Wednesday, February 4, 2026

ತಿಂಗಳಿನಿಂದ ಕುಡಿಯುವ ನೀರಿಲ್ಲದೆ ಪರದಾಟ: ದೂರು ಸ್ವೀಕರಿಸದ ಪುರಸಭಾ ಅಧಿಕಾರಿಗಳು

ಬಂಟ್ವಾಳ: ಪುರಸಭೆಯಲ್ಲಿ ಆಡಳಿತ ವ್ಯವಸ್ಥೆ ಇಲ್ಲದೆ ಇರುವ ಕಾರಣ ಅವರು ಮಾಡಿದ್ದೇ ಕೆಲಸ, ಆಡಿದ್ದೇ ಮಾತು. ಹೇಳುವವರು ಇಲ್ಲ ಕೇಳುವವರು ಇಲ್ಲ ಎಂಬ ಸ್ಥಿತಿ.
ದೂರು ನೀಡಲು ಬಂದರೆ ನಿರಾಕರಣೆ, ಸಮಸ್ಯೆ ಹೇಳಿದರೆ ದರ್ಪದ ಮಾತು, ಇದು ಬಂಟ್ವಾಳ ಪುರಸಭೆಯಲ್ಲಿ ಪ್ರಸ್ತುತ ನಡೆಯುತ್ತಿರುವ ಸನ್ನಿವೇಶ.

ಹೌದು ಪುರಸಭೆಗೆ ಕುಡಿಯುವ ನೀರಿನ ಸಮಸ್ಯೆಯಿದೆ ಎಂದು ದೂರು ನೀಡಲು ಹೋದ ಮಹಿಳೆಯ ದೂರು ಸ್ವೀಕರಿಸದೆ ವಾಪಾಸು ಕಳುಹಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಅಲ್ಲದೆ ದೂರು ಪಡೆಯದಿದ್ದರೂ ಪರವಾಗಿಲ್ಲ ನೀರಿನ ಸಮಸ್ಯೆಯಿದೆ, ಸರಿಪಡಿಸಿ ಕೊಡಿ ಎಂದು ಹೇಳಿದ ಅವರಿಗೆ ಅಲ್ಲಿನ ಇಂಜಿನಿಯರ್ ದರ್ಪದ ಮಾತಗಳ ಮೂಲಕ ಮನನೋಯಿಸಿ ಕಳುಹಿಸಿದ್ದಾರೆ ಎಂದು ಅವರು ಮಾಧ್ಯಮದವರ ಜೊತೆ ಹೇಳಿದ್ದಾರೆ.
ಮೇ ಅಂತ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರುವುದು ಸಾಮಾನ್ಯ, ಅದರೆ ಇಲ್ಲಿ ಜನವರಿ ತಿಂಗಳಲ್ಲಿಯೇ ನೀರಿನ ಸಮಸ್ಯೆ ಉಂಟಾಗಿರುವುದು ಮಾತ್ರ ವಿಪರ್ಯಾಸವೇ ಸರಿ.

ಜಕ್ರಿಬೆಟ್ಟು ಎಂಬಲ್ಲಿ ಕಳೆದ ಒಂದು ತಿಂಗಳಿನಿಂದ ಅಲ್ಲಿನ ಅನೇಕ ಮನೆಗಳಿಗೆ ಕುಡಿಯುವ ನೀರಿನ ಸರಬರಾಜು ಇಲ್ಲದೆ ತೊಂದರೆ ಅನುಭವಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ದೂರು ನೀಡಲು ಹೋದವರಿಗೆ ಪುರಸಭೆಯಲ್ಲಿ ಅಧಿಕಾರಿಗಳಿಂದ ಅಗಿರುವ ಅನ್ಯಾಯವನ್ನು ಹೇಳಿಕೊಂಡಿದ್ದಾರೆ.
ಜಕ್ರಿಬೆಟ್ಟು ಎಂಬಲ್ಲಿ ರಸ್ತೆಯ ಕಾಮಗಾರಿಯಿಂದ ಪೈಪ್ ಲೈನ್ ತುಂಡಾಗಿದೆ ಸರಿ ಮಾಡಿಕೊಡುತ್ತೇವೆ ಎಂದು ಒಂದು ತಿಂಗಳಿನಿಂದ ಹೇಳಿಕೊಂಡು ಬಂದಿದ್ದಾರೆ ವಿನಃ ಇವತ್ತಿನವರೆಗೂ ಕುಡಿಯುವ ನೀರು ಬಂದಿಲ್ಲ. ದೂರು ನೀಡಿದರೆ ಸ್ವೀಕಾರ ಮಾಡುವುದಿಲ್ಲ, ಸಮಸ್ಯೆ ಹೇಳಿಕೊಂಡರೆ ಅಧಿಕಾರಿಗಳ ದರ್ಪದ ಮಾತು ನಾವು ಏನು ಮಾಡಬೇಕೆಂದು ಅಲ್ಲಿನ ಜನರ ಪ್ರಶ್ನೆಯಾಗಿದೆ.

