಶನಕ್ಕೆ ಆಯ್ಕೆಯಾಗಿದೆ ಎಂದು ಶಾಲಾ ಪ್ರಕಟಣೆ ತಿಳಿಸಿದೆ.
ಶಾಲಾ ಪ್ರಾಂಶುಪಾಲೆ ರಮಾಶಂಕರ್ ಅವರು ವಿದ್ಯಾರ್ಥಿನಿಯರ ಸಾಧನೆಯನ್ನು ಪ್ರಶಂಸಿಸಿ ಶುಭಹಾರೈಸಿದ್ದಾರೆ. ಇಂದಿನ ಆಧುನಿಕ ಶೈಲಿಯ ಮನೆಗಳಲ್ಲಿ ಟೈಲ್ಸ್ ಅಥವಾ ಗ್ರಾನೈಟ್‍ಗಳ ಮೇಲೆ ಬಿದ್ದಿರುವ ನೀರನ್ನು ಗುರುತಿಸಲು ಮತ್ತು ಉಂಟಾಗುವ ಅನಾಹುತಗಳನ್ನು ತಪ್ಪಿಸಲು, ವ್ಯಕ್ತಿಯನ್ನು ಜಾಗೃತಗೊಳಿಸಲು ಇದು ಸಹಕರಿಸುತ್ತದೆ. ಈ ವಾಕಿಂಗ್ ಸ್ಟಿಕ್‍ನ ತುದಿಭಾಗವು ನೀರಿನ ಸಂಪರ್ಕ ಪಡೆದೊಡನೇ ಶಬ್ದ ಉತ್ಪತ್ತಿ ಮಾಡುವುದರಿಂದ ಮುಂದಿನ ಅನಾಹುತಗಳನ್ನು ತಪ್ಪಿಸುತ್ತದೆ. ಪ್ರಯೋಗಾತ್ಮಕವಾಗಿ ವಿದ್ಯಾರ್ಥಿನಿಯರು ಇದನ್ನು ಪಾದರಕ್ಷೆಗಳಿಗೆ ಅಳವಡಿಸಿ ಪ್ರದರ್ಶಿಸಿದ್ದರು ಎಂದು ಅವರು ತಿಳಿಸಿದ್ದಾರೆ.
ರಿಯಾನ ಸೊನಾಲಿ ಪಿಂಟೊ ಇವರ ತಂದೆ ರೋಷನ್ ಪಿಂಟೊ ಮಾದರಿ ತಯಾರಿಯಲ್ಲಿ ಸಹಕರಿಸಿ ಮಾರ್ಗದರ್ಶನ ನೀಡಿದ್ದರು. ಶಾಲಾ ಶಿಕ್ಷಕಿ  ಕೇಶವತಿ ವಿದ್ಯಾರ್ಥಿನಿಯರ ಜೊತೆಗೆ ಅರ್ಹತಾ ಪತ್ರ ಸ್ವೀಕರಿಸಿದರು.

More from the blog

ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ – ದಿನೇಶ್ ಗುಂಡೂರಾವ್.. 

ಮಂಗಳೂರು : ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ ಕೈ ಗೊಳ್ಳಲಾಗುವುದುಎಂದು ಅರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಅವರು...

ಕಾರ್ಮಿಕರ ಅಖಿಲ ಭಾರತ ಮುಷ್ಕರದ ಅಂಗವಾಗಿ ಕಾರ್ಮಿಕರ ಪ್ರತಿಭಟನೆ..

ಬಂಟ್ವಾಳ : ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಹಾಗೂ ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ವಿರೋಧಿಸಿ ಕಾರ್ಮಿಕ ಸಂಘಟನೆಗಳಿಂದ ಅಖಿಲ ಭಾರತ ಮುಷ್ಕರದ ದ ಅಂಗವಾಗಿ ಜೆ.ಸಿ.ಟಿ.ಯು ಮತ್ತು ಸಂಯುಕ್ತ ಹೋರಾಟ...

ಭಾರೀ ಮಳೆ ಮುನ್ಸೂಚನೆ : ಒಂದು ವಾರ ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್..

ಮಂಗಳೂರು : ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಜುಲೈ 14ರವರೆಗೆ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು,...

ಕುಡ್ತಮುಗೇರು: ಬಸ್ಸಿನಿಂದ ರಸ್ತೆಗೆ ಬಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು 

ವಿಟ್ಲ: ಖಾಸಗಿ ಬಸ್ಸಿನಿಂದ ಬಿದ್ದ ವ್ಯಕ್ತಿಯೋರ್ವರು ಚಿಕಿತ್ಸೆಗೆ ಸ್ಪಂಧಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕುಡ್ತಮುಗೇರು ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಕೊಡಂಗೆ ನಿವಾಸಿ ಚಿದಾನಂದ ರೈ (43 ವ.) ಮೃತಪಟ್ಟವರು. ಜು.7ರಂದು ಬೆಳಗ್ಗೆ...