Tuesday, February 11, 2025

ಬಿ.ಆರ್.ಎಂ.ಪಿ. ಶಾಲೆಗೆ ಹಳದಿ ಶಾಲೆ ಪ್ರಶಸ್ತಿ

ಬಂಟ್ವಾಳ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ರಾಜ್ಯ ವಿಜ್ಞಾನ ಪರಿಷತ್ತು ದಕ್ಷಿಣ ಕನ್ನಡ ಇದರ ಸಹಯೋಗದೊಂದಿಗೆ ನಡೆಸಿದ ಪರಿಸರ ಸ್ನೇಹ್ರಿ ಶಾಲಾ ಅಭಿಯಾನದಲ್ಲಿ ವಿದ್ಯಾಗಿರಿಯ ಬಿ.ಆರ್.ಎಂ.ಪಿ.ಶಾಲೆಯು ಹಳದಿ ಶಾಲೆ ಪ್ರಶಸ್ತಿಗೆ ಭಾಜನವಾಯಿತು. ಪ್ರಶಸ್ತಿಯು ನಗದು, ಪ್ರಶಸ್ತಿ ಪತ್ರ ಹಾಗೂ ಫಲಕವನ್ನು ಒಳಗೊಂಡಿದೆ. ಶಾಲಾ ವಾತಾವರಣವು ಪರಿಸರಕ್ಕೆ ಪೂರಕವಾಗಿದ್ದು, ತ್ಯಾಜ್ಯ ನಿರ್ವಹಣೆ, ಉಪಯೋಗಿಸಿದ ನೀರಿನ ಪುನರ್ಬಳಕೆ, ವಿದ್ಯಾರ್ಥಿ ಅರಿವು ಮತ್ತು ಜಾಗೃತಿ, ಔಷಧೀಯ ಸಸ್ಯಗಳ ಬೆಳೆ ಇತ್ತಾದಿ ಹಂತಗಳಲ್ಲಿ ಇಲಾಖೆಯು ಸಮೀಕ್ಷೆ ನಡೆಸಿದ್ದು, ಗುಣಮಟ್ಟವನ್ನು ಆಧರಿಸಿ ಈ ಶಾಲೆಯನ್ನು ಪ್ರಶಸ್ತಿಗೆ ಆಯ್ಕೆ ಮಾಡಿದ್ದು ಫೆ.21ರಂದು ನಡೆದ ಜಿಲ್ಲಾ ಪರಿಸರ ಮಿತ್ರ ಶಾಲೆ 2018-19 ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಪ್ರಶಸ್ತಿಯನ್ನು ಸ್ವೀಕರಿಸಿತು. ಶಿಕ್ಷಕಿ ಕೇಶವತಿ ಅವರ ಮುಂದಾಳತ್ವದಲ್ಲಿ ವಿದ್ಯಾರ್ಥಿಗಳು ಹಳದಿ ಶಾಲೆ ಪ್ರಶಸ್ತಿಯನ್ನು ಸ್ವೀಕರಿಸಿದ್ದು, ಶಾಲಾ ಪ್ರಾಂಶುಪಾಲೆ ರಮಾಶಂಕರ್ ಶಿಕ್ಷಕ ವೃಂದದವರನ್ನು ಹಾಗೂ ವಿದ್ಯಾಥಿಗಳನ್ನು ಶ್ಲಾಘಿಸಿ ಹರ್ಷ ವ್ಯಕ್ತಪಡಿಸಿದ್ದಾರೆ.

