Tuesday, January 27, 2026

ವಿನಾಯಿತಿಯನ್ನೇ ದುರುಪಯೋಗ ಪಡಿಸಿಕೊಳ್ಳುತ್ತಿರುವ ನಾಗರಿಕರು! : ಎಚ್ಚೆತ್ತುಕೊಳ್ಳುವುದು ಯಾವಾಗ?

ಬಂಟ್ವಾಳ: ದಕ್ಷಿಣ ಕನ್ನಡದಲ್ಲೂ ಸಂಪೂರ್ಣ ಲಾಕ್ ಡೌನ್ ಆಗಲಿ, ಯಾವುದೇ ವ್ಯಾಪಾರಸ್ಥರಿಗೂ ರಿಯಾಯಿತಿ ಕೊಡಬೇಡಿ, ಹೀಗೊಂದು ಬಲವಾದ ಒತ್ತಾಯ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ. ಕೊರೋನಾ ವೈರಸ್ ನ ಭೀತಿ ಹೆಚ್ಚಾಗುತ್ತಿರುವ ನಡುವೆ ರಾಜ್ಯ ಸರ್ಕಾರ, ಅಗತ್ಯ ವಸ್ತುಗಳಿಗೆ ವಿನಾಯಿತಿ ನೀಡಿ ಸಂಪೂರ್ಣ ಲಾಕ್ ಡೌನ್ ಗೆ ಆದೇಶ ನೀಡಿದೆ. ಆದರೆ ಸಾರ್ವಜನಿಕರಿಗೆ ತೊಂದರೆಯಾಗಬಾರದು ಎನ್ನುವ ಕಾರಣಕ್ಕೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಬೆಳಿಗ್ಗೆ 6 ರಿಂದ ಮಧ್ಯಾಹ್ನ 12 ವರೆಗೆ ಅಗತ್ಯ ವಸ್ತುಗಳ ಅಂಗಡಿಗಳನ್ನು ತೆರದಿಡಲು ಜಿಲ್ಲಾಡಳಿತ ಆದೇಶ ನೀಡಿತ್ತು. ಇದನ್ನೇ ದುರುಪಯೋಗ ಪಡಿಸಿಕೊಂಡ ಸಾರ್ವಜನಿಕರು ತಾಲೂಕಿನ‌ ಹಲವೆಡೆಗಳಲ್ಲಿ ಗುಂಪು ಗುಂಪಾಗಿ ತಿರುಗಾಡುತ್ತಿದ್ದ ದೃಶ್ಯ ಕಂಡುಬಂದಿದೆ.


ಬೆಳಿಗ್ಗೆ 6 ರಿಂದ ಮೀನು, ಮಾಂಸ, ಹೂ, ಹಾಲು, ತರಕಾರಿ ಅಂಗಡಿ, ದಿನಸಿ ಅಂಗಡಿಗಳು ತೆರೆದಿಡುವುದರಿಂದ ಜನರು ಪೇಟೆಗೆ ಅಗಮಿಸುತ್ತಾರೆ.
ಅಲ್ಲಿ ಒರ್ವ ಸೋಂಕಿತ ವ್ಯಕ್ತಿ ಇದ್ದರೂ ಅದು ಇಡೀ ತಾಲೂಕಿನ ಸ್ವಾಸ್ಥ್ಯ ಕೆಡಿಸಲು ಕಾರಣವಾಗಬಹುದು. ಈ ನಿಟ್ಟಿನಲ್ಲಿ ಒಂದು ವಾರಗಳ ಕಾಲ ಸಂಪೂರ್ಣ ಬಂದ್ ಮಾಡುವಂತೆ ತಾಲೂಕಿನ ಗೌರವಾನ್ವಿತ ವ್ಯಕ್ತಿಗಳ ಮನವಿಯಾಗಿದೆ. ಜಿಲ್ಲೆ ಸಂಪೂರ್ಣ ಲಾಕ್ ಡೌನ್ ಎಂಬ ಸರಕಾರದ ಆದೇಶವಿದ್ದರೂ, ಕೂಡಾ ಜಿಲ್ಲಾಡಳಿತ ಇ ಆದೇಶ ಗೊಂದಲಕ್ಕೆ ಕಾರಣವಾಗಿದೆ.
ಜಿಲ್ಲಾಡಳಿತ ಎಚ್ಚರ ವಹಿಸದೆ ಮುಂಜಾಗ್ರತೆ ಕೈಗೊಳ್ಳದಿದ್ದಲ್ಲಿ ಬಲುದೊಡ್ಡ ಬೆಲೆತೆರಬೇಕಾಗುತ್ತದೆ. ತಾಲೂಕು ತಹಶೀಲ್ದಾರರು, ಪೊಲೀಸ್ ಅಧಿಕಾರಿಗಳು ಜನದಟ್ಟಣೆ ಸೇರುವ ಸ್ಥಳಗಳಲ್ಲಿ ಮುನ್ನೆಚ್ಚರಿಕೆ ನೀಡಲಾಗುತ್ತಿದ್ದರೂ, ಕೆಲವೊಂದು ರಿಕ್ಷಾಗಳು ತಿರುಗಾಟ ನಡೆಸುತ್ತಿದ್ದು, ಅನೇಕ ವ್ಯಕ್ತಿಗಳು ಅದೇಶವನ್ನು ಪಾಲಿಸದೆ ಅನಗತ್ಯವಾಗಿ ಬಿಸಿರೋಡು, ಬಂಟ್ವಾಳ ಪೇಟೆಯಲ್ಲಿ ತಾಲೂಕು ಆಡಳಿತ ಮತ್ತು ಪೋಲೀಸರ ಮನವಿಗೂ ಬೆಲೆ ಕೊಡದೆ ತಿರುಗುತ್ತಿದ್ದಾರೆ.
ಒಂದು ವಾರಗಳ ಕಾಲ ಬಂಟ್ವಾಳ ಸಂಪೂರ್ಣ ಲಾಕ್ ಡೌನ್ ಮಾಡಿ ತಾಲೂಕಿನ ಜನರ ಜೀವಕ್ಕೆ ಬೆಲೆ ನೀಡಿ ಎಂಬ ಕಳಕಳಿಯ ವಿನಂತಿಯ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.

