Friday, January 30, 2026

ದಕ್ಷಿಣ ಭಾರತ ವಿಜ್ಞಾನ ಮೇಳದಲ್ಲಿ ಕಾರ್ಮೆಲ್ ಶಾಲೆಗೆ ಪ್ರಶಸ್ತಿ

ಬಂಟ್ವಾಳ: ತಮಿಳುನಾಡು ಸರ್ಕಾರ ಸಾರ್ವಜನಿಕ ಶಿಕ್ಷಣ ಇಲಾಖೆ, ಬೆಂಗಳೂರು ವಿಶ್ವೇಶ್ವರಯ್ಯ ಇಂಡಸ್ಟ್ರಿಯಲ್ ಆಂಡ್ ಟೆಕ್ನೊಲೊಜಿಕಲ್ ಮ್ಯೂಸಿಯಂ ಇವರ ಸಹಯೋಗದಲ್ಲಿ ಸತ್ಯಭಾಮ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ ಆಂಡ್ ಟೆಕ್ನೋಲೊಜಿ ಚೆನೈ, ತಮಿಳುನಾಡು ಇಲ್ಲಿ ಜನವರಿ 18ರಿಂದ ಫೆಬ್ರವರಿ 1ರವರೆಗೆ 33ನೇ ದಕ್ಷಿಣ ಭಾರತ ವಿಜ್ಞಾನ ಮೇಳವನ್ನು ಆಯೋಜಿಸಲಾಗಿತ್ತು. ಮೊಡಂಕಾಪು ಕಾರ್ಮೆಲ್ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿನಿಯರಾದ ನಿಕಿತ ಹಾಗೂ ಹಿತಾಕ್ಷಿ ಇವರು ತಯಾರಿಸಿದ ಮಾದರಿ ’ಕೇರ್ ಟೇಕರ್ ವಾಕಿಂಗ್ ಸ್ಟಿಕ್’ ಈ ಸ್ಪರ್ಧೆಗೆ ಆಯ್ಕೆಗೊಂಡು ನಾಲ್ಕನೇ ಸ್ಥಾನವನ್ನು ಪಡೆದಿದೆ.


ಅತ್ಯಾಧುನಿಕ ಮನೆಗಳಲ್ಲಿ ನೆಲಕ್ಕೆ ಹಾಸಿರುವ ಗ್ರಾನೈಟ್, ಮಾರ್ಬಲ್, ಟೈಲ್ಸ್‌ಗಳ ಮೇಲೆ ಬಿದ್ದಿರುವ ನೀರು ಗಮನಕ್ಕೆ ಬಾರದೆ ಜಾರಿ ಬೀಳುವ ಸಾಧ್ಯತೆ ಇರುತ್ತದೆ. ನೆಲದ ಮೇಲಿನ ನೀರಿನ ಇರುವಿಕೆಯನ್ನು ಮೊದಲೇ ಮುನ್ಸೂಚಿಸುವ ಈ ವಾಕಿಂಗ್ ಸ್ಟಿಕ್ ಹಿರಿಯ ನಾಗರಿಕರಿಗೆ ಈ ಅಪಾಯದಿಂದ ರಕ್ಷಿಸುತ್ತದೆ. ಇದೇ ತಂತ್ರಜ್ಞಾನವನ್ನು ಪಾದರಕ್ಷೆಗಳಿಗೂ ಅಳವಡಿಸಿ ವಿದ್ಯಾರ್ಥಿಗಳು ಯಶಸ್ವಿಯಾಗಿದ್ದಾರೆ. ಈ ಮಾದರಿ ತೀರ್ಪುಗಾರರ ಮೆಚ್ಚುಗೆಗೆ ಪಾತ್ರವಾಗಿತ್ತು.
ಕರ್ನಾಟಕ, ಕೇರಳ, ತಮಿಳುನಾಡು, ತೆಲಂಗಾಣ, ಆಂಧ್ರಪ್ರದೇಶ ಹಾಗೂ ಪುದುಚೇರಿ ರಾಜ್ಯಗಳಿಂದ ಸುಮಾರು ೨೭೫ ಮಾದರಿಗಳು ಪ್ರದರ್ಶಿಸಲ್ಪಟ್ಟಿದ್ದವು. ಕಾರ್ಮೆಲ್ ಶಾಲೆ ಹತ್ತನೇ ಬಾರಿ ಈ ವಿಜ್ಞಾನ ಮೇಳದಲ್ಲಿ ಪ್ರತಿನಿಧಿಸುತ್ತದೆ. ಶ್ರೀನಿವಾಸ ಇನ್‌ಸ್ಟಿಟ್ಯೂಟ್ ಆಪ್ ಟೆಕ್ನಾಲಾಜಿ ವಳಚ್ಚಿಲ್ ಇಲ್ಲಿಯ ಪ್ರೊ. ಸತೀಶ್ ಇವರು ಸಹಕರಿಸಿದ್ದರು. ವಿಜ್ಞಾನ ಶಿಕ್ಷರಾದ ಶ್ರೀ. ರೋಶನ್ ಪಿಂಟೊರವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಈ ಮಾದರಿಯನ್ನು ತಯಾರಿಸಿರುತ್ತಾರೆ. ಮುಖ್ಯ ಶಿಕ್ಷಕಿ ಭಗಿನಿ ನವೀನ ಎ.ಸಿ. ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.

