Monday, July 14, 2025

ಸರಕಾರದ ಆದೇಶ ಉಲ್ಲಂಘಿಸಿ ನಡೆಯುತ್ತಿದ್ದ ಮಾಣಿ ಶನಿವಾರದ ಸಂತೆಗೆ ಬ್ರೇಕ್ ಹಾಕಿದ ತಹಶೀಲ್ದಾರ್ ರಶ್ಮಿ ಎಸ್.ಆರ್.

ಬಂಟ್ವಾಳ: ಕೊರೊನಾ ವೈರಸ್ ಜಾಗೃತಿಗಾಗಿ ಮತ್ತು ಸೊಂಕು ತಡೆಗಟ್ಟುವ ನಿಟ್ಟಿನಲ್ಲಿ ಸರಕಾರ ಸಭೆ ಸಮಾರಂಭ ಸಂತೆ ನಡೆಯಬಾರದು ಎಂದು ಅದೇಶ ಮಾಡಿದ್ದರು ಕೂಡಾ ಮಾಣಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಣಿ ಶನಿವಾರ ದ ಸಂತೆ ಯಾರ ಭಯವಿಲ್ಲದೆ ಬೆಳಿಗ್ಗೆ 6 ಗಂಟೆಯಿಂದ ಆರಾಮವಾಗಿ ನಡೆಯುತ್ತಿತ್ತು.
ಮಾಣಿಯಲ್ಲಿ ಶನಿವಾರದ ಸಂತೆ ನಡೆಯುತ್ತಿದೆ ಎಂಬ ಮಾಹಿತಿ ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್. ಅವರಿಗೆ ಬಂದ ಹಿನ್ನೆಲೆಯಲ್ಲಿ ಕೂಡಲೇ ಸ್ಥಳಕ್ಕೆ ಧಾವಿಸಿದ ಅವರು ಸಂತೆ ನಿಲ್ಲಿಸುವಂತೆ ತಿಳಿಸಿದರು.

ಪ್ರತಿ ಶನಿವಾರ ದಿನದಂದು ಇಲ್ಲಿ ವಾರದ ಸಂತೆ ನಡೆಯುತ್ತಿದೆ. ಗ್ರಾಮ ಪಂಚಾಯತ್ ನ ಅಧೀನದಲ್ಲಿ ಟೆಂಡರ್ ಪಡೆದ ವ್ಯಕ್ತಿ ಶನಿವಾರದಂದು ಸಂತೆ ನಡೆಸುತ್ತಾರೆ. ಆದರೆ ಕೊರೊನೊ ಭೀತಿಯಿಂದ ಎಲ್ಲಾ ಸಭೆ ಸಮಾರಂಭಗಳ ಸಹಿತ ಸಂತೆಗಳ ಜಾತ್ರೋತ್ಸವ ನಿಲ್ಲಬೇಕು ಎಂದು ಸರಕಾರ ಆದೇಶ ಮಾಡಿದೆಯಾದರೂ ಇಲ್ಲಿ ಸಂತೆ ನಡೆಸುವ ವ್ಯಕ್ತಿಗೆ ಪಿಡಿಒ ತಿಳಿಸಿಲ್ಲ ಎಂದು ಆತ ಹೇಳಿ ಜವಬ್ದಾರಿ ಯಿಂದ ನುಣುಚಿಕೊಳ್ಳುವ ಪ್ರಯತ್ನ ಮಾಡಿದ್ದಾನೆ ಎಂದು ಮಾಹಿತಿ ತಿಳಿಸಿದೆ. ಸ್ಥಳಕ್ಕೆ ತಹಶೀಲ್ದಾರ್ ಜೊತೆ ಬೇಟಿ ನೀಡಿದ ವಿಟ್ಲ ಎಸ್.ಐ.ವಿನೋದ್ ರೆಡ್ಡಿ ಸಂತೆಯನ್ನು ನಿಲ್ಲಿಸಿ ವಾಪಾಸು ಕಳುಹಿಸಿದ್ದಾರೆ.

