Tuesday, January 27, 2026

ದ.ಕ.ಜಿಲ್ಲೆಯ ಆರ್ಥಿಕ ವ್ಯವಸ್ಥೆ ಯ ಸಬಲೀಕರಣಕ್ಕೆ ಸಹಕಾರಿ ಸಂಘಗಳ ಪಾತ್ರ ಬಹಳ ದೊಡ್ಡದು : ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ಬ್ಯಾಂಕಿಗ್ ಕ್ಷೇತ್ರದಲ್ಲಿ ಅಪ್ರತಿಮ ಸಾಧನೆ, ಕೊಡುಗೆ ನೀಡಿದ ಹೆಗ್ಗಳಿಕೆ ದ.ಕ.ಜಿಲ್ಲೆಗಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹೇಳಿದರು.
ಮೆಲ್ಕಾರ್ ನಲ್ಲಿ ನೂತನ ಶ್ರೀ ಶಂಕರ್ ಪತ್ತಿನ ಸಹಕಾರ ಸಂಘ (ನಿ.) ಇದರ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
ದ.ಕ‌.ಜಿಲ್ಲೆಯ ಜನರಿಗೆ ಆರ್ಥಿಕ ವ್ಯವಸ್ಥೆ ಜ್ಞಾನ ಇದೆ, ವಿವಿಧ ರೀತಿಯಲ್ಲಿ ಆರ್ಥಿಕತೆ ಯನ್ನು ಕ್ರೋಡೀಕರಿಸಿ ಕೃಷಿಯ ಜೊತೆಗೆ ವಿವಿಧ ಸ್ತರದ ಉದ್ಯಮ ಗಳಿಗೆ ನೆರವು ನೀಡುವ ಕೆಲಸ ಸಹಕಾರ ಸಂಘಗಳಿಂದ ನಡೆಯುತ್ತಿರುವುದು ಅಭಿನಂದನೀಯ ಎಂದರು. ದ.ಕ.ಜಿಲ್ಲೆಯ ಆರ್ಥಿಕ ವ್ಯವಸ್ಥೆ ಯ ಸಬಲೀಕರಣಕ್ಕೆ ಸಹಕಾರಿ ಸಂಘಗಳ ಸಹಕಾರ ಹೆಚ್ಚು ಇದೆ ಇದೆ ಎಂದು ಅವರು ಹೇಳಿದರು.

ಭದ್ರತಾ ಕೊಠಡಿ ಉದ್ಘಾಟನೆ ಮಾಡಿದ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಮಾತನಾಡಿ ಒಳ್ಳೆಯ ಉದ್ದೇಶದಿಂದ ಈ ಸಹಕಾರಿ ಸಂಘ ಉದ್ಘಾಟನೆ ಆಗಿದೆ. ಎಲ್ಲಾ ವರ್ಗದ ಜನರಿಗೆ ಆಸರೆಯಾಗಲಿ ಎಂದು ಅವರು ಹೇಳಿದರು.

ಗಣಕ ಯಂತ್ರವನ್ನು ಉದ್ಘಾಟನೆ ನಡೆಸಿದ ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿ , ಸಹಕಾರಿ ಸಂಘಗಳ ಮೂಲಕ ಪ್ರಾಮಾಣಿಕ ವ್ಯವಹಾರಕ್ಕೆ ದ.ಕ.ಜಿಲ್ಲೆ ಹೆಸರುವಾಸಿಯಾಗಿದೆ ಎಂದು ಅವರು ಹೇಳಿದರು.
ದ.ಕ.ಜಿಲ್ಲೆಯಲ್ಲಿ ಸಹಕಾರ ಕ್ಷೇತ್ರದಲ್ಲಿ ಬಂಟ್ವಾಳ ತಾಲೂಕಿನ ಅನೇಕ ಸಹಕಾರಿಗಳು ಕೊಡುಗೆ ನೀಡಿದ್ದಾರೆ ಎಂದು ನೆನಪಿಸಿದರು.
ಸರಕಾರದ ಸವಲತ್ತುಗಳನ್ನು ಪಡೆಯಲು ಸಹಕಾರಿ ಸಂಘಗಳ ಬಹಳ ಸುಲಭ ಮತ್ತು ಪ್ರಯೋಜನಕಾರಿಯಾಗಿದೆ ಎಂದು ಅವರು ಹೇಳಿದರು.

