Friday, June 27, 2025

ವಿವಾದಾತ್ಮಕ ವ್ಯಕ್ತಿಗೆ ಡ್ರೋನ್ ಕ್ಯಾಮರಾದಲ್ಲಿ ವಿಡಿಯೋ ಚಿತ್ರೀಕರಣಕ್ಕೆ ಪೋಲೀಸ್ ಅವಕಾಶ : ಸಾಮಾಜಿಕ ಜಾಲತಾಣದಲ್ಲಿ ವೈರಲ್

ಬಂಟ್ವಾಳ: ಅನಗತ್ಯ ಓಡಾಟವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಡ್ರೋನ್ ಚಿತ್ರೀಕರಣಕ್ಕೆ ಮುಂದಾಗಿದ್ದು, ಆದರೆ ಚಿತ್ರೀಕರಣ ನಡೆಸುವ ವ್ಯಕ್ತಿಯ ಕುರಿತು ಸಾಕಷ್ಟು ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಈ ಕುರಿತು ಪರಿಶೀಲನೆ ನಡೆಸುವಂತೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಎಸ್ಪಿ ಲಕ್ಷ್ಮೀಪ್ರಸಾದ್ ಅವರಿಗೆ ತಿಳಿಸಿದ್ದಾರೆ.

 

ಬಂಟ್ವಾಳ ವಿಧಾನ ಸಭಾ ಕ್ಷೇತ್ರ ಸೇರಿದಂತೆ ಜಿಲ್ಲೆಯಲ್ಲಿರುವ ಅನೇಕ ಧಾರ್ಮಿಕ ಹಾಗೂ ಶೈಕ್ಷಣಿಕ, ಡ್ಯಾಂ ಸಹಿತ ಅನೇಕ ಸ್ಥಳಗಳ ವಿಡಿಯೋ ದುರ್ಬಳಕೆ ಮಾಡುವ ಸಾಧ್ಯತೆಗಳಿವೆ. ಈ ಬಗ್ಗೆ ನನಗೆ ದೂರುಗಳು ಕೂಡಾ ಬಂದಿವೆ. ಉತ್ತಮ ವಿಚಾರಗಳಿಗೆ ನೀಡಿದ ಅವಕಾಶ ಜಿಲ್ಲೆಯಲ್ಲಿ ಅಶಾಂತಿವುಂಟಾಗಬಾರದು.‌ ಅನುಮತಿ ನೀಡುವಾಗ ಪೂರ್ವಪರ ವಿಚಾರಗಳನ್ನು ಪಡೆದುಕೊಂಡು ಅನುಮತಿ ನೀಡಿ ಎಂದು ಅವರು ತಿಳಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ

ಬಂಟ್ವಾಳ: ವಿವಾದಾತ್ಮಕ ವ್ಯಕಿಗೆ ಡ್ರೋನ್ ಬಳಕೆ ಮಾಡಲು ಪೋಲೀಸ್ ಇಲಾಖೆ ಅನುಮತಿ ನೀಡಿದ್ದು ಸಾಕಷ್ಟು ವಿವಾದವುಂಟಾಗಿದ್ದು ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಅಗಿದೆ.
ಲಾಕ್ ಡೌನ್ ಅವಧಿಯಲ್ಲಿ ಅನಗತ್ಯವಾಗಿ ತಿರುಗಾಟ ಹಾಗೂ ಗುಂಪು ಸೇರಿದಂತೆ ಅನೇಕ ವಿಚಾರಗಳನ್ನು ತಡೆಯಲು ಎಸ್.ಪಿ.ಲಕ್ಮೀಪ್ರಸಾದ್ ಅವರು ಡ್ರೋನ್ ಕ್ಯಾಮರಾ ಬಳಸಿ ಅಮೂಲಕ ಪೋಲೀಸರ ಶ್ರಮವನ್ನು ಕಡಿಮೆ ಮಾಡಲು ಯೋಚನೆ ಹಾಕಿ, ಖಾಸಗಿ ವ್ಯಕ್ತಿಯೋರ್ವರಿಗೆ ಡ್ರೋನ್ ಬಳಕೆಗೆ ಅವಕಾಶ ನೀಡಿದ್ದರು.
ಆದರೆ ಆತ ವಿವಾದಾತ್ಮಕ ವ್ಯಕ್ತಿಯಾಗಿದ್ದು ವಿಡಿಯೋ ದುರ್ಬಳಕೆ ಮಾಡುವ ಅವಕಾಶಗಳು ಹೆಚ್ಚಾಗಿ ಇದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗುತ್ತಿದೆ.
ಅವಕಾಶವನ್ನು ಉಪಯೋಗಿಸಿಕೊಂಡು ಜಿಲ್ಲೆಯಲ್ಲಿನ ಕೆಲವು ಪ್ರಮುಖ ವಿಚಾರಗಳ ವಿಡಿಯೋ ಅಥವಾ ಸ್ಥಳ ಗಳ ದುರ್ಬಳಕೆ ಮಾಡುವ ಸಾದ್ಯತೆ ಗಳಿವೆ ಎಂಬ ಆತಂಕ ವ್ಯಕ್ತಪಡಿಸಿದ್ದಾರೆ.

More from the blog

ಬಡ ಮಗುವಿನ ಚಿಕಿತ್ಸೆ ನೆರವಿಗೆ ಮುಂದಾದ ಸಿದ್ದಕಟ್ಟೆ ಪ್ರಾ. ಕೃ. ಪತ್ತಿನ ಸಹಕಾರ ಸಂಘ…

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಇನ್ನೂ ಹೆಚ್ಚಿನ...

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...