Tuesday, February 11, 2025

ರೈಲ್ವೆ ಮೀಟರ್ ಗೇಜ್ ಗೆ ಲಾರಿ ತಾಗಿ ಸಂಚಾರಕ್ಕೆ ಅಡಚಣೆ

ಬಂಟ್ವಾಳ: ಬಿ.ಸಿ.ರೋಡಿನ ಕೈಕಂಬ ಬಳಿಯಲ್ಲಿ ಲಾರಿಯೊಂದು ರೈಲ್ವೆ ಮೇಲ್ಸೆತುವೆಯ ಮೀಟರ್ ಗೇಜ್ ತಾಗಿ ಸ್ಥಳದಲ್ಲಿ ಲಾರಿ ಬಾಕಿಯಾದ ಘಟನೆ ಇಂದು ಬೆಳಿಗ್ಗೆ ನಡೆದಿದೆ.
ಬಿ.ಸಿ.ರೋಡಿನಿಂದ ಕೈಕಂಬ ಮೂಲಕ ಬಳ್ಳಾರಿಯಿಂದ ಮಲ್ಲೂರು ಕಡೆಗೆ ಕುರಿ ಗೊಬ್ಬರ ಹೇರಿಕೊಂಡು ಹೋಗುವ ವೇಳೆಗೆ ಕೈಕಂಬ ದಲ್ಲಿರುವ ರೈಲ್ವೆ ಮೇಲ್ಸೆತುವೆಯ ಸನಿಹದಲ್ಲಿ ಘನ ಗಾತ್ರದ ವಾಹನಗಳು ಈ ಮೂಲಕ ಸಾಗಿಸಲು ಅವಕಾಶ ಇಲ್ಲದಂತೆ ಹಾಕಲಾದ ಮೀಟರ್ ಗೇಜ್ ಕಂಬಗಳನ್ನು ಲಾರಿಯೊಂದು ಬುಡಸಮೇತ ಕಿತ್ತು ಜಾಮ್ ಅಗಿ ರಸ್ತೆಯ ಮದ್ಯದಲ್ಲೆ ಬಾಕಿಯಾಯಿತು.

ಲಾರಿಯ ಲೋಡ್ ಗಾತ್ರದ ಬಗ್ಗೆ ಲಾರಿ ಚಾಲಕನಿಗೆ ಸರಿಯಾಗಿ ತಿಳಿಯದ ಕಾರಣ ಈ ಸಮಸ್ಯೆ ಉಂಟಾಗಿದೆ ಎಂದು ಹೇಳಲಾಗುತ್ತದೆ.
ಈ ಹಿಂದೆ ಅನೇಕ ಬಾರಿ ಇಂತಹ ಘಟನೆಗಳು ಈ ಸ್ಥಳದಲ್ಲಿ ನಡೆದಿದೆ. ಮತ್ತೆ ಮತ್ತೆ ಘಟನೆಗಳು ಪುನರಾವರ್ತನೆ ಅಗುತ್ತಲೆ ಇದ್ದರೂ ರೈಲ್ವೆ ಇಲಾಖೆಯ ವರು ಸಮಸ್ಯೆ ಸರಿ ಮಾಡಲು ಮುಂದಾಗುತ್ತಿಲ್ಲ ಎಂದು ಸ್ಥಳೀಯ ರು ಹೇಳುತ್ತಿದ್ದಾರೆ.‌
ಸಾರ್ವಜನಿಕ ರಿಗೆ ಇದರಿಂದ ಪದೆ ಪದೇ ತೊಂದರೆ ಯಾಗುತ್ತಿದ್ದು ಪ್ರಾಣ ಅಪಾಯ ಅಗುವ ಮೊದಲು ಇಲಾಖೆ ಎಚ್ಚೆತ್ತುಕೊಂಡು ಕ್ರಮಕೈಗೊಳ್ಳಲು ಸಾರ್ವಜನಿಕ ರು ಮನವಿ ಮಾಡುತ್ತಿದ್ದಾರೆ. ಸ್ಥಳದಲ್ಲಿ ಟ್ರಾಫಿಕ್ ಪೋಲೀಸರು ಟ್ರಾಫಿಕ್ ಜಾಮ್ ಸಮಸ್ಯೆಯಾಗದಂತೆ ಕ್ರಮ ಕೈಗೊಂಡಿದ್ದಾರೆ.