 

More from the blog

Bantwal : ಫೆ.1ರಂದು ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರು ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ಫೆ.1ರಂದು ಭಾನುವಾರ ನಡೆಯಲಿದೆ. 2023-24...

ಫೆ.3ರಿಂದ 07ರವರೆಗೆ ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರೆ ಹಾಗೂ ಬ್ರಹ್ಮರಥೋತ್ಸವ

ಬಂಟ್ವಾಳ: ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರಮಹೋತ್ಸವ ಹಾಗೂ ಬ್ರಹ್ಮರಥೋತ್ಸವ ಬ್ರಹ್ಮ ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ಫೆ.3 ರಿಂದ 07 ರವರೆಗೆ ನಡೆಯಲಿದೆ ಎಂದು ಸುಧಾಕರ ಶೆಣೈ ಮರೋಳಿ...

ಫೆ.3ರಂದು ಬಿ.ಸಿ.ರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ಮಹಿಳಾ & ಮಕ್ಕಳ ಸಂಭ್ರಮೋತ್ಸವ

ಬಂಟ್ವಾಳ: ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನ ಸಂಸ್ಥೆ ( ರಿ.) ಬಾಳ್ತಿಲ ಮತ್ತು ಜವಾಹರ್ ಬಾಲ್ ಮಂಚ್ ದ.ಕ. ಇದರ ಸಂಯುಕ್ತ ಆಶ್ರಯದಲ್ಲಿ ಮಹಿಳಾ ಮತ್ತು ಮಕ್ಕಳ ಸಂಭ್ರಮೋತ್ಸವ ಫೆ.3ರಂದು ಮಂಗಳವಾರ...

ಜ.31ರಂದು ಲಯನ್ಸ್ ಇಂಟರ್ನ್ಯಾಷನಲ್ ಪ್ರಾಂತ್ಯ-6ರ ಪ್ರಾಂತೀಯ ಸಮ್ಮಿಲನ ಕಾರ್ಯಕ್ರಮ

ಬಂಟ್ವಾಳ: ಲಯನ್ಸ್ ಇಂಟರ್ನ್ಯಾಷನಲ್ ಪ್ರಾಂತ್ಯ-6ರ ಪ್ರಾಂತೀಯ ಸಮ್ಮಿಲನ ಕಾರ್ಯಕ್ರಮವು ಜ.31ರಂದು ಪ್ರಾಂತೀಯ ಅಧ್ಯಕ್ಷ ಉದ್ಯಮಿ ಬಾಲಕೃಷ್ಣ ಶೆಟ್ಟಿ ಪಿ. ಇವರ ಅಧ್ಯಕ್ಷತೆಯಲ್ಲಿ ಜ.31ರಂದು ಬಜಾರ್ ಆಡಿಟೋರಿಯಂ ಕಂದೂರು ಸಜಿಪಮೂಡದಲ್ಲಿ ನಡೆಯಲಿದೆ ಎಂದು ಸಮ್ಮೇಳನ...