Wednesday, February 12, 2025

ತೃಪ್ತಿ ಮತ್ತು ಮಾನವೀಯತೆ ವಿದ್ಯಾರ್ಥಿಗಳು ಅಳವಡಿಸಿಕೊಳ್ಳಿ: ಸಂತೋಷ್ ಹೆಗ್ಡೆ

ಬಂಟ್ವಾಳ: ತೃಪ್ತಿ ಹಾಗೂ ಮಾನವೀಯತೆ ಎನ್ನುವ ಎರಡು ಮೌಲ್ಯಗಳನ್ನು ವಿದ್ಯಾರ್ಥಿಗಳು ತಮ್ಮಲ್ಲಿ ಅಳವಡಿಸಿಕೊಂಡಾಗ ಮಾತ್ರ ಪರಿಶುದ್ದವಾದ ಜೀವನ ನಡೆಸಲು ಸಾಧ್ಯವಿದೆ ಎಂದು ನಿವೃತ್ತ ಲೋಕಾಯುಕ್ತ ಜಸ್ಟೀಸ್ ಎನ್. ಸಂತೋಷ್ ಹೆಗ್ಡೆ ಹೇಳಿದರು.
ಅಂತರಾಷ್ಟ್ರೀಯ ಲಯನ್ಸ್ ಸೇವಾ ಸಂಸ್ಥೆಯ ಆಶ್ರಯದಲ್ಲಿ ಯುವವಾಹಿನಿ ಬಂಟ್ವಾಳ ಮತ್ತು ಲಯನ್ಸ್ ಕ್ಲಬ್ ಬಂಟ್ವಾಳ ಆತಿಥ್ಯದಲ್ಲಿ ಬಂಟ್ವಾಳ ಸ್ಪರ್ಶ ಕಲಾ ಮಂದಿರದಲ್ಲಿ ಗುರುವಾರ ನಡೆದ “ತ್ರಿನೇತ್ರ- ನಾಳೆಗಳ ಭರವಸೆ ಕಣ್ಣುಗಳು” ವಿದ್ಯಾರ್ಥಿಗಳ ಜೊತೆಗಿನ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿದ ಅವರು, ಬಳಿಕ ನಡೆದ ಸಂವಾದ ದಲ್ಲಿ ಮಾತನಾಡಿದರು.
ಶಾಲೆಗಳಲ್ಲಿ ಮೌಲ್ಯಗಳ ಬಗ್ಗೆ ವಿಷಯಗಳಿರುವುದಿಲ್ಲ. ಚಂದ್ರಲೋಕಕ್ಕೆ ಹೋಗುವುದು ಹೇಗೆ, ಅಟಂಬಾಂಬು ತಯಾರಿ ಹೇಗೆ ಮಾಡುವುದು ಎನ್ನುವುದನ್ನು ಶಾಲೆಗಳಲ್ಲಿ ತಿಳಿಸಿಕೊಡುತ್ತಾರೆ, ಆದರೆ ಅದನ್ನು ಹೇಗೆ ಬಳಸಿಕೊಳ್ಳಬೇಕು ಎನ್ನುವುದನ್ನು ತಿಳಿಸಿಕೊಡುವುದಿಲ್ಲ ಎಂದರು. ಇಂತಹಾ ವ್ಯವಸ್ಥೆ ಬದಲಾಗಬೇಕು. ಕುಸಿಯುತ್ತಿರುವ ಮೌಲ್ಯಗಳನ್ನು ಎತ್ತಿ ಹಿಡಿಯುವ ಕಾರ್ಯ ವಿದ್ಯಾರ್ಥಿಗಳಿಂದ ನಡೆಯಬೇಕೆಂದರು.

