Thursday, February 13, 2025

ಕೂಲಿ ಕಾರ್ಮಿಕನಿಗೆ ತಂಡದಿಂದ ಹಲ್ಲೆ : ತನಿಖೆಗೆ ಒತ್ತಾಯ

ಬಂಟ್ವಾಳ: ಕೂಲಿ ಕಾರ್ಮಿಕ ನೋರ್ವನ ಮನೆಗೆ ಕಾರು ಮತ್ತು ರಿಕ್ಷಾದೊಂದಿಗೆ ತಂಡವೊಂದು ಹಲ್ಲೆ ನಡೆಸಿದ ಘಟನೆ ಪುಂಜಾಲಕಟ್ಟೆ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಪುಂಜಾಲಕಟ್ಟೆ ಮೂರ್ಜೆ ನಿವಾಸಿ ಸತೀಶ್ ನಾಯ್ಕ ಹಲ್ಲೆಗೊಳಗಾಗಿ ಪುಂಜಾಲಕಟ್ಟೆ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪ್ರವೀಣ್ ಮತ್ತು ಅವರ ಸಂಗಡಿಗರು ಸೇರಿ ಸತೀಶ್ ನಾಯ್ಕ ಅವರಿಗೆ ಹಲ್ಲೆ ನಡೆಸಿದ್ದಾರೆ ಎಂದು ಪುಂಜಾಲಕಟ್ಟೆ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.


ಪ್ರವೀಣ್ ಮತ್ತು ಸತೀಶ್ ನಾಯ್ಕ ಅವರು ಆತ್ಮೀಯ ಸ್ನೇಹಿತರಾಗಿದ್ದರು ಇತ್ತೀಚಿಗೆ ಯಾವುದೋ ಕಾರಣಕ್ಕೆ ಇವರ ನಡುವೆ ವೈ ಮನಸ್ಸು ಉಂಟಾಗಿದೆ ಎನ್ನಲಾಗಿದೆ.
ಸತೀಶ್ ಅವರು ಪ್ರವೀಣ್ ಅವರ ವೈಯಕ್ತಿಕ ವಿಚಾರಗಳನ್ನು ಹೊರಗಡೆ ಹೇಳಿಕೊಂಡು ಬರುತ್ತಿದ್ದರು ಎಂದು ಆರೋಪದಲ್ಲಿ ಕುಪಿತರಾದ ಪ್ರವೀಣ್ ಸತೀಶ್ ನಾಯ್ಕ ಅವರ ಮನೆಗೆ ಬಂದು ಹೊರಗಡೆ ಕರೆದು ಹಲ್ಲೆ ನಡೆಸಿದ್ದಾರೆ , ಜೊತೆಗೆ ಕೊಲೆ ಬೆದರಿಕೆಯನ್ನು ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಜಾತಿ ನಿಂದನೆ ಕೂಡ ಮಾಡಲಾಗಿದೆ ಎಂದು ಅವರು ಆರೋಪ ವ್ಯಕ್ತಪಡಿಸಿದ್ದಾರೆ.
ಆದರೆ ಈ ಬಗ್ಗೆ ಪುಂಜಾಲಕಟ್ಟೆ ಪೋಲೀಸ್ ಠಾಣೆಗೆ ದೂರು ನೀಡಿದಾಗ ಪ್ರಕರಣ ದಾಖಲಿಸಿಕೊಂಡ ಪೋಲೀಸರು ತನಿಖೆ ನಡೆಸದೆ ಕೈಕಟ್ಟಿಕುಳಿತುಕೊಂಡಿದ್ದಾರೆ , ಆರೋಪಿಯ ಬಂಧನ ವಾಗಲಿ ಅಥವಾ ತನಿಖೆ ನಡೆಸದೆ ಇರಲು ಕಾರಣವೇನು, ಈ ಬಗ್ಗೆ ಸೂಕ್ತ ತನಿಖೆಯಾಗಿ ನಿರಪರಾಧಿಗೆ ನ್ಯಾಯ ಒದಗಿಸುವ ಕೆಲಸ ಆಗಬೇಕಾಗಿದೆ ಸ್ಥಳೀಯ ಸಾಮಾಜಿಕ ಕಾರ್ಯಕರ್ತ ಶಂಕರ್ ಶೆಟ್ಟಿ ತಿಳಿಸಿದ್ದಾರೆ.
ಸತೀಶ್ ಅವರಿಗೆ ನ್ಯಾಯ ಸಿಗಬೇಕು ಸೂಕ್ತ ರೀತಿಯಲ್ಲಿ ತನಿಖೆಯಾಗಬೇಕು ಎಂದು ಒತ್ತಾಯಿಸಿ ಬಂಟ್ವಾಳ ಡಿವೈಎಸ್ ಪಿ ಗೆ ದೂರು ನೀಡುತ್ತೇವೆ ಎಂದು ಲ್ಯಾಂಪ್ಸ್ ಸೊಸೈಟಿ ಅಧ್ಯಕ್ಷ ಸುಂದರ ನಾಯ್ಕ ತಿಳಿಸಿದ್ದಾರೆ.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...