Friday, July 11, 2025

ವಾಮದಪದವು: ಕಲ್ಪವೃಕ್ಷ ತೆಂಗು ಬೆಳೆಗಾರರ ಸೊಸೈಟಿ ಉದ್ಘಾಟಣೆ

ಬಂಟ್ವಾಳ : ಇಂದು ಕೃಷಿ ಕ್ಷೇತ್ರ ವಿಸ್ತಾರಗೊಂಡಿದ್ದು, ವಿಫುಲ ಅವಕಾಶಗಳಿವೆ. ಸ್ವತ: ಕೃಷಿಯಲ್ಲಿ ತೊಡಗಿಸಿಕೊಳ್ಳುವುದರಿಂದ ಲಾಭ ಗಳಿಸಿ ಸ್ವಾವಲಂಬನೆಯ ಬದುಕು ಸಾಧ್ಯ. ಕಾಲ ಕಾಲಕ್ಕೆ ಪರ್ಯಾಯ ಬೆಳೆಗಳನ್ನು ಬೆಳೆಸುವುವ ಮೂಲಕ ಕೃಷಿಕರು ಸಮಯದ ಸದ್ಬಳಕೆ ಮಾಡಬೇಕು. ಇದರಿಂದ ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಸಾಧ್ಯವಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಅವರು ಹೇಳಿದರು.
ಅವರು ಶನಿವಾರ ವಾಮದಪದವು ಶ್ರೀ ಗಣೇಶ ಮಂದಿರದಲ್ಲಿ ಬಂಟ್ವಾಳ ತಾಲೂಕು ವಾಮದಪದವು ಕಲ್ಪವೃಕ್ಷ ತೆಂಗು ಬೆಳೆಗಾರರ ಸೊಸೈಟಿಯನ್ನು ಮತ್ತು ಬಂಟ್ವಾಳ ಸಹಾಯಕ ತೋಟಗಾರಿಕಾ ಇಲಾಖೆ ವತಿಯಿಂದ ನಡೆದ ರೈತರಿಗೆ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ವಾಮದಪದವು ಕಲ್ಪವೃಕ್ಷ ತೆಂಗು ಬೆಳೆಗಾರರ ಸೊಸೈಟಿ ಅಧ್ಯಕ್ಷ ವಿಜಯ ರೈ ಆಲದಪದವು ಅವರು ಅಧ್ಯಕ್ಷತೆ ವಹಿಸಿದ್ದರು.
ರಾಜ್ಯ ಬಿಜೆಪಿ ಸಹವಕ್ತಾರೆ ಸುಲೋಚನ ಜಿ.ಕೆ. ಭಟ್ ಅವರು ಮಾತನಾಡಿ, ತೆಂಗು ಬೆಳೆಗಾರರನ್ನು ಪ್ರೋತ್ಸಾಹಿಸಲು ಕೇಂದ್ರ ಹಾಗೂ ರಾಜ್ಯ ಸರಕಾರ ಹೆಚ್ಚಿನ ನೆರವು ನೀಡುತ್ತಿದೆ. ತೆಂಗು ಬೆಳೆಗಾರರು ಇದನ್ನು ಸದ್ಬಳಕೆ ಮಾಡಿಕೊಂಡು ಆಭಿವೃದ್ಧಿ ಹೊಂದಬೇಕು ಎಂದು ಹೇಳಿದರು.