ಮುಖ್ಯ ಅತಿಥಿಗಳಾಗಿ ಸಹಕಾರ ಸಂಘಗಳ ಉಪನಿಬಂಧಕ ಪ್ರವೀಣ್ ಬಿ.ನಾಯಕ್ , ಸಹಕಾರಿ ಸಂಘ ದ ಬಂಟ್ವಾಳ ವ್ಯಾಪ್ತಿಯ ಅಧಿಕಾರಿ ಸುಕನ್ಯ, ಮಾಲಕ ಮಹಮ್ಮದ್ ಇಕ್ಬಾಲ್ , ಮತ್ತು ಸಹಕಾರಿ ಸಂಘದ ಪ್ರವರ್ತಕರು ಮುರಳೀಧರ್ ರಾವ್, ವೇದವ್ಯಾಸ ರಾಮಕುಂಜ, ಅನಂತಪ್ರಭು, ಜಯಾನಂದ ಪೂಜಾರಿ, ಪ್ರವೀಣ್ ಚಂದ್ರ ಶೆಟ್ಟಿ, ಶಾಂತ, ರಮಾ ಎಸ್.ಭಂಡಾರಿ, ಸುದರ್ಶನ ಮಯ್ಯ, ಜಯಾನಂದ ಪೆರಾಜೆ, ಅನಿಲ್ ಕುಮಾರ್ ಬರಿಮಾರು ಉಪಸ್ಥಿತರಿದ್ದರು.

ಮುಖ್ಯ ಪ್ರವರ್ತಕ ಕೆಯ್ಯೂರು ನಾರಾಯಣ ಭಟ್ ಪ್ರಾಸ್ತಾವಿಕ ವಾಗಿ ಮಾತನಾಡಿದರು. ಜಯಾನಂದ ಪೆರಾಜೆ ವಂದಿಸಿದರು.

More from the blog

ಮಣಿಹಳ್ಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಆಶ್ರಯದಲ್ಲಿ ಎಳ್ಳು ಗಂಟು ದೀಪೋತ್ಸವ..

ಬಂಟ್ವಾಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಮಣಿಹಳ್ಳ ಇದರ ಆಶ್ರಯದಲ್ಲಿ ವಿಶ್ವ ಶಾಂತಿಗಾಗಿ, ಲೋಕ ಕಲ್ಯಾಣಾರ್ಥವಾಗಿ, ಶನಿದೋಷ ಪರಿಹಾರಕ್ಕಾಗಿ ಸಕಲ ಇಷ್ಟಾರ್ಥ ಸಿದ್ಧಿಗಾಗಿ ಜ. 24ರಂದು ಶನಿವಾರ ನಡೆದ ಸತತ 14...

ಜಿಲ್ಲೆಯಲ್ಲಿ ಹೆಚ್ಚಿದ ಚಿರತೆ ಉಪಟಳ : ದಾಳಿಗೆ ನಾಯಿ, ಕಾಡುಹಂದಿ ಬಲಿ

ಬಂಟ್ವಾಳ : ಚಿರತೆಯೊಂದು ನಾಯಿಯನ್ನು ಕೊಂದು ಕುತ್ತಿಗೆಯ ಭಾಗದಿಂದ ಮಾಂಸವನ್ನು ತಿಂದು ಹೋದ ಘಟನೆ ಬೆಳ್ತಂಗಡಿ ತಾಲೂಕಿನ ಮಾಲಾಡಿಯ ಗ್ರಾಮದ ಪುರಿ ಎಂಬಲ್ಲಿ ನಡೆದಿದೆ. ಆನಂದ ನಾಯರ್ ಎಂಬವರ ಮನೆಯಲ್ಲಿ ಸಾಕಿದ ಕಪ್ಪು ಬಣ್ಣದ...

ಕೊಡಾಜೆ : ತರ್ಬಿಯತುಲ್ ಇಸ್ಲಾಂ ಮದ್ರಸದಲ್ಲಿ ಗಣರಾಜ್ಯೋತ್ಸವ ಆಚರಣೆ

ಬಂಟ್ವಾಳ : ಕೊಡಾಜೆ ಬದ್ರಿಯಾ ಜುಮಾ ಮಸೀದಿ ಇದರ ಅಧೀನದ ತರ್ಬಿಯತುಲ್ ಇಸ್ಲಾಂ ಮದ್ರಸದ ವತಿಯಿಂದ ಗಣರಾಜ್ಯೋತ್ಸವ ಆಚರಿಸಲಾಯಿತು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಮಸೀದಿ ಅಧ್ಯಕ್ಷ ಅಬ್ಬಾಸ್ ನೇರಳಕಟ್ಟೆ ಧ್ವಜಾರೋಹಣ ನೆರವೇರಿಸಿದರು. ಮಸೀದಿ ಕಾರ್ಯದರ್ಶಿ ಎಸ್.ಎಂ.ರಫೀಕ್...

ಕಟೀಲು 7 ಮೇಳಗಳ ಜ.27ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.27ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.27ರ ಸೇವೆಯಾಟಗಳ ವಿವರ : ಆಡಳಿತ ಮಂಡಳಿ, ಶ್ರೀ ಮಹಾಗಣಪತಿ ದೇವಸ್ಥಾನ,...