Thursday, February 13, 2025

‘ನಮ್ಮ ಬಂಟ್ವಾಳ’ ಕ್ಕೆ ಬೆದರಿಕೆ ಕರೆ

ಬಂಟ್ವಾಳ: ಬಂಟ್ವಾಳ ಪುರಸಭಾ ವ್ಯಾಪ್ತಿಯ ಜಕ್ರಿಬೆಟ್ಟು ಎಂಬಲ್ಲಿನ ಅನೇಕ ಮನೆಗಳಿಗೆ ಕುಡಿಯುವ ನೀರು ಸರಬರಾಜು ಅಗುತ್ತಿಲ್ಲ ಎಂಬ ವರದಿಯನ್ನು ಮಾಡಿದ್ದಕ್ಕೆ ಪತ್ರಕರ್ತನಿಗೆ ಪುರಸಭಾ ಇಂಜಿನಿಯರ್ ಬೆದರಿಕೆ ಒಡ್ಡಿದ ಘಟನೆ ನಡೆದಿದೆ.

ಪುರಸಭಾ ವ್ಯಾಪ್ತಿಯ ಜಕ್ರಿಬೆಟ್ಟು ಎಂಬಲ್ಲಿನ ನಿವಾಸಿಗಳಿಗೆ ಕುಡಿಯುವ ನೀರು ಸರಬರಾಜು ಆಗದೆ ಅಲ್ಲಿನ ಮನೆಯವರಿಗೆ ತೊಂದರೆ ಅಗುತ್ತಿತ್ತು. ಈ ಬಗ್ಗೆ ಪುರಸಭೆಗೆ ದೂರು ನೀಡಲು ಇಲಾಖೆಗೆ ಹೋಗಿದ್ದ ಮಹಿಳೆಯ ದೂರು ಸ್ವೀಕರಿಸಿದ ಅಧಿಕಾರಿಗಳು ದರ್ಪದ ಮಾತು ಆಡಿದ್ದಾರೆ ಎಂದು ಅವರು ಮಾಧ್ಯಮದವರ ಜೊತೆ ಹೇಳಿದ್ದಾರೆ ಎಂದು ವರದಿ ಬಿತ್ತರಿಸಲಾಗಿತ್ತು.
ಆದರೆ ಈ ವರದಿ ನೋಡಿದ ಅಲ್ಲಿನ ಇಂಜಿನಿಯರ್ ಡೊಮಿನಿಕ್ ಡಿಮೆಲ್ಲೊ ವರದಿಗಾರನಿಗೆ ಪೋನ್ ಮಾಡಿ ಮಹಿಳೆ ಯಾರು ಅವರಿಗೆ ನಾವು ಯಾರು ಮಾತನಾಡಿಲ್ಲ, ಅವರು ಯಾವ ದೇವಸ್ಥಾನಕ್ಕೆ ಬರುತ್ತಾರೆ ಎಂದು ಕರೆದಿದ್ದಾರೆ, ಅಲ್ಲದೆ ಕುಡಿಯುವ ನೀರು ಸರಬರಾಜು ಅಗದಿದ್ದರೆ ನಿನಗೆ ಏನು, ನಿನೇನು ಜನಪ್ರತಿನಿಧಿಯ, ನಿನ್ನ ಮೇಲೆ ಕೇಸು ಮಾಡುತ್ತೇನೆ, ಈ ಹಿಂದೆಯೂ ಪತ್ರಕರ್ತರ ಮೇಲೆ ಮಾಡಿದ್ದೇನೆ, ಇನ್ನು ಮುಂದೆ ವರದಿ ಮಾಡಿದರೆ ಜಾಗೃತೆ ಎಂದು ಬೆದರಿಕೆ ಹಾಕಿದ್ದಾನೆ.
ಈ ಬಗ್ಗೆ ಪಿ.ಡಿ.ಸಂತೋಷ್ ಅವರಲ್ಲಿ ಮೌಖಿಕವಾಗಿ ತಿಳಿಸಲಾಗಿದ್ದು ಅವರು ಈ ಬಗ್ಗೆ ಪರಿಶೀಲನೆ ನಡೆಸುವುದಾಗಿ ತಿಳಿಸಿದ್ದಾರೆ.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...