ಜಿ.ಪಂ. ಸದಸ್ಯ ಎಂ. ತುಂಗಪ್ಪ ಬಂಗೇರ, ತಾ.ಪಂ. ಸದಸ್ಯೆ ರತ್ನಾವತಿ ಜೆ.ಶೆಟ್ಟಿ, ಚೆನ್ನೈತ್ತೋಡಿ ಗ್ರಾ.ಪಂ.ಅಧ್ಯಕ್ಷ ಯತೀಶ್ ಎಂ. ಶೆಟ್ಟಿ, ದ.ಕ. ಮತ್ತು ಉಡುಪಿ ಜಿಲ್ಲಾ ಹಾಪ್ ಕಾಮ್ಸ್ ಅಧ್ಯಕ್ಷ ಕೆ. ಲಕ್ಷ್ಮಿ ನಾರಾಯಣ ಉಡುಪ, ಚೆನ್ನೈತ್ತೋಡಿ ಗ್ರಾ.ಪಂ.ಸದಸ್ಯ ಜಯರಾಮ ಶೆಟ್ಟಿ ಕಾಪು, ಹಾಪ್‌ಕಾಮ್ಸ್ ನಿರ್ದೇಶಕ ಜಯ ಕುಮಾರ್, ಲ್ಯಾಂಪ್ ಸೊಸೈಟಿ ಅಧ್ಯಕ್ಷ ಸುಂದರ ನಾಯ್ಕ, ವಾಮದಪದವು ವ್ಯ.ಸೇ.ಸ.ಸಂಘದ ಅಧ್ಯಕ್ಷ ಯಶೋಧರ ಶೆಟ್ಟಿ ದಂಡೆ, ವಾಮದಪದವು ಕಲ್ಪವೃಕ್ಷ ತೆಂಗು ಬೆಳೆಗಾರರ ಸೊಸೈಟಿ ನಿರ್ದೇಶಕರು ಉಪಸ್ಥಿತರಿದ್ದರು.
ಮಂಗಳೂರು ತೋಟಗಾರಿಕಾ ಹಿರಿಯ ಸಹಾಯಕ ನಿರ್ದೇಶಕ ಪ್ರದೀಪ್ ಡಿಸೋಜ, ಬಂಟ್ವಾಳ ಕೃಷಿ ಇಲಾಖೆ ಸಹಾಯಕ ನಿರ್ದೇಶಕರು ಕೆ. ನಾರಾಯಣ ಶೆಟ್ಟಿ, ಬಂಟ್ವಾಳ ಸಹಾಯಕ ತೋಟಗಾರಿಕಾ ನಿರ್ದೇಶಕ ದಿನೇಶ್ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಹಾಪ್‌ಕಾಮ್ಸ್ ವತಿಯಿಂದ ರೈತರಿಗೆ ತರಕಾರಿ ಬೀಜ ಮತ್ತು ಚೆನ್ನೈತ್ತೋಡಿ ಗ್ರಾ.ಪಂ. ವ್ಯಾಪ್ತಿಯ ಅರ್ಹ ಫಲಾನುಭವಿಗಳಿಗೆ ಕೇಂದ್ರ ಸರಕಾರದ ಉಜ್ವಲಾ ಯೋಜನೆಯ ಗ್ಯಾಸ್ ಸೌಲಭ್ಯವನ್ನು ಶಾಸಕ ರಾಜೇಶ್ ನಾಕ್ ಅವರು ವಿತರಿಸಿದರು.
ಹಾಪ್‌ಕಾಮ್ಸ್ ಕಾರ್ಯದರ್ಶಿ ಪ್ರಭಾಕರ ಜೈನ್ ಸ್ವಾಗತಿಸಿದರು. ನಿವೃತ್ತ ಬ್ಯಾಂಂಕ್ ಅಽಕಾರಿ ಜಿ.ಕೆ.ಭಟ್ ಪ್ರಸ್ತಾವಿಸಿದರು. ಮಂಗಳೂರು ಜನತಾ ಬಜಾರ್ ನಿರ್ದೇಶಕ ಪುರುಷೋತ್ತಮ ಶೆಟ್ಟಿ ವಂದಿಸಿದರು. ಉಪನ್ಯಾಸಕಿ ಮಲ್ಲಿಕಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

More from the blog

ಕುಂಜರ್ಕಳದ ತಡೆಗೋಡೆ, ಬಸ್ಸು ತಂಗುದಾಣ, ಹೈಮಾಸ್ಟ್ ದೀಪ ಉದ್ಘಾಟಿಸಿದ ಯು.ಟಿ.ಖಾದರ್..

