Wednesday, January 28, 2026

ಸರಕಾರಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ: ನಗರ ಠಾಣೆಯಲ್ಲಿ ಪ್ರಕರಣ ದಾಖಲು

ಬಂಟ್ವಾಳ: ಸರಕಾರಿ ಅಧಿಕಾರಿಗಳ ಕರ್ತವ್ಯ ಕ್ಕೆ ತಂಡವೊಂದು ಅಡ್ಡಿಪಡಿಸಿದ ಘಟನೆ ಬಂಟ್ವಾಳ ತಾಲೂಕಿನ ತಾಲೂಕಿನ ಪುರಸಭಾ ವ್ಯಾಪ್ತಿಯ ಬಾರೆಕಾಡು ಎಂಬಲ್ಲಿ ಇಂದು ಮಧ್ಯಾಹ್ನ ನಡೆದಿದ್ದು, ಅಧಿಕಾರಿ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.
ಕೊರೊನಾ ಸಂದರ್ಭದಲ್ಲಿರುವ ಕರ್ತವ್ಯದಲ್ಲಿರುವ
ಫ್ಲೈಯಿಂಗ್ ಸ್ಕ್ವಾಡ್ ನ ಪುರಸಭಾ ಮಹಿಳಾ ಅಧಿಕಾರಿ ಯಾಸ್ಮೀನ್ ಅವರ ತಂಡಕ್ಕೆ ಕರ್ತವ್ಯಕ್ಕೆ ಅಡ್ಡಿಪಡಿಸಿದ ಚಾಲಕನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಲಾಕ್ ಡೌನ್ ಅವಧಿಯಲ್ಲಿ ಅವಧಿಮೀರಿಯೂ ಅಂಗಡಿಗಳನ್ನು ತೆರದಿಟ್ಟ ವರನ್ನು ಬಂದ್ ಮಾಡುವಂತೆ ತಿಳಿಸಿದಾಗ ಮತ್ತು ಲಾಕ್ ಡೌನ್ ಅವಧಿಯಲ್ಲಿ ಅನಗತ್ಯವಾಗಿ ಬೈಕಿನಲ್ಲಿ ತಿರುಗಾಟ ನಡೆಸುವವರಿಗೆ ಯಾಕೆ ತಿರುಗುತ್ತೀರಿ ಎಂದು ಪ್ರಶ್ನೆ ಮಾಡಿದ ಅಧಿಕಾರಿಗಳ ಮೇಲೆ ದಾಳಿ ಮಾಡಲಾಗಿದೆ ಎಂದು ಹೇಳಲಾಗಿದೆ.
ಈ ಬಗ್ಗೆ ಅಧಿಕಾರಿಗಳು ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ನಗರ ಪೋಲೀಸರು ಬಲೆಬೀಸಿದ್ದಾರೆ.

More from the blog

ಒಡಿಯೂರಿನಲ್ಲಿ ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಭಾರತ ವಿಶ್ವದ ಉಸಿರಾಗಿದ್ದು, ಯಾವ ಸೆಳೆತಕ್ಕೂ ಒಳಗಾಗಿಲ್ಲ. ವಂದೇ ಮಾತರಂ ಗೀತೆಗೆ ರಾಷ್ಟ್ರಭಕ್ತಿ ಉದ್ದೀಪಿಸುವ ಶಕ್ತಿಯಿದೆ. ಭಾಷೆ ಸಂಸ್ಕೃತಿ ಬಹಳ ದೊಡ್ಡದಾಗಿದ್ದು, ಇದರ ಉಳಿವಿಗೆ ಒಗ್ಗಟ್ಟಾಗುವ ಅಗತ್ಯವಿದೆ. ವಿಶ್ವ ವಿದ್ಯಾಲಯಗಳಲ್ಲಿ ತುಳು...

ವಿದ್ಯಾರ್ಜನೆ ಪಡೆದ ಸಂಸ್ಥೆಗೆ ನೀಡುವ ಸಹಾಯಸ್ತ ದೇವತಾ ಕಾರ್ಯಕ್ಕೆ ಸಮಾನ : ಪ್ರಭಾಕರ ಪ್ರಭು

ಬಂಟ್ವಾಳ : ಬಾಲ್ಯದಲ್ಲಿ ಬಾಹ್ಯ ಪ್ರಪಂಚದಲ್ಲಿನ ಆಗುಹೋಗುಗಳ ಬಗ್ಗೆ ಪರಿಚಯಿಸಿ ಪ್ರಾಥಮಿಕ ಶಾಲಾ ಪೂರ್ವ ಶಿಕ್ಷನವನ್ನು ನೀಡುತ್ತಿರುವ ಅಂಗನವಾಡಿಗಳ ಮೂಲಭೂತ ಸೌಕರ್ಯಗಳಿಗೆ ನೀಡುವ ಸಹಾಯಸ್ತಾವು ದೇವತಾ ಕಾರ್ಯಕ್ಕೆ ಸಮಾನವಾಗಿರುತ್ತದೆ ಎಂದೂ ಸಿದ್ದಕಟ್ಟೆ ಪ್ರಾಥಮಿಕ...

ಮಣಿಹಳ್ಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಆಶ್ರಯದಲ್ಲಿ ಎಳ್ಳು ಗಂಟು ದೀಪೋತ್ಸವ..

ಬಂಟ್ವಾಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಮಣಿಹಳ್ಳ ಇದರ ಆಶ್ರಯದಲ್ಲಿ ವಿಶ್ವ ಶಾಂತಿಗಾಗಿ, ಲೋಕ ಕಲ್ಯಾಣಾರ್ಥವಾಗಿ, ಶನಿದೋಷ ಪರಿಹಾರಕ್ಕಾಗಿ ಸಕಲ ಇಷ್ಟಾರ್ಥ ಸಿದ್ಧಿಗಾಗಿ ಜ. 24ರಂದು ಶನಿವಾರ ನಡೆದ ಸತತ 14...

ಜಿಲ್ಲೆಯಲ್ಲಿ ಹೆಚ್ಚಿದ ಚಿರತೆ ಉಪಟಳ : ದಾಳಿಗೆ ನಾಯಿ, ಕಾಡುಹಂದಿ ಬಲಿ

ಬಂಟ್ವಾಳ : ಚಿರತೆಯೊಂದು ನಾಯಿಯನ್ನು ಕೊಂದು ಕುತ್ತಿಗೆಯ ಭಾಗದಿಂದ ಮಾಂಸವನ್ನು ತಿಂದು ಹೋದ ಘಟನೆ ಬೆಳ್ತಂಗಡಿ ತಾಲೂಕಿನ ಮಾಲಾಡಿಯ ಗ್ರಾಮದ ಪುರಿ ಎಂಬಲ್ಲಿ ನಡೆದಿದೆ. ಆನಂದ ನಾಯರ್ ಎಂಬವರ ಮನೆಯಲ್ಲಿ ಸಾಕಿದ ಕಪ್ಪು ಬಣ್ಣದ...