Friday, January 30, 2026

ಬೇಕರಿ ಉತ್ಪನ್ನಗಳ ಮಾರಾಟಕ್ಕೆ ಅವಕಾಶ.!

ಲಾಕ್‌ಡೌನ್‌ನಿಂದ ಜನಸಾಮಾನ್ಯರಿಗೆ ತೊಂದರೆಯಾಗದಂತೆ ನಿತ್ಯ ಬಳಕೆಯ ವಸ್ತುಗಳ ಮಾರಾಟಕ್ಕೆ ಅವಕಾಶ ನೀಡಿದ್ದ ರಾಜ್ಯ ಸರ್ಕಾರ ಈಗ ಬೇಕರಿ ಉತ್ಪ​ನ್ನ​ಗಳು, ಸಿಹಿ ತಿಂಡಿಗಳ ಮಾರಾಟಕ್ಕೆ ಅವಕಾಶ ನೀಡಿದೆ.

ಬೇಕರಿ ಹಾಗೂ ಸಂಬಂಧಪಟ್ಟಉತ್ಪನ್ನಗಳನ್ನು ವಿಶೇಷವಾಗಿ ರೋಗಿಗಳು, ಹಿರಿಯರು, ಮಕ್ಕಳು ಹೆಚ್ಚು ಬಳಕೆ ಮಾಡುತ್ತಾರೆ.ಈ ಹಿನ್ನೆಲೆಯಲ್ಲಿ ಬೇಕರಿ, ಬಿಸ್ಕತ್‌, ಕಾಂಡಿಮೆಂಟ್‌, ಸಿಹಿ ತಿಂಡಿಗಳ ಉತ್ಪಾದನೆ, ಪೂರೈಕೆ, ಹಾಗೂ ಕನಿಷ್ಠ ಸಿಬ್ಬಂದಿಯೊಂದಿಗೆ ಬೇರೆ ಬೇರೆ ಕಡೆಗೆ ಇಲ್ಲವೇ ಸಣ್ಣ ಅಂಗಡಿಗಳಿಗೆ ಪೂರೈಸಲು ಅವಕಾಶ ನೀಡಿದೆ.

ಈ ಸಂಬಂಧ ಈಗಾಗಲೇ ಕೇಂದ್ರ ಹಾಗೂ ರಾಜ್ಯ ಸರ್ಕಾರ ಹೊರಡಿಸಿರುವ ಮಾರ್ಗಸೂಚಿ, ಸೂಚನೆಗಳನ್ನು ಕಟ್ಟು ನಿಟ್ಟಾಗಿ ಪಾಲಿಸಬೇಕು.
ಈ ಘಟಕಗಳು ಅತ್ಯುತ್ತಮ ಗುಣಮಟ್ಟದ ವ್ಯವಸ್ಥೆಯಡಿ, ಸ್ವಚ್ಛವಾದ ವಾತಾವರಣದಲ್ಲಿ ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ಕಾರ್ಯನಿರ್ವಹಿಸಬೇಕು, ಆದರೆ ಯಾವುದೇ ಸಂದರ್ಭದಲ್ಲಿ ಇಂತಹ ಘಟಕಗಳಲ್ಲಿ ಗ್ರಾಹಕರಿಗೆ ಪೂರೈಸುವ, ಸೇವಿಸುವ ಅವಕಾಶ ಇರುವುದಿಲ್ಲ, ಕೇವಲ ಪಾರ್ಸೆಲ್‌ಗೆ ಮಾತ್ರ ಅವಕಾಶ ಇರುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಕೇಂದ್ರ ಸರ್ಕಾರ ಈಗಾಗಲೇ ಬೇಕರಿ, ಬಿಸ್ಕತ್‌, ಸಿಹಿ ತಿಂಡಿಗಳ ಉತ್ಪಾದನೆ, ಮಾರಾಟಕ್ಕೆ ಅವಕಾಶ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸಹ ಲಾಕ್‌ಡೌನ್‌ ಆದೇಶದಿಂದ ವಿನಾಯಿತಿ ನೀಡಿದೆ. ಈಗಾಗಲೇ ನಿತ್ಯ ಬಳಕೆಯ ದಿನಸಿ ವಸ್ತುಗಳು, ತರಕಾರಿ, ಹಾಲು ಹಾಗೂ ಆನ್‌ಲೈನ್‌ ಮೂಲಕ ಆಹಾರ, ತಿಂಡಿ ತಿನಿಸುಗಳ ಮಾರಾಟಕ್ಕೆ ಸರ್ಕಾರ ಅವಕಾಶ ನೀಡಿದೆ.

More from the blog

ಬಂಟ್ವಾಳ ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ ನೇಮಕ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಉಪ ವಿಭಾಗ, ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ, ಐಪಿಎಸ್ (ಕೆಎನ್ 2023) ನೇಮಿಸಲಾಗಿದೆ. ಬಳ್ಳಾರಿ ನಗರ ಉಪ ವಿಭಾಗ, ಬಳ್ಳಾರಿ ಜಿಲ್ಲೆಗೆ ಸಹಾಯಕ ಪೊಲೀಸ್...

B.C. Road : ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ

ಬಂಟ್ವಾಳ: ಅರಣ್ಯ ಇಲಾಖೆ ಮಂಗಳೂರು ವಿಭಾಗದ( ಬಂಟ್ವಾಳ, ಬೆಳ್ತಂಗಡಿ,ಮಂಗಳೂರು) ವತಿಯಿಂದ ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ ಬಿಸಿರೋಡಿನ ರೋಟರಿ ಕ್ಲಬ್ ನ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ತಾಲೂಕು ಆರೋಗ್ಯಾಧಿಕಾರಿ ಅಶೋಕ್...

ಕಟೀಲು 7 ಮೇಳಗಳ ಜ.29ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ  7 ಮೇಳಗಳ ಜ.29ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.29ರ ಸೇವೆಯಾಟಗಳ ವಿವರ : ಉಮೇಶ್ ಅತಿಕಾರಿ, ಮುಳಿಂಜೆಗುತ್ತು, 'ಶ್ರೀ ಕೃಪಾ',...

ಬೆಂಗಳೂರಿಗಿಂತ ಮಂಗಳೂರಿನಲ್ಲಿ ವಾಯು ಗುಣಮಟ್ಟ ಕಳಪೆ – ಅಚ್ಚರಿ ವರದಿ ಬಹಿರಂಗ..!

ಮಂಗಳೂರು : ರಾಜ್ಯದ ವಿವಿಧ ನಗರಗಳಲ್ಲಿ ವಾಯು ಗುಣಮಟ್ಟ (AQI) ಆತಂಕಕಾರಿ ಮಟ್ಟಕ್ಕೆ ತಲುಪಿದ್ದು, ಈ ಪೈಕಿ ರಾಜಧಾನಿ ಬೆಂಗಳೂರಿಗಿಂತ ಮಂಗಳೂರಿನಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿರುವುದು ವರದಿಯಾಗಿದೆ. ವರದಿಗಳ ಪ್ರಕಾರ, ಕರಾವಳಿ ಕರ್ನಾಟಕದ ಜಿಲ್ಲೆಗಳಾದ...