ಬಂಟ್ವಾಳ: ಶಾಸಕರ ಅನುದಾನದಿಂದ ನಿರ್ಮಾಣಗೊಂಡ ಪುದು ಗ್ರಾಮದ ಕುಂಜರ್ಕಳದ ತಡೆಗೋಡೆ, ೧೦ನೇ ಮೈಲುಕಲ್ಲು ಬಳಿ ಬಸ್ಸು ತಂಗುದಾಣ ಹಾಗೂ ತ್ವಾಹಾ ಜುಮಾ ಮಸೀದಿ ಬಳಿ ಅನುಷ್ಠಾನಗೊಂಡ ಹೈಮಾಸ್ಟ್ ದೀಪವನ್ನು ಸ್ಪೀಕರ್ ಯು.ಟಿ.ಖಾದರ್ ಅವರು...

ಗುರು ಪೂರ್ಣಿಮೆಯ ಪ್ರಯುಕ್ತ ನಿವೃತ ಶಿಕ್ಷಕಿ ಲಕ್ಷ್ಮೀ ಅವರಿಗೆ ಗೌರವರ್ಪಣೆ 

ಬಂಟ್ವಾಳ : ಗುರು ಪೂರ್ಣಿಮೆಯ ಪ್ರಯುಕ್ತ ಸಜೀಪ ಮುನ್ನೂರು ಬಿಜೆಪಿ ಗ್ರಾಮ ಸಮಿತಿಯ 4ನೇ ವಾರ್ಡಿನ ಬೊಕ್ಕಸ ನಿವಾಸಿಯಾದ ನಿವೃತ ಶಿಕ್ಷಕಿಯಾದ ಮಾತೃ ವಾತ್ಸಲ್ಯದ ಲಕ್ಷ್ಮೀ ಟೀಚರ್ ಇವರಿಗೆ ಬಿಜೆಪಿ ಮುಖಂಡರು ಮಾಜಿ...

ಕೆಂಪುಕಲ್ಲು, ಮರಳು ಸಮಸ್ಯೆ : ಜು.14ಕ್ಕೆ ಬಂಟ್ವಾಳ ತಾಲೂಕು ಕೇಂದ್ರದಲ್ಲಿ ಪ್ರತಿಭಟನೆ..

ಬಂಟ್ವಾಳ :ಕಾಂಗ್ರೆಸ್ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರದ ದುರಡಳಿತ ನೀತಿಯಿಂದಾಗಿ ದಕ್ಷಿಣ ಕನ್ನಡ ಜೆಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ಕ್ರತಕ ಅಭಾವ ಸ್ರಷ್ಟಿಸಿರುವುದರಿಂದ ತೀವ್ರ ಸಮಸ್ಯೆಯಿಂದ ಬಡವರು ನಿರ್ಮಿಸುತ್ತಿರುವ ಸಾವಿರಾರು ಮನೆಗಳು...

ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆ : ನೂತನ ಕಟ್ಟಡಕ್ಕೆ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲು ಶಾಸಕ ರಾಜೇಶ್ ನಾಯ್ಕ್ ನಿರ್ದೇಶನ..

ಬಂಟ್ವಾಳ: ದ.ಕ.ಜಿಲ್ಲೆಗೆ ಮಂಜೂರಾಗಿರುವ ಏಕೈಕ ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆಗೆ ನೂತನ ಸುಸಜ್ಜಿತ ‌ಕಟ್ಟಡ ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು,ವಿದ್ಯಾರ್ಥಿಗಳ ಅನುಕೂಲತೆಯ ದೃಷ್ಟಿಯಿಂದ ಶೀಘ್ರ ಹೊಸ ಕಟ್ಟಡಕ್ಕೆ ಸ್ಥಳಾಂತರಿಸುವಂತೆ ಬಂಟ್ವಾಳ...