Friday, January 30, 2026

ಪದ್ಮಾಸನ ಭಂಗಿಯಲ್ಲಿ ಕಾಲಿಗೆ ಸರಪಳಿ ಕಟ್ಟಿ ಈಜಿ ದಾಖಲೆ ಬರೆದ ಶಿಕ್ಷಕ

ಮಂಗಳೂರು: ಬಂಟ್ವಾಳದ ಕಲ್ಮಂಜ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ನಾಗರಾಜ ಖಾರ್ವಿ ಕಂಚುಗೋಡು ಅವರು ಶುಕ್ರವಾರ ಬೆಳಿಗ್ಗೆ ನಗರದ ತಣ್ಣೀರು ಬಾವಿ ಬಳಿ ಅರಬ್ಬಿ ಸಮುದ್ರದಲ್ಲಿ ಒಂದು ಕಿ.ಮೀ. ದೂರ ಪದ್ಮಾಸನ ಹಾಕಿ, ಕಾಲಿಗೆ ಸರಪಳಿ ಬಿಗಿದು ಬ್ರೆಸ್ಟ್ ಸ್ಟ್ರೋಕ್ನಲ್ಲಿ ಈಜಿ, ದಾಖಲೆ ಬರೆದರು.

25, ನಿಮಿಷ 16 ಸೆಕೆಂಡ್ 63 ಫ್ರಾಕ್ಷನ್ ನಲ್ಲಿ ಒಂದು ಕಿ.ಮೀ ನಲ್ಲಿ ಒಂದು ಕಿ.ಮೀ ಗುರಿ ತಲುಪಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ದಾಖಲೆ ಹಾಗೂ ಈಜು ಮತ್ತು ಯೋಗದ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಅವರು ಅರಬ್ಬಿ ಸಮುದ್ರದಲ್ಲಿ ಒಂದು ಕಿ.ಮೀ. ದೂರವನ್ನು ಪದ್ಮಾಸನ ಹಾಕಿ ಕ್ರಮಿಸಿದರು.

ಬೆಳಿಗ್ಗೆಯೆ ಸಾಧನೆಗೆ ಮುಂದಾದ ನಾಗರಾಜ ಖಾರ್ವಿ‌ ಸಮುದ್ರದಲ್ಲಿ ಬೆಳಗಿನ ಗಾಳಿ ಉತ್ತರದ ಕಡೆಗಿದ್ದರೂ ತನ್ನ ಸಂಪೂರ್ಣ ಶಕ್ತಿ ಬಳಸಿ ದಕ್ಷಿಣದ ಕಡೆಗೆ ನೆಟ್ಟಿದ್ದ ಧ್ವಜವನ್ನು ತಲುಪಿ ಗುರಿ ಮುಟ್ಟಿದರು. ಅವರನ್ನು ಸ್ನೇಹಿತರು, ಸಂಬಂಧಿಗಳು ಸನ್ಮಾನಿಸಿ, ಪ್ರೋತ್ಸಾಹಿಸಿದರು. ಈ ಸಂದರ್ಭದಲ್ಲಿ ಹಲವಾರು ಜನರು ಸಮುದ್ರ ದಡದಲ್ಲಿ ನಿಂತು‌ ಈಜುವುದನ್ನು‌ ಕುತೂಹಲದಿಂದ ವೀಕ್ಷಿಸಿದರು.

More from the blog

ವಿಕಾಸ್ ಪುತ್ತೂರು ಅವರಿಗೆ ನೀಡಿದ ನೋಟಿಸ್ ಇಲಾಖೆಯ ಕಣ್ಣು ತಪ್ಪಿನಿಂದ ಆಗಿದ್ದಂತೆ!!!!

ಬಂಟ್ವಾಳ: ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಜೆಪಿ ಯುವ ನಾಯಕ ವಿಕಾಸ್ ಪುತ್ತೂರು ಅವರಿಗೆ ದ್ವೇಷ ಭಾಷಣದ ಆರೋಪದ ಮೇಲೆ ಪೋಲೀಸ್ ಇಲಾಖೆ ನೀಡಿದ ನೋಟಿಸ್ ನ ವಿರುದ್ದ ಅಧಿವೇಶನದಲ್ಲಿ ವಿಧಾನ ಪರಿಷತ್ತು ಸದಸ್ಯ...

ಮಂಗಳೂರು : ಸ್ಟ್ರೀಟ್ ಫುಡ್ ಫೆಸ್ಟ್ ಗೆ ಚಾಲನೆ

ಮಂಗಳೂರು : ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಶುಕ್ರವಾರ ಚಾಲನೆ ನೀಡಲಾಯಿತು. ನಗರದ ಕದ್ರಿ ಪಾರ್ಕ್ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಖ್ಯಾತ ಚೆಫ್ ಶ್ರೀಯಾ...

Bantwal : ಫೆ.1ರಂದು ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರು ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ಫೆ.1ರಂದು ಭಾನುವಾರ ನಡೆಯಲಿದೆ. 2023-24...

ಫೆ.3ರಿಂದ 07ರವರೆಗೆ ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರೆ ಹಾಗೂ ಬ್ರಹ್ಮರಥೋತ್ಸವ

ಬಂಟ್ವಾಳ: ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರಮಹೋತ್ಸವ ಹಾಗೂ ಬ್ರಹ್ಮರಥೋತ್ಸವ ಬ್ರಹ್ಮ ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ಫೆ.3 ರಿಂದ 07 ರವರೆಗೆ ನಡೆಯಲಿದೆ ಎಂದು ಸುಧಾಕರ ಶೆಣೈ ಮರೋಳಿ...