More from the blog

ಉಸ್ತುವಾರಿ ಸಚಿವರು ಗಣರಾಜ್ಯೋತ್ಸವ ವೇದಿಕೆಯನ್ನು ಸುಳ್ಳು ಹರಡಲು ಬಳಸಿಕೊಂಡಿರುವುದು ಖೇದಕರ : ಸಂಸದ ಕ್ಯಾ.ಚೌಟ

ಮಂಗಳೂರು: ಸಂವಿಧಾನಿಕ ಹುದ್ದೆಯನ್ನು ದುರುಪಯೋಗಪಡಿಸಿ ಸುಳ್ಳಿನ ಕಾರ್ಖಾನೆಯನ್ನೇ ಸೃಷ್ಟಿಸುವ ಕಾಂಗ್ರೆಸ್‌ ಸರ್ಕಾರದ ಪ್ರಯತ್ನ ಸಂಪೂರ್ಣ ವಿಫಲಗೊಂಡಿರುವ ಕಾರಣ ಇದೀಗ ಸಚಿವ ದಿನೇಶ್‌ ಗುಂಡೂರಾವ್‌ ಅವರು ಘನವೆತ್ತ ರಾಜ್ಯಪಾಲರ ನಡೆಯನ್ನು ಟೀಕಿಸುತ್ತಿದ್ದಾರೆ ಎಂದು ದಕ್ಷಿಣ...

ಸಂಗಬೆಟ್ಟು ಗ್ರಾ.ಪಂ ವಿಶೇಷ ಗ್ರಾಮ ಸಭೆ : ವಿಬಿ-ಜಿ ರಾಮ್ ಜಿ ಯೋಜನೆ ಅನುಷ್ಠಾನಕ್ಕೆ ತೀರ್ಮಾನ 

ಬಂಟ್ವಾಳ : ಕೇಂದ್ರ ಸರಕಾರವು ಹೊಸದಾಗಿ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ("ವಿಕಸಿತ್ ಭಾರತ್ "ಗ್ಯಾರಂಟಿ ಯೋಜಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ್) ಯೋಜನೆಯು ಒಂದು ಅತ್ಯುತ್ತಮ ಯೋಜನೆಯಾಗಿದ್ದು, ಇದರಲ್ಲಿನ ಕೆಲವೊಂದು...

ವೈಭವದಿಂದ ಜರುಗಿದ ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಮಡಂತ್ಯಾರು : ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ಅಂಗವಾಗಿ, ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮವು ಜ. 25 ಭಾನುವಾರದಂದು ಮಡಂತ್ಯಾರಿನಲ್ಲಿ ಅತ್ಯಂತ ವೈಭವ ಮತ್ತು ಶಿಸ್ತಿನೊಂದಿಗೆ ನಡೆಯಿತು. ಸಂಜೆ ನಾಲ್ಕು ಗಂಟೆಗೆ...

ತುಳುನಾಡ ಜಾತ್ರೆ – ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ ಹೊರೆ ಕಾಣಿಕೆ, ಉಗ್ರಾಣ ಮುಹೂರ್ತ

ವಿಟ್ಲ: ಜ.27 ಮತ್ತು 28 ರಂದು ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನದಲ್ಲಿ ನಡೆಯಲಿರುವ ತುಳುನಾಡ ಜಾತ್ರೆ -ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ, ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನದ ಅಂಗವಾಗಿ ಹಸಿರುವಾಣಿ...