Saturday, July 5, 2025

ಸರ್ಕಾರಿ ಜಾಗ ಕಬಳಿಸಿ ಮಾರಾಟ ಮಾಡಲು ಯತ್ನಿಸಿದವರ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾದ ಕಂದಾಯ ಇಲಾಖೆ……..

ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಇರಾ ಗ್ರಾಮದ ಮೂಳೂರು ಮುಖ್ಯ ರಸ್ತೆಯ ಬಳಿ ಸರ್ವೆ ನಂ 286/1 ರಲ್ಲಿ 1.68 ಎಕರೆ ಸರ್ಕಾರಿ ಜಮೀನನ್ನು ಗ್ರಾಮದ ಒಳಗಿನ ಹಾಗೂ ಹೊರಗಿನ ಕೆಲವು ಖಾಸಗಿ ವ್ಯಕ್ತಿಗಳು ಸಮತಟ್ಟು ಮಾಡಿ ಮಾರಾಟ ಮಾಡಲು ಯತ್ನಿಸುತ್ತಿರುವಾಗ  ಸಾರ್ವಜನಿಕರ ದೂರಿನ ಮೇರೆಗೆ ಕಂದಾಯ ಇಲಾಖೆಯವರು ಬಂದು ಸ್ಥಳ ಪರಿಶೀಲನೆ ನಡೆಸಿ ಸಂಬಂಧಪಟ್ಟವರಿಗೆ ಎಚ್ಚರಿಕೆ ನೀಡಿದ ಬಗ್ಗೆ ವರದಿಯಾಗಿದೆ. ಬಂಟ್ವಾಳ ತಹಶೀಲ್ದಾರ್ ಹಾಗೂ ಗ್ರಾಮ ಕರನಣಿಕರು ಈಗಾಗಲೆ ಸರ್ಕಾರಿ ಜಮೀನಿಗೆ ಪ್ರಕಟಣೆಯ ನಾಮಫಲಕವನ್ನು ಅಳವಡಿಸಿದ್ದು ಕಾನೂನು ಉಲ್ಲಂಘಿಸಿದಲ್ಲಿ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದ್ದು ಸಾರ್ವಜನಿಕ ವಲಯದಲ್ಲಿ ಶ್ಲಾಘನೆಗೆ ಪಾತ್ರವಾಗಿದೆ.

More from the blog

ಬಂಟ್ವಾಳ ತಾಲೂಕು ಪ್ರಾ. ಕೃ. ಪ. ಸ. ಸಂಘಗಳ ಒಕ್ಕೂಟದ ವತಿಯಿಂದ ಗೌರವ ಅಭಿನಂದನಾ ಕಾರ್ಯಕ್ರಮ..

ಬಂಟ್ವಾಳ : ಸಹಕಾರಿ ಸಂಘದ ಕಾರ್ಯನಿರ್ವಹಣಾಧಿಕಾರಿ ಸೇವೆ ಸಲ್ಲಿಸಿ ವಯೋನಿವೃತ್ತಿ ಹೊಂದಿರುವ ಮಣಿನಾಲ್ಕೂರು ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಧಾಕರ ಶೆಟ್ಟಿ, ಕಜೆಕಾರು ಸಹಕಾರಿ ಸಂಘದ ಕಾರ್ಯನಿರ್ವಹಣಾಧಿಕಾರಿ ಸರಸ್ವತಿ, ಇಡ್ಕಿದು ಸಹಕಾರಿ ಸಂಘದ...

Accident : ಡಿವೈಡರ್ ಗೆ ಡಿಕ್ಕಿಯಾದ ಕಾರು : ಚಾಲಕ ಸಾವು..

ಬಂಟ್ವಾಳ : ಕಾರೊಂದು ರಸ್ತೆ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೆಳಗಿನ ತುಂಬೆ ಎಂಬಲ್ಲಿ ಶನಿವಾರ ಮದ್ಯಾಹ್ನ ನಡೆದಿರುವ ಬಗ್ಗೆ ವರದಿಯಾಗಿದೆ. ಮೃತರನ್ನು ಪಾವೂರು ನಿವಾಸಿ ನೌಫಲ್...

Bantwal : ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಪೋಸ್ಟ್ – ಸುಮೋಟೋ ಕೇಸ್ ದಾಖಲು

ಬಂಟ್ವಾಳ: ಸಾಮಾಜಿಕ ಜಾಲತಾಣವಾದ watsapp ನಲ್ಲಿ ಸುಳ್ಳು ಸುದ್ದಿ ಪೋಸ್ಟ್ ಮಾಡಿ ಸಾರ್ವಜನಿಕರಿಗೆ ಭಯಬೀತಿಯನ್ನುಂಟು ಮಾಡಿ ಸಾರ್ವಜನಿಕ ನೆಮ್ಮದಿ ಕೆಡಿಸುವ ಮಟ್ಟಿಗೆ ಅಪರಾಧ ಮಾಡಿರುವ ವ್ಯಕ್ತಿಯ ಮೇಲೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ...

Agriculture : ‘ರಥಬೀದಿ ಜವನೆರ್’ ತಂಡದ ಸದಸ್ಯರಿಂದ ಭತ್ತದ ನಾಟಿ..

ಬಂಟ್ವಾಳ: ದ.ಕ.ಜಿಲ್ಲೆಯಲ್ಲಿ ಭತ್ತದ ಕೃಷಿ ಕಡಿಮೆಯಾಗುತ್ತಾ ಬರುವ ಕಾಲಘಟ್ಟದಲ್ಲಿ ಯುವಕರ ತಂಡವೊಂದು ಸಮಾಜ ಸೇವೆಯ ಉದ್ದೇಶದಿಂದ ಭತ್ತದ ನಾಟಿಯನ್ನು ಮಾಡಿ ಗ್ರಾಮದಲ್ಲಿ ಗಮನ ಸೆಳೆದಿದ್ದಾರೆ. "ರಥಬೀದಿ ಜವನೆರ್ " ಎಂಬ ಹೆಸರಿನ ಸುಮಾರು 15...