Sunday, February 9, 2025

ನೀರಿಗೆ ಬಿದ್ದು ಅಯ್ಯಪ್ಪ ವ್ರತಾಧಾರಿ ಮೃತ

ಬಂಟ್ವಾಳ: ನೇತ್ರಾವತಿ ನದಿಗೆ ಸ್ನಾನ ಮಾಡಲು ಹೋದ ಅಯ್ಯಪ್ಪ ವ್ರತಾಧಾರಿಯೋರ್ವ ನೀರಿಗೆ ಬಿದ್ದು ಮೃತಪಟ್ಟ ಘಟನೆ ತುಂಬೆ ಡ್ಯಾಂ ಬಳಿ ನಡೆದಿದೆ.
ಕಳ್ಳಿಗೆ ಗ್ರಾಮದ ಮಾಡಂಗೆ ನಿವಾಸಿ ರಾಜ ಅವರ ಪುತ್ರ ಹರಿಪ್ರಸಾದ್ ( 23) ಅವರು ಮೃತಪಟ್ಟ ದುರ್ದೈವಿ .
ನಾಲ್ಕನೇ ಬಾರಿ ಶಬರಿಮಲೆ ಯಾತ್ರೆ ಕೈಗೊಂಡ ಇವರು ಈ ಬಾರಿ ಐದನೇ ಬಾರಿ ಶಬರಿಮಲೆಗೆ ತೆರಳಲಿದ್ದರು.
ನಾಳೆ ಬೆಳಿಗ್ಗೆ ಇವರು ಗಿರೀಶ್ ಗುರುಸ್ವಾಮಿಯ ಮತ್ತು ಸ್ನೇಹಿತರ ಜೊತೆ ಶಬರಿಮಲೆಗೆ ತೆರಳಲಿದ್ದರು.‌


ಬಂಟ್ವಾಳ ತಾಲೂಕಿನ ಕಳ್ಳಿಗೆ ಗ್ರಾಮದ ದೇವಂದಬೆಟ್ಟು ಲಕ್ಮೀ ವಿಷ್ಣು ಮೂರ್ತಿ ದೇವಸ್ಥಾನದಲ್ಲಿ ಇವರು ಮಾಲಾಧಾರಿಯಾಗಿ ತಂಗುತ್ತಿದ್ದರು. ಎಂದಿನಂತೆ ಇಂದು ಸುಮಾರು 11.30 ವೇಳೆ 5 ಜನ ಅಯ್ಯಪ್ಪ ಮಾಲಾಧಾರಿಗಳ ಜೊತೆ ತುಂಬೆ ಡ್ಯಾಂ ನ ಕೆಳಭಾಗಕ್ಕೆ ಸ್ನಾನ ಮಾಡಲೆಂದು ತೆರಳಿದ್ದರು. ಆದರೆ ಇವರಿಗೆ ಮೂರ್ಚೆ ಹೋಗುವ ಕಾಯಿಲೆ ಇದ್ದು ಇವತ್ತು ಕೂಡಾ ನೀರಿಗೆ ಇಳಿದು ಸ್ನಾನ ಮಾಡುವ ವೇಳೆ ಮೂರ್ಚೆ ಕಾಯಿಲೆ ಬಂದು ಮೃತಪಟ್ಟಿರಬೇಕು ಎಂದು ಇವರ ಜೊತೆ ತೆರಳಿದ ಸ್ನೇಹಿತರು ಸಂಶಯ ವ್ಯಕ್ತಪಡಿಸಿದ್ದಾರೆ.
ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಎಸ್.ಐ.ಪ್ರಸನ್ನ ಹಾಗೂ ಸಿಬ್ಬಂದಿ ಜಯರಾಮ್ ಕಾಯರಾ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

More from the blog

ದೆಹಲಿಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ…. ಸಿದ್ದಕಟ್ಟೆ ಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ*

  ದೆಹಲಿ ವಿಧಾನ ಸಭೆಗೆ ನಡೆದ ಚುನಾವಣೆ ಯಲ್ಲಿ ಭಾರತೀಯ ಜನತಾ ಪಕ್ಷ 70 ಸ್ಥಾನ ಗಳಲ್ಲಿ ಬರೋಬ್ಬರಿ 48 ಸ್ಥಾನ ಗಳನ್ನು ಗೆಲ್ಲುವ ಮೂಲಕ ಭರ್ಜರಿ ಜಯಭೇರಿ ಗಳಿಸುವುದರೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರ...

ಜುಗಾರಿ ಅಡ್ಡೆಗೆ ದಾಳಿ: ಹತ್ತು ಜನರ ಬಂಧನ

ಬಂಟ್ವಾಳ: ಹಣ ಪಣಕ್ಕಿಟ್ಟು ಜುಗಾರಿ ಆಟ ಆಡುತ್ತಿದ್ದ ಅಡ್ಡೆಗೆ ದಾಳಿ ನಡೆಸಿದ ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ನೇತ್ರತ್ವದ ತಂಡ ಆಟದಲ್ಲಿ ನಿರತರಾಗಿದ್ದ 10 ಮಂದಿ ಆರೋಪಿಗಳನ್ನು ಹಾಗೂ ಸಾವಿರಾರು...

ಮಾರ್ಬಲ್ ಲಾರಿ ಪಲ್ಟಿ

ಬಂಟ್ವಾಳ: ಮಾರ್ಬಲ್ ಲೋಡ್ ಲಾರಿಯೊಂದು ತಾಂತ್ರಿಕ ದೋಷದಿಂದ ರಸ್ತೆಯ ವಿಭಾಜಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ರಾಷ್ಟ್ರೀಯ ಮಂಗಳೂರು- ಬೆಂಗಳೂರು ರಸ್ತೆಯ ತುಂಬೆ ಸಮೀಪದ ರಾಮಲ್ ಕಟ್ಟೆ ಎಂಬಲ್ಲಿ ಪಲ್ಟಿಯಾಗಿದೆ. ಘಟನೆಯಿಂದ ಯಾವುದೇ ಅಪಾಯ...

ಗಣಿ ಇಲಾಖೆ ಅಧಿಕಾರಿ ವಿರುದ್ಧ ಕ್ರಮಕ್ಕೆ ಸೂಚನೆ

ಬಂಟ್ವಾಳ : ಬಂಟ್ವಾಳದಲ್ಲಿ ಫೆ. 5 ರಂದು ನಡೆದ ಜನತಾದರ್ಶನಕ್ಕೆ ಗೈರು ಹಾಜರಾದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಲು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್...