More from the blog

ಕಾರು ಡಿಕ್ಕಿ ಬೈಕ್ ಸವಾರ ಗಂಭೀರ

ಬಂಟ್ವಾಳ: ಮಣಿಹಳ್ಳ-ಮಾವಿನಕಟ್ಟೆ ರಸ್ತೆಯ ಮಣಿನಾಲ್ಕೂರು ಗ್ರಾಮದ ಎರ್ಮಳದಲ್ಲಿ ಸ್ಕೂಟರೊಂದಕ್ಕೆ ಎದುರಿನಿಂದ ಆಗಮಿಸಿದ ಕಾರೊಂದು ಢಿಕ್ಕಿಯಾಗಿ ಸವಾರ ಗಂಭೀರ ಗಾಯಗೊಂಡ ಘಟನೆ ಫೆ. ೯ರಂದು ನಡೆದಿದೆ. ಸರಪಾಡಿ ಕಲ್ಕೊಟ್ಟೆ ನಿವಾಸಿ ಸುಂದರ ಬಾಬು ಶೆಟ್ಟಿ ಗಾಯಗೊಂಡವರು....

ನೇತ್ರಾವತಿ ನದಿಗೆ ಅಡ್ಡಲಾಗಿ ನಿರ್ಮಿಸಿದ 3ನೇ ಬ್ರಿಡ್ಜ್ ನಲ್ಲೂ ನೀರು ಸಂಗ್ರಹ ಆರಂಭ

ಬಂಟ್ವಾಳ: ಬಂಟ್ವಾಳದ ಜಕ್ರಿಬೆಟ್ಟುನಲ್ಲಿ ಜೀವನದಿ ನೇತ್ರಾವತಿ ನದಿಗೆ ಅಡ್ಡಲಾಗಿ ಸಣ್ಣ ನೀರಾವರಿ ಇಲಾಖೆಯ ಮೂಲಕ ಸುಮಾರು 135 ಕೋ.ರೂ.ವೆಚ್ಚದಲ್ಲಿ ನಿರ್ಮಾಣಗೊಂಡ ಸೇತುವೆ ಸಹಿತ ಕಿಂಡಿ ಅಣೆಕಟ್ಟು(ಬ್ರಿಡ್ಜ್ ಕಂ ಬ್ಯಾರೇಜ್)ಗೆ ಇದೇ ಮೊದಲ ಬಾರಿಗೆ...

ಬಂಟ್ವಾಳ : ಸಮಾಜ ಸೇವಾ ಸಹಕಾರಿ ಸಂಘ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಜಯ

ಬಂಟ್ವಾಳ : ಪ್ರತಿಷ್ಠಿತ ಸಮಾಜ ಸೇವಾ ಸಹಕಾರಿ ಸಂಘ ನಿಯಮಿತ ಬಂಟ್ವಾಳ ಇದರ ಮುಂದಿನ 5 ವರ್ಷಗಳ ಅವಧಿಯ ಆಡಳಿತ ಮಂಡಳಿಗೆ‌ ಭಾನುವಾರ‌ ಚುನಾವಣೆ ನಡೆದಿದ್ದು, ಸಹಕಾರ ಭಾರತಿಯ 17 ಮಂದಿ‌ ಅಭ್ಯರ್ಥಿಗಳು...

ಕೊಳ್ನಾಡು : ಬಾರೆಬೆಟ್ಟು ಮಂಟಮೆಯಲ್ಲಿ ಕಾಲಾವಧಿ ಜಾತ್ರೆ

ವಿಟ್ಲ : ಕೊಳ್ನಾಡು ಗ್ರಾಮದ ಕಾರಣಿಕದ ಪ್ರಸಿದ್ಧ ದೈವಕ್ಷೇತ್ರ 'ಬಾರೆಬೆಟ್ಟು ಮಂಟಮೆ'ಯ ಕಾಲಾವಧಿ ಜಾತ್ರೆಯು ವಿಜೃಂಭಣೆಯಿಂದ ಜರಗಿತು. ಶ್ರೀ ಮಲರಾಯಿ ಮತ್ತು ಬಂಟ ದೈವದ ದೈವದ ಕೊಟ್ಯದಾಯನ ನೇಮೋತ್ಸವ ನಡೆಯಿತು. ಇದೇ ಸಂದರ್ಭದಲ್ಲಿ ಶ್ರೀ ಮಲರಾಯಿ...