Thursday, February 13, 2025

ದಕ್ಷಿಣ ಭಾರತ ವಿಜ್ಞಾನ ಮೇಳದಲ್ಲಿ ಕಾರ್ಮೆಲ್ ಶಾಲೆಗೆ ಪ್ರಶಸ್ತಿ

ಬಂಟ್ವಾಳ: ತಮಿಳುನಾಡು ಸರ್ಕಾರ ಸಾರ್ವಜನಿಕ ಶಿಕ್ಷಣ ಇಲಾಖೆ, ಬೆಂಗಳೂರು ವಿಶ್ವೇಶ್ವರಯ್ಯ ಇಂಡಸ್ಟ್ರಿಯಲ್ ಆಂಡ್ ಟೆಕ್ನೊಲೊಜಿಕಲ್ ಮ್ಯೂಸಿಯಂ ಇವರ ಸಹಯೋಗದಲ್ಲಿ ಸತ್ಯಭಾಮ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ ಆಂಡ್ ಟೆಕ್ನೋಲೊಜಿ ಚೆನೈ, ತಮಿಳುನಾಡು ಇಲ್ಲಿ ಜನವರಿ 18ರಿಂದ ಫೆಬ್ರವರಿ 1ರವರೆಗೆ 33ನೇ ದಕ್ಷಿಣ ಭಾರತ ವಿಜ್ಞಾನ ಮೇಳವನ್ನು ಆಯೋಜಿಸಲಾಗಿತ್ತು. ಮೊಡಂಕಾಪು ಕಾರ್ಮೆಲ್ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿನಿಯರಾದ ನಿಕಿತ ಹಾಗೂ ಹಿತಾಕ್ಷಿ ಇವರು ತಯಾರಿಸಿದ ಮಾದರಿ ’ಕೇರ್ ಟೇಕರ್ ವಾಕಿಂಗ್ ಸ್ಟಿಕ್’ ಈ ಸ್ಪರ್ಧೆಗೆ ಆಯ್ಕೆಗೊಂಡು ನಾಲ್ಕನೇ ಸ್ಥಾನವನ್ನು ಪಡೆದಿದೆ.


ಅತ್ಯಾಧುನಿಕ ಮನೆಗಳಲ್ಲಿ ನೆಲಕ್ಕೆ ಹಾಸಿರುವ ಗ್ರಾನೈಟ್, ಮಾರ್ಬಲ್, ಟೈಲ್ಸ್‌ಗಳ ಮೇಲೆ ಬಿದ್ದಿರುವ ನೀರು ಗಮನಕ್ಕೆ ಬಾರದೆ ಜಾರಿ ಬೀಳುವ ಸಾಧ್ಯತೆ ಇರುತ್ತದೆ. ನೆಲದ ಮೇಲಿನ ನೀರಿನ ಇರುವಿಕೆಯನ್ನು ಮೊದಲೇ ಮುನ್ಸೂಚಿಸುವ ಈ ವಾಕಿಂಗ್ ಸ್ಟಿಕ್ ಹಿರಿಯ ನಾಗರಿಕರಿಗೆ ಈ ಅಪಾಯದಿಂದ ರಕ್ಷಿಸುತ್ತದೆ. ಇದೇ ತಂತ್ರಜ್ಞಾನವನ್ನು ಪಾದರಕ್ಷೆಗಳಿಗೂ ಅಳವಡಿಸಿ ವಿದ್ಯಾರ್ಥಿಗಳು ಯಶಸ್ವಿಯಾಗಿದ್ದಾರೆ. ಈ ಮಾದರಿ ತೀರ್ಪುಗಾರರ ಮೆಚ್ಚುಗೆಗೆ ಪಾತ್ರವಾಗಿತ್ತು.
ಕರ್ನಾಟಕ, ಕೇರಳ, ತಮಿಳುನಾಡು, ತೆಲಂಗಾಣ, ಆಂಧ್ರಪ್ರದೇಶ ಹಾಗೂ ಪುದುಚೇರಿ ರಾಜ್ಯಗಳಿಂದ ಸುಮಾರು ೨೭೫ ಮಾದರಿಗಳು ಪ್ರದರ್ಶಿಸಲ್ಪಟ್ಟಿದ್ದವು. ಕಾರ್ಮೆಲ್ ಶಾಲೆ ಹತ್ತನೇ ಬಾರಿ ಈ ವಿಜ್ಞಾನ ಮೇಳದಲ್ಲಿ ಪ್ರತಿನಿಧಿಸುತ್ತದೆ. ಶ್ರೀನಿವಾಸ ಇನ್‌ಸ್ಟಿಟ್ಯೂಟ್ ಆಪ್ ಟೆಕ್ನಾಲಾಜಿ ವಳಚ್ಚಿಲ್ ಇಲ್ಲಿಯ ಪ್ರೊ. ಸತೀಶ್ ಇವರು ಸಹಕರಿಸಿದ್ದರು. ವಿಜ್ಞಾನ ಶಿಕ್ಷರಾದ ಶ್ರೀ. ರೋಶನ್ ಪಿಂಟೊರವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಈ ಮಾದರಿಯನ್ನು ತಯಾರಿಸಿರುತ್ತಾರೆ. ಮುಖ್ಯ ಶಿಕ್ಷಕಿ ಭಗಿನಿ ನವೀನ ಎ.ಸಿ. ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.

 

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...