More from the blog

ಕಾರು ಡಿಕ್ಕಿ ಬೈಕ್ ಸವಾರ ಗಂಭೀರ

ಬಂಟ್ವಾಳ: ಮಣಿಹಳ್ಳ-ಮಾವಿನಕಟ್ಟೆ ರಸ್ತೆಯ ಮಣಿನಾಲ್ಕೂರು ಗ್ರಾಮದ ಎರ್ಮಳದಲ್ಲಿ ಸ್ಕೂಟರೊಂದಕ್ಕೆ ಎದುರಿನಿಂದ ಆಗಮಿಸಿದ ಕಾರೊಂದು ಢಿಕ್ಕಿಯಾಗಿ ಸವಾರ ಗಂಭೀರ ಗಾಯಗೊಂಡ ಘಟನೆ ಫೆ. ೯ರಂದು ನಡೆದಿದೆ. ಸರಪಾಡಿ ಕಲ್ಕೊಟ್ಟೆ ನಿವಾಸಿ ಸುಂದರ ಬಾಬು ಶೆಟ್ಟಿ ಗಾಯಗೊಂಡವರು....

ನೇತ್ರಾವತಿ ನದಿಗೆ ಅಡ್ಡಲಾಗಿ ನಿರ್ಮಿಸಿದ 3ನೇ ಬ್ರಿಡ್ಜ್ ನಲ್ಲೂ ನೀರು ಸಂಗ್ರಹ ಆರಂಭ

ಬಂಟ್ವಾಳ: ಬಂಟ್ವಾಳದ ಜಕ್ರಿಬೆಟ್ಟುನಲ್ಲಿ ಜೀವನದಿ ನೇತ್ರಾವತಿ ನದಿಗೆ ಅಡ್ಡಲಾಗಿ ಸಣ್ಣ ನೀರಾವರಿ ಇಲಾಖೆಯ ಮೂಲಕ ಸುಮಾರು 135 ಕೋ.ರೂ.ವೆಚ್ಚದಲ್ಲಿ ನಿರ್ಮಾಣಗೊಂಡ ಸೇತುವೆ ಸಹಿತ ಕಿಂಡಿ ಅಣೆಕಟ್ಟು(ಬ್ರಿಡ್ಜ್ ಕಂ ಬ್ಯಾರೇಜ್)ಗೆ ಇದೇ ಮೊದಲ ಬಾರಿಗೆ...

ಬಂಟ್ವಾಳ : ಸಮಾಜ ಸೇವಾ ಸಹಕಾರಿ ಸಂಘ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಜಯ

ಬಂಟ್ವಾಳ : ಪ್ರತಿಷ್ಠಿತ ಸಮಾಜ ಸೇವಾ ಸಹಕಾರಿ ಸಂಘ ನಿಯಮಿತ ಬಂಟ್ವಾಳ ಇದರ ಮುಂದಿನ 5 ವರ್ಷಗಳ ಅವಧಿಯ ಆಡಳಿತ ಮಂಡಳಿಗೆ‌ ಭಾನುವಾರ‌ ಚುನಾವಣೆ ನಡೆದಿದ್ದು, ಸಹಕಾರ ಭಾರತಿಯ 17 ಮಂದಿ‌ ಅಭ್ಯರ್ಥಿಗಳು...

ಕೊಳ್ನಾಡು : ಬಾರೆಬೆಟ್ಟು ಮಂಟಮೆಯಲ್ಲಿ ಕಾಲಾವಧಿ ಜಾತ್ರೆ

ವಿಟ್ಲ : ಕೊಳ್ನಾಡು ಗ್ರಾಮದ ಕಾರಣಿಕದ ಪ್ರಸಿದ್ಧ ದೈವಕ್ಷೇತ್ರ 'ಬಾರೆಬೆಟ್ಟು ಮಂಟಮೆ'ಯ ಕಾಲಾವಧಿ ಜಾತ್ರೆಯು ವಿಜೃಂಭಣೆಯಿಂದ ಜರಗಿತು. ಶ್ರೀ ಮಲರಾಯಿ ಮತ್ತು ಬಂಟ ದೈವದ ದೈವದ ಕೊಟ್ಯದಾಯನ ನೇಮೋತ್ಸವ ನಡೆಯಿತು. ಇದೇ ಸಂದರ್ಭದಲ್ಲಿ ಶ್ರೀ ಮಲರಾಯಿ...