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಸಹಿತ ಬಂಟ್ವಾಳ ಪುರಸಭಾ ವ್ಯಾಪ್ತಿಯ ಜನರಿಗೆ ಬೇರೆ ಬೇರೆ ಯೋಜನೆಗಳ ಮೂಲಕ ದಿನದ 24 ಗಂಟೆಯ ಕಾಲ ನೀರು ಒದಗಿಸುವ ಭರವಸೆ ಕೇವಲ ಕನಸು ಮಾತ್ರವೇ ಸರಿ. ನೇತ್ರಾವತಿ ನದಿ ಅಂಗಳದಲ್ಲಿ ಹರಿಯುತ್ತಿದ್ದರೂ ಬಂಟ್ವಾಳದ ಜನತೆಗೆ ಕುಡಿಯುವ ನೀರಿನ ಸಮಸ್ಯೆ . ಪುರಸಭಾ ವ್ಯಾಪ್ತಿಯ ಅನೇಕ ಕಡೆಗಳಲ್ಲಿ ಇಂತಹ ದ್ದೇ ನೀರಿನ ಸಮಸ್ಯೆಗಳಿವೆ ಆದರೆ ಬೆಳಕಿಗೆ ಬಾರದೆ ಉಳಿದುಕೊಂಡಿದೆ ಎಂದು ಹೇಳಲಾಗುತ್ತಿದೆ.
ಶಾಸಕರು, ಜಿಲ್ಲಾಧಿಕಾರಿಗಳು ಪುರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆಯಿರುವ ಮನೆಗಳಿಗೆ ನೀರು ಸರಬರಾಜು ಮಾಡುವ ವ್ಯವಸ್ಥೆ ಕೈಗೊಳ್ಳಬೇಕಾಗಿದೆ. ಜೊತೆಗೆ ಅಲ್ಲಿನ ಅಧಿಕಾರಿಗಳ ವರ್ತನೆಯ ಬಗ್ಗೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಸರಿಪಡಿಸುವ ಕೆಲಸ ಕೂಡಾ ಮಾಡಬೇಕಾಗಿದೆ ಎಂಬುದು ಸಾರ್ವಜನಿಕ ಆಗ್ರಹವಾಗಿದೆ.

More from the blog

B.C.Road : ಮಹಿಳಾ ಮತ್ತು ಮಕ್ಕಳ ಸಂಭ್ರಮೋತ್ಸವ..

ಬಂಟ್ವಾಳ : ಜೀವನದ ಪ್ರತೀ ಕ್ಷಣದಲ್ಲಿ ಮಹಿಳೆಯರು ಸಂತೋಷ-ಸಂತಸ‌ ಪಡೆಯುವ ಸನ್ನಿವೇಶಗಳು ಸಮಾಜದಲ್ಲಿ ನಿರ್ಮಾಣಗೊಳ್ಳಲಿ ಎಂದು ಹಿರಿಯ ವಕೀಲ ಅಶ್ವನಿ‌ ಕುಮಾರ್ ರೈ ಹೇಳಿದರು. ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ‌ ಸಂಸ್ಥೆ ಮತ್ತು...

ಮಡಂತ್ಯಾರು : ನಕಲಿ ಚಿನ್ನದ ಸರ ಅಡವಿಟ್ಟು ವಂಚನೆ – ಇಬ್ಬರ ಬಂಧನ

ಬಂಟ್ವಾಳ: ಲಕ್ಷಾಂತರ ರೂ ಸಾಲ ಪಡೆಯುವ ಉದ್ದೇಶದಿಂದ ನಕಲಿ ಚಿನ್ನದ ಸರವನ್ನು ಅಡವಿಡಲು ಸಹಕಾರಿ ಸಂಘವೊಂದಕ್ಕೆ ಬಂದ ಇಬ್ಬರು ಆರೋಪಿಗಳು ಪೋಲೀಸರ ಅತಿಥಿಯಾಗಿದ್ದಾರೆ. ಮಡಂತ್ಯಾರು ಎಂಬಲ್ಲಿರುವ ಒಡಿಯೂರು ಶ್ರೀ ವಿವಿದ್ದೋದೇಶ ಸೌಹಾರ್ದ ಸಹಕಾರಿ ಸಂಘಕ್ಕೆ...

ಮಾಣಿ : ಪೈಪ್ ಲೈನ್ ಕಾಮಗಾರಿಯಿಂದ ಹದಗೆಟ್ಟ ರಸ್ತೆ – ಪ್ರತಿಭಟನೆಗೆ ಮುಂದಾದ ನಾಗರಿಕರು 

ವಿಟ್ಲ: ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಪೈಪ್ ಲೈನ್ ಕಾಮಗಾರಿ ನಡೆಸುವ ವೇಳೆ ಮಾಣಿ ಗ್ರಾಮದ ಅರ್ಬಿ ಪ್ರದೇಶದಲ್ಲಿ ರಸ್ತೆಯನ್ನು ಅಗೆದು ಅದರ ಮಧ್ಯ ಭಾಗದಲ್ಲಿ ಪೈಪ್ ಅಳವಡಿಕೆ ಮಾಡಿ ವ್ಯವಸ್ಥಿತವಾಗಿ ಅದನ್ನು...

B.C. Road : FTM ತರಬೇತಿ ಮತ್ತು ಅಭಿಯಾನ ಕಾರ್ಯಕ್ರಮ..

ಬಂಟ್ವಾಳ: ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ , ಜಿಲ್ಲಾ ಪ್ರಯೋಗಾಲಯ ಮಂಗಳೂರು ಇವರ ವತಿಯಿಂದ, ಗ್ರಾ.ಪಂ.ಅಧ್ಯಕ್ಷರುಗಳು,ಸದಸ್ಯರುಗಳು, ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರಿಗೆ FTM ತರಬೇತಿ ಮತ್ತು...