ಬಂಟ್ವಾಳ: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತ 2018-19 ನೇ ಸಾಲಿನ ಮೈಕ್ರೊ ಕ್ರೆಡಿಟ್ ಯೋಜನೆಯಲ್ಲಿ ಮಂಜೂರಾದ ಸಬ್ಸಿಡಿ ಸಾಲದ ಫಲಾನುಭವಿ ಸಂಘಗಳಾದ ಧನಲಕ್ಷ್ಮೀ ಸ್ತ್ರೀ ಶಕ್ತಿ ಸ್ವಸಹಾಯ ಸಂಘ ಮತ್ತು ಜನನಿ ನಾಗಶ್ರೀ ಸ್ತ್ರೀ ಶಕ್ತಿ ಸ್ವಸಹಾಯ ಸಂಘ, ಕುಂಟ್ರಕಲ ಇದರ ಸದಸ್ಯರುಗಳಿಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಮಂಜೂರಾತಿ ಪತ್ರವನ್ನು ಶಾಸಕರ ಕಚೇರಿಯಲ್ಲಿ ವಿತರಿಸಿದರು.ಈ ಸಂದರ್ಭದಲ್ಲಿ ನಿಗಮದ ಅಧಿಕಾರಿ ಶಿವರಾಮ್ ಉಪಸ್ಥಿತರಿದ್ದರು.















