Tuesday, July 15, 2025

“ಮಳ್’ಹರ್ ಪೊಸೋಟ್ ಶರೀಅತ್ ವಿಭಾಗ” ಮುಹ್ಯದ್ದೀನ್ ಮಾಲೆ ಸ್ಪರ್ಧೆಯಲ್ಲಿ ಪ್ರಥಮ

ಬಂಟ್ವಾಳ: ಎಸ್.ಎಸ್.ಎಫ್. ಇರಾಮೂಲೆ ಶಾಖೆಯ ವತಿಯಿಂದ ಪ್ರತಿಷ್ಠಿತ 12 ತಂಡಗಳ ಮಧ್ಯೆ ಆವೇಶಭರಿತ ಮುಹ್ಯದ್ದೀನ್ ಮಾಲೆ ಸ್ಪರ್ಧೆ ನಡೆಯಿತು. ಕಾರ್ಯಕ್ರಮವನ್ನು ಎನ್.ಡಿ. ಅಬೂಬಕರ್ ಮದನಿ ಉದ್ಘಾಟಿಸಿದರು.


ಈ ಸ್ಪರ್ಧೆಯಲ್ಲಿ ಪೊಸೋಟ್ ಮಳ್ಹರ್ ಶರೀಅತ್ ವಿಭಾಗ ಪ್ರಥಮ ಸ್ಥಾನ ಪಡೆದರು. ಪೊಸೋಟ್ ಮಳ್ಹರ್ ದಅ್’ವಾ ವಿಭಾಗ ದ್ವಿತೀಯ ಸ್ಥಾನ ಪಡೆದಕೊಂಡು, ಕೊಡಗು ತಂಡ ತೃತೀಯ ಸ್ಥಾನ ಪಡೆದುಕೊಂಡರು.
ಅಬೂಬಕರ್ ಸಖಾಪಿ ಮೂಲೆ ಸ್ವಾಗತಿಸಿದರು. ಇರಾ ಗ್ರಾಮ ಪಂಚಾಯತ್ ಅಧ್ಯಕ್ಷ ಅಬ್ದುರ್ರಝಾಕ್ ಕುಕ್ಕಾಜೆ ಪ್ರಾಸ್ತಾವಿಕ ಭಾಷಣ ಹಾಗೂ ವಿಜೇತ ತಂಡಗಳಿಗೆ ಟ್ರೋಪಿ ವಿತರಿಸಿದರು.

ಕಾರ್ಯಕ್ರಮದಲ್ಲಿ ಪಂಚಾಯತ್ ಸದಸ್ಯರಾದ ಮೊಯ್ದಿನ್ ಕುಂಞ್ಞಿ ಮೂಲೆ, ಉಮರ್ ಪರಪ್ಪು, ಗೋಪಾಲ ಅಶ್ವತ್ಥಡಿ, ಮೊಹಲ್ಲಾದ ಸಹ ಅದ್ಯಾಪಕ ರಫೀಕ್ ಮಿಸ್ಬಾಹಿ, ಹಾಫಿಳ್ ಸುಲೈಮಾನ್ ಹನೀಫಿ ಪಾಣೆಮಂಗಳೂರು, ಹಮೀದ್ ಮದನಿ ಬೋಳಂತೂರು
ಮತ್ತಿತ್ತರು ಉಪಸ್ಥಿತರಿದ್ದರು.

More from the blog

ತುಳುರಂಗಭೂಮಿ‌ ಕಲಾವಿದ ಮೌನೇಶ ಆಚಾರ್ಯ ನಿಧನ..

ಬಂಟ್ವಾಳ : ಪ್ರತಿಭಾನ್ವಿತ ಯುವಕ, ತುಳುರಂಗಭೂಮಿ‌ ಕಲಾವಿದ, ಕಾಪಿಕಾಡು‌ ನಿವಾಸಿ ಮೌನೇಶ ಆಚಾರ್ಯ ಮಾಣಿ(44) ಇವರು ಮಂಗಳವಾರ ಮುಂಜಾನೆ ತಮ್ಮ‌ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾದರು. ಚಿನ್ನದ ಕೆಲಸ‌ಮಾಡುತ್ತಿದ್ದ ಇವರು ಜೊತೆಗೆ ಮನೆಸಮೀಪವೇ ಚಿಕ್ಕ‌ ದಿನಸಿ‌ ಅಂಗಡಿ...

ಬಂಟ್ವಾಳ ತಾಲೂಕಿನ ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಸ್ವಯಂ ಸೇವಕರ ತರಬೇತಿ ಹಾಗೂ ವಾರ್ಷಿಕ ಸಭೆ..

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.) ಬಂಟ್ವಾಳ ತಾಲೂಕಿನ ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಸ್ವಯಂ ಸೇವಕರ ತರಬೇತಿ ಹಾಗೂ ವಾರ್ಷಿಕ ಸಭೆ ಸೋಮವಾರ...

ನಿರಂತರ ಮಳೆ : ಬಂಟ್ವಾಳ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ದಿನಾಂಕ 15.07.2025ರಂದು ರಜೆ ಘೋಷಿಸಲಾಗಿದೆ ಎಂದು ತಹಶೀಲ್ದಾರ್...

ಒಡಿಯೂರು ಶ್ರೀ ಜನ್ಮದಿನೋತ್ಸವ ಸೇವಾ ಸಂಭ್ರಮದ ಅಂಗವಾಗಿ ಬೃಹತ್ ಉಚಿತ ವೈದ್ಯಕೀಯ ಶಿಬಿರ

ವಿಟ್ಲ : ನಮ್ಮ ಶಾರೀರಿಕ ಮತ್ತು ಮಾನಸಿಕ ಆರೋಗ್ಯ ಬದುಕಿನ ಉತ್ತುಂಗಕ್ಕೆ ಕಾರಣವಾಗುತ್ತದೆ. ಬದುಕು ಪೂರ್ತಿ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಋತುವಿಗನುಗುಣವಾಗಿ ಹಿತ, ಮಿತ ಆಹಾರ ಸೇವಿಸಿದಾಗ ಉತ್ತಮ ಆರೋಗ್ಯ ಪಡೆಯಬಹುದು...