Wednesday, July 9, 2025

ಲಾಕ್‍ಡೌನ್: ಬೋಳಂಗಡಿ ಎಂ.ಎಚ್. ಸ್ಟೋರ್ ಮಾಲಕನಿಂದ ತರಕಾರಿ ಕಿಟ್‍ಗಳ ವಿತರಣೆ

ಬಂಟ್ವಾಳ: ಕೊರೋನ ವೈರಸ್ ಹಬ್ಬುವಿಕೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಜಾರಿಯಲ್ಲಿರುವ ಲಾಕ್‍ಡೌನ್‍ನಿಂದ ಸಂಕಷ್ಟಲ್ಲಿರುವ ಸರ್ವ ಧರ್ಮಗಳ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ತಾಲೂಕಿನ ಮೆಲ್ಕಾರ್ ಸಮೀಪದ ಬೋಳಂಗಡಿಯಲ್ಲಿರುವ ಎಂ.ಎಚ್. ಸ್ಟೋರ್ ಮಾಲಕ ಎಂ.ಎಚ್.ಮುಸ್ತಫ ಎಂಬವರು ತರಕಾರಿ ಕಿಟ್‍ಗಳನ್ನು ವಿತರಿಸಿದ್ದಾರೆ.

ಬೋಳಂಗಡಿ ಮತ್ತು ಬೊಂಡಾಲ ಪರಿಸರದ ಸರ್ವ ಧರ್ಮಗಳ 325 ಕುಟುಂಬಗಳಿಗೆ ತಲಾ 300 ರೂಪಾಯಿಯ ತರಕಾರಿಗಳಿರುವ ಕಿಟ್‍ಗಳನ್ನು ವಿತರಿಸಿದ್ದಾರೆ. ಕಿಟ್‍ನಲ್ಲಿ ಆಲುಗೆಡ್ಡೆ, ಟೊಮೆಟೊ, ಸೌತೆ, ಮೆಣಸು, ಶುಂಠಿ, ಕ್ಯಾರೆಟ್, ಬೀಟ್‍ರೋಟ್, ಮುಳ್ಳುಸೌತೆ, ಕೊತಂಬರಿ ಸೊಪ್ಪು, ಸುರ್ಮಾಗೆಡ್ಡೆ ಸಹಿತ 9 ಕೆ.ಜಿ. ತರಕಾರಿಗಳು ಕಿಟ್‍ನಲ್ಲಿ ಇವೆ.

ಲಾಕ್‍ಡೌನ್‍ನಿಂದ ಸಂಕಷ್ಟದಲ್ಲಿರುವ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ವಿವಿಧ ಸಂಘ ಸಂಸ್ಥೆಗಳು ಅಕ್ಕಿ ಸಹಿತ ದಿನಸಿ ಸಾಮಗ್ರಿಗಳನ್ನು ಈಗಾಗಲೇ ವಿತರಿಸಿದೆ. ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಅವರವರ ಕೈಲಾದಷ್ಟು ಸ್ಪಂದಿಸುವುದು ಪುಣ್ಯದ ಕೆಲಸವಾಗಿದೆ. ಈ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ಬೋಳಂಗಡಿ ಮತ್ತು ಬೊಂಡಾಲ ಪರಿಸರದ ಮುಸ್ಲಿಮ್, ಹಿಂದೂ, ಕ್ರಿಶ್ಚಿಯನ್ ಧರ್ಮಗಳ 325 ಕುಟುಂಬಗಳಿಗೆ ಒಂದು ಲಕ್ಷ ರೂಪಾಯಿ ವೆಚ್ಚದಲ್ಲಿ ತರಕಾರಿ ಕಿಟ್‍ಗಳನ್ನು ವಿತರಿಸಲಾಗುತ್ತಿದೆ ಎಂದು ಎಂ.ಎಚ್.ಸ್ಟೋರ್ ಮಾಲಕ ಮುಸ್ತಫ ತಿಳಿಸಿದ್ದಾರೆ.

ವಿವಿಧ ಸಾಮಾಜಿಕ ಕೆಲಸಗಳಲ್ಲಿ ಗುರುತಿಸಿಕೊಂಡಿರುವ ಮುಸ್ತಫ ಅವರು ಪತ್ರಿಕಾ ವಿತರಕರೂ ಆಗಿದ್ದಾರೆ.

More from the blog

ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ – ದಿನೇಶ್ ಗುಂಡೂರಾವ್.. 

ಮಂಗಳೂರು : ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ ಕೈ ಗೊಳ್ಳಲಾಗುವುದುಎಂದು ಅರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಅವರು...

ಕಾರ್ಮಿಕರ ಅಖಿಲ ಭಾರತ ಮುಷ್ಕರದ ಅಂಗವಾಗಿ ಕಾರ್ಮಿಕರ ಪ್ರತಿಭಟನೆ..

ಬಂಟ್ವಾಳ : ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಹಾಗೂ ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ವಿರೋಧಿಸಿ ಕಾರ್ಮಿಕ ಸಂಘಟನೆಗಳಿಂದ ಅಖಿಲ ಭಾರತ ಮುಷ್ಕರದ ದ ಅಂಗವಾಗಿ ಜೆ.ಸಿ.ಟಿ.ಯು ಮತ್ತು ಸಂಯುಕ್ತ ಹೋರಾಟ...

ಭಾರೀ ಮಳೆ ಮುನ್ಸೂಚನೆ : ಒಂದು ವಾರ ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್..

ಮಂಗಳೂರು : ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಜುಲೈ 14ರವರೆಗೆ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು,...

ಕುಡ್ತಮುಗೇರು: ಬಸ್ಸಿನಿಂದ ರಸ್ತೆಗೆ ಬಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು 

ವಿಟ್ಲ: ಖಾಸಗಿ ಬಸ್ಸಿನಿಂದ ಬಿದ್ದ ವ್ಯಕ್ತಿಯೋರ್ವರು ಚಿಕಿತ್ಸೆಗೆ ಸ್ಪಂಧಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕುಡ್ತಮುಗೇರು ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಕೊಡಂಗೆ ನಿವಾಸಿ ಚಿದಾನಂದ ರೈ (43 ವ.) ಮೃತಪಟ್ಟವರು. ಜು.7ರಂದು ಬೆಳಗ್ಗೆ...