ಬಂಟ್ವಾಳ: ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯ ಪರಿಣಾಮ ಶುಕ್ರವಾರ ಬಂಟ್ವಾಳ ತಾಲೂಕಿನ ವಿವಿಧ ಕಡೆಗಳಲ್ಲಿ ಕೃಷಿ ಭೂಮಿ ಸಹಿತ ಅನೇಕ ಕಡೆಗಳಲ್ಲಿ ಹಾನಿ ಸಂಭವಿಸಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ ಘಟನೆ ಸಂಭವಿಸಿದೆ.



ಸಜೀಪನಡು ಗ್ರಾಮದ ಬೊಳಮೆ ಉಮಾವತಿ ಅವರ ಮನೆ ಪೂರ್ಣ ಕುಸಿದಿದ್ದು ಸುಮಾರು 2 ಲಕ್ಷ ನಷ್ಟ ಸಂಭವಿಸಿದೆ.
ಬಾಳೆಪುಣಿಯ ಕಣಂತೂರಿನಲ್ಲಿ ಬಾಬು ಗಟ್ಟಿಯವರ ಗುಡ್ಡ ಕುಸಿದು ನೆರೆ ನೀರು ಕೃಷಿ ತೋಟಗಳಿಗೆ ನುಗ್ಗಿದೆ. ಸಜೀಪಪಡು ಗ್ರಾಮದಲ್ಲಿ ಭತ್ತದ ಗದ್ದೆಗೆ ತೋಡಿನ ನೀರು ನುಗ್ಗಿದೆ.

ಕಸ್ಬಾ ಗ್ರಾಮದ ಫೆಲಿಕ್ಸ್ ಎಂಬವರ ಮನೆಗೆ ಹಾನಿಯಾಗಿ ಸುಮಾರು 50 ಸಾವಿರ ನಷ್ಟ ಸಂಭವಿಸಿದೆ.
ಸಜೀಪ ಮುನ್ನೂರು ಗ್ರಾಮದ ನಂದಾವರ ಆಸಿಫ್ ಎಂಬವರ ಹಾನಿಯಾಗಿ ಸುಮಾರು 50 ಸಾವಿರ ರೂ. ನಷ್ಟ ಸಂಭವಿಸಿದೆ.
ನರಿಕೊಂಬು ಗ್ರಾಮಾದ ಹಮೀದ್ ಎಂಬವರ ಮನೆ ಸಮೀಪ ಗುಡ್ಡ ಜರಿದು ಬಿದ್ದಿದೆ. ಸಜೀಪನಡು ಗ್ರಾಮದ ಸೋಮನಾಥ ಎಂಬವರ ಕೃಷಿ ಭೂಮಿಗೆ ನೀರು ನುಗ್ಗಿ ಹಾನಿಯಾಗಿದೆ ಎಂದು ತಾಲೂಕು ಆಡಳಿತ ತಿಳಿಸಿದೆ.












