Wednesday, February 12, 2025

ಭೂ ಬ್ಯಾಂಕ್ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆಗೆ ಹೈಕೋಟ್೯ ತಡೆ

ಬಂಟ್ವಾಳ: ತಾಲೂಕಿನ ಪ್ರತಿಷ್ಠಿತ ಸಹಕಾರಿ ಸಂಸ್ಥೆಯಾದ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನಿಯಮಿತದ ( ಬಂಟ್ವಾಳ ಭೂ ಅಭಿವೃದ್ಧಿ ಬ್ಯಾಂಕ್) ನೂತನ ಆಡಳಿತ ಮಂಡಳಿಯ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆಗೆ ರಾಜ್ಯ ಹೈಕೋಟ್೯ ತಡೆಯಾಜ್ಙೆ ನೀಡಿದೆ. ಬುಧವಾರ(ಫೆ.5) ದಂದು ಬ್ಯಾಂಕಿನ ಆಡಳಿತ ಮಂಡಳಿಯ ನೂತನ ಅಧ್ಯಕ್ಷ- ಉಪಾಧ್ಯಕ್ಷರ ಆಯ್ಕೆಗೆ ಚುನಾವಣಾಧಿಕಾರಿ ದಿನ ನಿಗದಿಪಡಿಸಿದ್ದರು. ಬ್ಯಾಂಕಿನ ನಿರ್ದೇಶಕ ಸ್ಥಾನಗಳಿಗೆ ಜ.25 ರಂದು ನಡೆದ ಚುನಾವಣೆಯಲ್ಲಿ ಬ್ಯಾಂಕಿನ ಮರಣ ಹೊಂದಿರುವ ಸದಸ್ಯರು, ಸಾಲ ಸುಸ್ತಿದಾರರು, ಅನರ್ಹರ ಹೆಸರಿನಲ್ಲಿ  ಮತದಾನ ಮಾಡಲಾಗಿದೆ ಎಂದು ಅಪಾದಿಸಿ  ಬ್ಯಾಂಕಿನ ನಿಕಟಪೂರ್ವ ಅಧ್ಯಕ್ಷ ಸುದರ್ಶನ್ ಜೈನ್ ಅವರು ಹೈಕೋಟ್೯ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು. ಈ ತಕರಾರು ಅರ್ಜಿಯ ವಿಚಾರಣೆ ನಡೆಸಿದ ಹೈಕೋಟ್೯ ಫೆ.5 ರಂದು ಬ್ಯಾಂಕಿನ ಆಡಳಿತ ಮಂಡಳಿಯ ನೂತನ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆಗೆ ದಾವೆಯ ಮುಂದಿನ ವಿಚಾರಣಾ ದಿನದವರೆಗೆ ತಡೆಯಾಜ್ಙೆ ನೀಡಿ ಆದೇಶಿಸಿದೆ. ಜ.25 ಬಂಟ್ವಾಳ ಭೂ ಅಭಿವೃದ್ಧಿ ಬ್ಯಾಂಕ್ ನ 13ರ ಪೈಕಿ 12 ಮಂದಿ ನಿರ್ದೇಶಕ ಸ್ಥಾನಗಳಿಗೆ  ಚುನಾವಣೆ ನಡೆದಿತ್ತು. ಈ ಸಂದರ್ಭದಲ್ಲು ಮತದಾರರ ಪಟ್ಟಿಗೆ ಸಂಬಂಧಿಸಿ ಗೊಂದಲವುಂಟಾಗಿ ಬಿಜೆಪಿ ಮತ್ರು ಕಾಂಗ್ರೆಸ್ ಪಕ್ಷದ ಬೆಂಬಲಿತ ನಾಯಕರೊಳಗೆ ರಂಪಾಟ ನಡೆದ ಹಿನ್ಬಲೆಯಲ್ಲಿ ಒಂದು ತಾಸುಗಳ ಕಾಲ ಮತದಾನವೇ ಸ್ಥಗಿತಗೊಂಡಿತ್ತಲ್ಲದೆ ಪೊಲೀಸರ ಮಧ್ಯಪ್ರವೇಶದಿಂದ ಪರಿಸ್ಥಿತಿ ತಿಳಿಗೊಂಡಿತ್ತು. ಚುನಾವಣೆಯಲ್ಲಿ  ಬಿಜೆಪಿ ಬೆಂಬಲಿತ ಸಹಕಾರ ಭಾರತಿ 7 ಸ್ಥಾನ ಪಡೆದಿತ್ತು.ಕಾಂಗ್ರೆಸ್ 5 ಸ್ಥಾನ ಗಳಿಸಿತ್ತು.,40 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಬಂಟ್ಚಾಳ ಭೂ ಅಭಿವೃದ್ಧಿ ಬ್ಯಾಂಕ್ ನ ಆಡಳಿತ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ತೆಕ್ಕೆಗೆ ಬಂದಿತ್ತು.

More from the blog

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...