Saturday, February 8, 2025

ಫೆ.7: ಇಳಿಯೂರು ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನ ಟ್ರಸ್ಟ್ ನ ಶ್ರೀ ನಾಗಬ್ರಹ್ಮ, ನಾಗ, ಕೊಡಮಣಿತ್ತಾಯ, ರಕ್ತೇಶ್ವರಿ ಕಲ್ಲುರ್ಟಿ, ಕಲ್ಕುಡ, ತಪಸ್ವೀಕಟ್ಟೆ, ಚಾಮುಂಡಿಗುಳಿಗ ಮತ್ತು ಗುಳಿಗ ದೈವಗಳ ಪ್ರತಿಷ್ಠಾಪನೆ ಮತ್ತು ಆಶ್ಲೇಷಬಲಿ

ಬಂಟ್ವಾಳ: ಮಣಿನಾಲ್ಕೂರು ಗ್ರಾಮದ ಇಳಿಯೂರು ಅಗರಗಂಡಿ ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನ ಟ್ರಸ್ಟ್ ನ ಶ್ರೀ ನಾಗಬ್ರಹ್ಮ, ನಾಗ ಕೊಡಮಣಿತ್ತಾಯ, ರಕ್ತೇಶ್ವರಿ ಕಲ್ಲುರ್ಟಿ, ಕಲ್ಕುಡ, ತಪಸ್ವೀಕಟ್ಟೆ, ಚಾಮುಂಡಿ ಗುಳಿಗ ಮತ್ತು ಗುಳಿಗ ದೈವಗಳ ಪ್ರತಿಷ್ಠಾಪನೆ ಮತ್ತು ಆಶ್ಲೇಷಬಲಿ ಫೆ.7 ರಂದು ಇಳಿಯೂರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಜರಗಲಿದೆ.
ಫೆ.7. ರಂದು ಬೆಳಿಗ್ಗೆ ಗಣಪತಿ ಹೋಮ, ನಂತರ 9.44 ಕ್ಕೆ ಒದಗುವ ಮೀನ ಲಗ್ನದಲ್ಲಿ ನಾಗಪ್ರತಿಷ್ಠೆ ಹಾಗೂ ದೈವಗಳ ಪ್ರತಿಷ್ಠೆ, ಜೀವ ಕಲಶಾಭಿಷೇಕ, ಸಾನಿಧ್ಯ ಕಲಶಾಭಿಷೇಕ, ಆಶ್ಲೇಷ ಬಲಿ ಪೂಜೆ, ಮಹಾಪೂಜೆ, ನಾಗತಂಬಿಲ ನಂತರ ಮದ್ಯಾಹ್ನ 1 ರಿಂದ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ ಎಂದು ಪ್ರಧಾನ ಅರ್ಚಕ ಎಲ್. ಗೋಪಾಲ ಕೃಷ್ಣ ಐತಾಳ್, ಅನುವಂಶಿಕ ಮೊಕ್ತೇಸರ ವಿಜಯ ಕುಮಾರ್‍ ಅಜಿಲ, ಜೀರ್ಣೋಧ್ದಾರ ಸಮಿತಿ ಗೌರಾವಾಧ್ಯಕ್ಷ, ಮಾಜಿ ಸಚಿವ ಬಿ.ರಮಾನಾಥ ರೈ ಹಾಗೂ ಬಲ್ಲೋಡಿಗುತ್ತು ಜೀರ್ಣೋಧ್ದಾರ ಸಮಿತಿ ಅಧ್ಯಕ್ಷ ಬಿ.ಪದ್ಮಶೇಖರ್‍ ಜೈನ್ ತಿಳಿಸಿದ್ದಾರೆ.

 

 

More from the blog

ಗಣಿ ಇಲಾಖೆ ಅಧಿಕಾರಿ ವಿರುದ್ಧ ಕ್ರಮಕ್ಕೆ ಸೂಚನೆ

ಬಂಟ್ವಾಳ : ಬಂಟ್ವಾಳದಲ್ಲಿ ಫೆ. 5 ರಂದು ನಡೆದ ಜನತಾದರ್ಶನಕ್ಕೆ ಗೈರು ಹಾಜರಾದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಲು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್...

ನರ್ಸಿಂಗ್ ವಿದ್ಯಾರ್ಥಿಗಳಿಗೆ ಇಂಟರ್ನ್ ಶಿಪ್ ಕಡ್ಡಾಯಗೊಳಿಸಿ : ಸಂಸದ ಕ್ಯಾ. ಚೌಟ ಆಗ್ರಹ

ನವದೆಹಲಿ: ಮಂಗಳೂರಿನ ವೆನ್ಲಾಕ್ ಸೇರಿ ದೇಶದೆಲ್ಲೆಡೆ ಸರ್ಕಾರಿ ಆಸ್ಪತ್ರೆಗಳಲ್ಲಿ ಎದುರಾಗಿರುವ ನರ್ಸ್ ಗಳ ಕೊರತೆ ನೀಗಿಸಲು ಎಂಬಿಬಿಎಸ್ ಮಾದರಿ ನರ್ಸ್ಗಳಿಗೂ ಇಂಟರ್ನ್ ಶಿಪ್ ಕಡ್ಡಾಯಗೊಳಿಸಬೇಕೆಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ...

ಯುವ ಕಾಂಗ್ರೆಸ್ ಚುನಾವಣೆ ಫಲಿತಾಂಶ ಪ್ರಕಟ : ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹುದ್ದೆಯಲ್ಲಿ ಹಾಶೀರ್ ಪೇರಿಮಾರ್ ಗೆ ಮೊದಲ ಸ್ಥಾನ

ಮಂಗಳೂರು: ಯುವ ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ನಡೆದ ಚುನಾವಣೆಯಲ್ಲಿ ಕರ್ನಾಟಕ ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರು, ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಯು.ಟಿ ಖಾದರ್ ಫರೀದ್ ಅವರ...

ಕಾವಳಮೂಡೂರು : ತೆಂಗಿನ ಗಿಡ ವಿತರಣಾ ಕಾರ್ಯಕ್ರಮ

ಬಂಟ್ವಾಳ : ಕಾವಳಮೂಡೂರು ಗ್ರಾಮ ಪಂಚಾಯತಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ಕೃಷಿ ವಿಜ್ಞಾನ ಕೇಂದ್ರ ಎಕ್ಕೂರು ಮಂಗಳೂರು, ಸಿ. ಪಿ. ಸಿ. ಆರ್. ಐ. ಕಾಸರಗೋಡು, ಡೇ- ಎನ್ ಆರ್...