More from the blog

ರಾಮಕೃಷ್ಣ ತಪೋವನದಲ್ಲಿ ಗುರುಪೂರ್ಣಿಮೆ ಆಚರಣೆ..

ಪೊಳಲಿ: ವ್ಯಾಸ ಪೂರ್ಣಿಮೆಯನ್ನು ಗುರುಪೂರ್ಣಿಮೆಯಂದು ಹಿಂದಿನಿAದಲು ಜಗತಿನಾಧ್ಯಂತ ಆಚರಣೆಯನ್ನು ಮಠ ಆಶ್ರಮಗಳಲ್ಲಿ ಆಚರಿಸುತ್ತ ಬಂದಿರುತ್ತಾರೆ. ಹಿಂದುಗಳಿಗಲ್ಲದೆ ಬೇರೆ ಸಾಂಪ್ರದಾಯದವರಿಗೂ ವೀಶೇಷ ಗುರುಪೂರ್ಣಿಮೆದಿನವಾಗಿರುತ್ತದೆ ಎಂದು ರಾಮಕೃಷ್ಣ ತಪೋವನದ ಅಧ್ಯಕ್ಷ ಸ್ವಾಮಿ ವಿವೇಕ ಚೈತನ್ಯಾನಂದ ಸ್ವಾಮಿಜಿಯವರು...

ಆಸರೆ ಸೇವಾ ಫೌಂಡೇಶನ್ (ರಿ) ಪುಂಚಮೆ ಇದರ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ

ಕೈಕಂಬ: ಆಸರೆ ಸೇವಾ ಫೌಂಡೇಶನ್ (ರಿ) ಪುಂಚಮೆ ಇದರ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಜು ೬ರಂದು ಭಾನುವಾರ ಪುಂಚಮೆ ಶ್ರೀ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪ್ರತಿಭಾನ್ವಿತರಾದ ಪೊಳಲಿ...

ನೆಟ್ಲಮುಡ್ನೂರು : ವಲಯ ಕಾಂಗ್ರೆಸ್ ಸಮಿತಿ ವತಿಯಿಂದ ಜನಜಾಗೃತಿ ಅಭಿಯಾನ..

ಬಂಟ್ವಾಳ : ಬಂಟ್ವಾಳ ವಿಧಾನಸಭಾ ಕ್ಷೇತ್ರದ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ನೆಟ್ಲಮುಡ್ನೂರು ವಲಯ ಕಾಂಗ್ರೆಸ್ ಸಮಿತಿಯ ವತಿಯಿಂದ "ಜನಜಾಗೃತಿ ಅಭಿಯಾನ" ನೇರಳಕಟ್ಟೆಯಲ್ಲಿ ಶನಿವಾರ ಸಂಜೆ ನಡೆಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾಜಿ ಸಚಿವ...

ಶಕ್ತಿ ಯೋಜನೆಯ ಪ್ರಯಾಣಿಕರ ಸಂಖ್ಯೆ 500 ಕೋಟಿ ದಾಟಿದೆ – ಭರತ್ ಮುಂಡೋಡಿ..

ಬಂಟ್ವಾಳ: ಬಡವರ ಉದ್ಧಾರ, ಮಹಿಳಾ ಸ್ವಾವಲಂಬನೆಯ ದೃಷ್ಟಿಯಿಂದ ರಾಜ್ಯ ಕಾಂಗ್ರೆಸ್ ಸರಕಾರವು ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದು, ದ.ಕ.ಜಿಲ್ಲೆಯಲ್ಲಿ ಯೋಜನೆಯಿಂದ ಹೊರಗುಳಿದ ಫಲಾನುಭವಿಗಳನ್ನು ಯೋಜನಾ ವ್ಯಾಪ್ತಿಗೆ ತರಲಾಗಿದೆ. ಪ್ರಸ್ತುತ ಶಕ್ತಿ ಯೋಜನೆಯ...