Thursday, February 13, 2025

ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನ ಬಿತ್ತ್‌ಲ್ ಬ್ರಹ್ಮಕಲಶೋತ್ಸವ

ಬಂಟ್ವಾಳ: ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನ ಬಿತ್ತ್‌ಲ್ ದೇಯಿ ಬದ್ಯೆತಿ ಕೋಟಿ-ಚೆನ್ನಯರ ಮೂಲ ಸ್ಥಾನದಲ್ಲಿ ಜರಗಲಿರುವ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯ ಬಿಡುಗಡೆ ಕಾರ್ಯಕ್ರಮ ಬಂಟ್ವಾಳ ತಾಲೂಕಿನ ಕಕ್ಯಪದವು ಶ್ರೀ ಕಡಂಬಳಿತ್ತಾಯಿ, ಶ್ರೀ ಕೊಡಮಣಿತ್ತಾಯಿ ಬ್ರಹ್ಮ ಬದರ್ಕಳ ಗರೊಡಿಯಲ್ಲಿ ಫೆ.9ರಂದು ಜರಗಿತು.
ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಪಿತಾಂಬರ ಹೇರಾಜೆ, ಉಪಾಧ್ಯಕ್ಷ ಕೆ. ಮಾಯಿಲಪ್ಪ ಸಾಲ್ಯಾನ್, ಬಂಟ್ವಾಳ ತಾಲೂಕಿನ ಅಧ್ಯಕ್ಷ ಪ್ರೇಮನಾಥ್, ಪ್ರಚಾರ ಸಮಿತಿಯ ಬಂಟ್ವಾಳ ತಾಲೂಕಿನ ಸಂಚಾಲಕ ಜಗದೀಶ್ ಕೊಲ, ಪುತ್ತೂರು ಹೊರೆಕಾಣಿಕೆ ಸಮಿತಿಯ ಅಧ್ಯಕ್ಷ ದಯಾನಂದ ಕರ್ಕೇರ, ಪ್ರಧಾನ ಸಂಚಾಲಕ ರವಿ ಕಕ್ಯಪದವು, ಯುವವಾಹಿನಿ ಕೇಂದ್ರ ಸಮಿತಿ ಉಪಾಧ್ಯಕ್ಷ ಡಾ. ರಾಜಾರಾಮ್ ಕೆ.ಬಿ., ಮಾಡಪಲ್ಕೆ ಬಿಲ್ಲವ ಸಂಘದ ಅಧ್ಯಕ್ಷ ಗೋಪಾಲ್ ಪೂಜಾರಿ, ಉಳಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ ಅಧ್ಯಕ್ಷ ರಾಜೇಂದ್ರ ತಿಮರಡ್ಡ, ಸ್ವಯಂ ಸೇವಾ ಸಮಿತಿಯ ಪ್ರಧಾನ ಸಂಚಾಲಕ ನಾರಾಯಣ ಪೂಜಾರಿ ಮಚ್ಚಿನ, ಮಣಿನಾಲ್ಕೂರು ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದ ಅಧ್ಯಕ್ಷ ಪುರುಷೋತ್ತಮ ಮಜಲು , ಉಳಿ ಗ್ರಾ.ಪಂ.ಸದಸ್ಯರಾದ ಚಿದಾನಂದ ರೈ, ಚೇತನ್ ಹೂರ್ದೊಟ್ಟು, ಸದಾನಂದ ಪೂಜಾರಿ ಕಟ್ಟದಪಡ್ಪು, ಕಕ್ಯಪದವು ಶ್ರೀ ಬ್ರಹ್ಮಬದರ್ಕಳ ಗರೊಡಿಯ ಉತ್ಸವ ಸಮಿತಿಯ ಅಧ್ಯಕ್ಷ ವಿಶ್ವನಾಥ ಸಾಲ್ಯಾನ್ ಬಿತ್ತ, ಉಳಿ ಯುವಕ ಮಂಡಲದ ಅಧ್ಯಕ್ಷ ಸನತ್ ಕಕ್ಯಪದವು. ಡಾ. ದಿನೇಶ್ ಬಂಗೇರ, ಹೊರೆ ಕಾಣಿಕೆ ಸಮಿತಿ ಸಂಚಾಲಕ ಮಂಜುನಾಥ ಸಾಲ್ಯಾನ್, ಅಣ್ಣಿ ಪೂಜಾರಿ ಚಿಮುಳ್ಳು. ವಕೀಲ ರಂಜಿತ್ ಮೈರ , ಪ್ರಶಾಂತ್ ಮೈರ, ಯತೀಶ್, ಪುನೀತ್, ಯಶವಂತ್ ಗೌಡ ಮತ್ತಿತರರು ಭಾಗವಹಿಸಿದ್ದರು.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...