ಲಯನ್ಸ್ ಕ್ಲಬ್‍ನ ರಾಜ್ಯಪಾಲ ರೊನಾಲ್ಡ್ ಐಸಕ್ ಗೋಮ್ಸ್ ಅಧ್ಯಕ್ಷತೆ ವಹಿಸಿದ್ದರು.
ಬಿಜೆಪಿ ಮುಖಂಡ ಪ್ರತಾಪ್ ಸಿಂಹ ನಾಯಕ್ , ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ, ಬಂಟ್ವಾಳ ಡಿವೈಎಸ್ಪಿ ವೆಲೈಂಟಿನ್ ಡಿಸೋಜ, ಖ್ಯಾತ ಮನೋರೋಗ ತಜ್ಞರಾದ ಡಾ. ರವೀಶ ತುಂಗಾ ಹಾಗೂ ಡಾ. ರಮೀಳಾ ಶೇಖರ್ ಸಂವಾದದ ಸಂಪನ್ಮೂಲ ವ್ಯಕ್ತಿಗಳಾಗಿದ್ದರು.
ಮುಖ್ಯ ಅತಿಥಿಗಳಾಗಿ ಅನಿತಾ ರೋನಾಲ್ಡ್ ಗೋಮ್ಸ್ ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ನರೇಶ್ ಕುಮಾರ್ ಸಸಿಹಿತ್ಲು, ಲಯನ್ಸ್ ಕ್ಲಬ್‍ನ ಪ್ರಥಮ ಉಪ ರಾಜ್ಯಪಾಲ ಗೀತ್ ಪ್ರಕಾಶ್, ದ್ವಿತೀಯ ಉಪರಾಜ್ಯಪಾಲ ವಸಂತ ಕುಮಾರ್ ಶೆಟ್ಟಿ, ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷ ಇಂದಿರೇಶ್ ಬಿ. ಉಪಸ್ಥಿತರಿದ್ದರು.
ಬಂಟ್ವಾಳ ಲಯನ್ಸ್ ಕ್ಲಬ್ ಅಧ್ಯಕ್ಷ ಶ್ರೀನಿವಾಸ ಪೂಜಾರಿ ಸ್ವಾಗತಿಸಿದರು. ಸಂಚಾಲಕ ಚೇತನ್ ಮುಂಡಾಜೆ ವಂದಿಸಿದರು. ದಿನೇಶ್ ಸುವರ್ಣ ರಾಯಿ, ರಾಜೇಶ್ ಸುವರ್ಣ ಕಾರ್ಯಕ್ರಮ ನಿರೂಪಿಸಿದರು.ಲಯನ್ಸ್ ಉಪಾಧ್ಯಕ್ಷ ಕೃಷ್ಣಶ್ಯಾಮ್, ಸದಸ್ಯ ರಾಘವೇಂದ್ರ ಕಾರಂತ, ಯುವವಾಹಿನಿ ಉಪಾಧ್ಯಕ್ಷ ಸುಂದರ ಪೂಜಾರಿ, ಕಾರ್ಯದರ್ಶಿ ಪುರುಷೋತ್ತಮ ಕಾಯರ್ ಪಲ್ಕೆ, ಲಯನ್ಸ್ ನ  ಕಾರ್ಯಾಗಾರ ಸಂಚಾಲಕ ಶಿವಪ್ರಸಾದ್, ಚೇತನ್ ಮುಂಡಾಜೆ ಉಪಸ್ಥಿತರಿದ್ದರು. ಜಿಲ್ಲೆಯ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

More from the blog

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...

ನೇಣು ಬಿಗಿದು ಯುವಕ ಆತ್ಮಹತ್ಯೆ

ಬಂಟ್ವಾಳ: ಖಿನ್ನತೆಯಿಂದ ಅವಿವಾಹಿತ ವ್ಯಕ್ತಿಯೊರ್ವನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಮ್ಟಾಡಿ ನಿವಾಸಿ ಮೆಕ್ಸಿನ್ ತಾವ್ರೋ ಅವರ ಮಗ ಜೀವನ್  ತಾವ್ರೋ ( 37) ಆತ್ಮಹತ್ಯೆ ಮಾಡಿಕೊಂಡ ಯುವಕ. ‌‌‌ಜೀವನ್ ಅವರು ಅಗಾಗ...

ಅಕ್ರಮ ಮಸೀದಿ ನಿರ್ಮಾಣ ಆರೋಪ: ಕರಿಯಂಗಳ ಗ್ರಾ.ಪಂ.ಗೆ ಮುತ್ತಿಗೆ

ಬಂಟ್ವಾಳ: ಗ್ರಾಮ ಪಂಚಾಯತ್ ಅನುಮತಿ ಇಲ್ಲದೆ ಅಕ್ರಮವಾಗಿ ಸರಕಾರಿ ಜಾಗದಲ್ಲಿ ಕಟ್ಟಡ ನಿರ್ಮಿಸಿ ಅದರಲ್ಲಿ ಮದರಸ ಮಾಡಲು ಮುಂದಾಗಿದ್ದರೆ ಎಂದು ಆರೋಪಿಸಿದ ಗ್ರಾಮಸ್ಥರು ಇದನ್ನು ತಡೆಯುವಂತೆ ಗ್ರಾಮ ಪಂಚಾಯತ್ ಗೆ ಮುತ್ತಿಗೆ ಹಾಕಿದ...

ಪುರಸಭೆ ಎಡವಿದೆಲ್ಲಿ? ಬ್ಯಾನರ್ ವಿವಾದ!

ಬಂಟ್ವಾಳ: ಬಂಟ್ವಾಳ ಪುರಸಭೆ ನಿಯಮ ಉಲ್ಲಂಘಿಸಿ ಹಾಕಲಾದ ಫ್ಲೆಕ್ಸ್ ತೆರವು ಕಾರ್ಯಾಚರಣೆಯನ್ನು ತಡವಾಗಿ ಪ್ರಾರಂಭಿಸಿದೆ. ಜನವರಿ 29ರಂದು ಪುರಸಭೆಯ ಸಾಮಾನ್ಯ ಸಭೆಯಲ್ಲಿ ಈ ಕುರಿತು ಪುರಸಭೆಯ ಮುಖ್ಯಾಧಿಕಾರಿ ತೆರವು ಕಾರ್ಯಾಚರಣೆ ನಡೆಸುವುದಾಗಿ ಘೋಷಿಸಿ,...