Thursday, January 29, 2026

ತರಬೇತಿ ಕಾರ್ಯಕ್ರಮ

ಬಂಟ್ವಾಳ: ದಕ್ಷಿಣ ಕನ್ನಡ  ಜಿಲ್ಲಾ ಪಂಚಾಯತ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಜಿ ವೀರಕಂಬ ಇಲ್ಲಿ ಶಾಲಾಭಿವೃದ್ಧಿ ಸಮಿತಿಯ ಸದಸ್ಯರಿಗೆ ತರಬೇತಿ ನೀಡುವ ಕಾರ್ಯಕ್ರಮವು ನಡೆಯಿತು. ಈ ಕಾರ್ಯಕ್ರಮವನ್ನು ಕಲ್ಲಡ್ಕ  ಕ್ಲಸ್ಟರಿನ  ಸಂಪನ್ಮೂಲ ವ್ಯಕ್ತಿ  ಮೆಟಿಲ್ಡಾ ಉದ್ಘಾಟಿಸಿ ತರಬೇತಿಯ ಅವಶ್ಯಕತೆಗಳ ಬಗ್ಗೆ ಸವಿಸ್ತಾರವಾಗಿ ವಿವರಿಸಿದರು. ಸಂಪನ್ಮೂಲ ವ್ಯಕ್ತಿ
ಕೆಲಿಂಜ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ತಿಮ್ಮಪ್ಪ ನಾಯ್ಕ ರವರು ಶಾಲಾಭಿವೃದ್ದಿ ಸಮಿತಿಯ ಸದಸ್ಯರ ಕಾರ್ಯ ಹಾಗೂ ಕರ್ತವ್ಯ ಮತ್ತು ಶಾಲಾಭಿವೃದ್ಧಿ ಸಮಿತಿಯ ರಚನೆಯ ಬಗ್ಗೆ ವಿಸ್ತಾರವಾಗಿ ಮನದಟ್ಟಾಗುವ ರೀತಿಯಲ್ಲಿ ವಿವರಿಸಿ.
ಇನ್ನೋರ್ವ ತರಬೇತುದಾರರಾದ 2020 ನೇ ಸಾಲಿನ ಜಿಲ್ಲಾಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪಡೆದ  ಸಂಗೀತ ಶರ್ಮ  ರವರು  ಶೈಕ್ಷಣಿಕವಾಗಿ ತಾಂತ್ರಿಕ ತೆಯ ಬಳಕೆ, ಹಾಗೂ ಎಸ್ ಡಿ ಎಂ ಸಿ ಯ ಕತ೯ವ್ಯದ ಬಗ್ಗೆ ಸವಿವರವಾಗಿ ಮಾಹಿತಿ ನೀಡಿದರು.
ಈ ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿಯ  ಅಧ್ಯಕ್ಷರಾದ  ಸಂಜೀವ ಮೂಲ್ಯ,  ಉಪಾಧ್ಯಕ್ಷರಾದ ವಿಜಯ ಶೇಖರ್  ಬಿ ,ವೀರಕಂಬ  ಗ್ರಾಮ ಪಂಚಾಯತ್ ಸದಸ್ಯರಾದ ಮೀನಾಕ್ಷಿ ಸುನಿಲ್,  ಶಾಲಾಭಿವೃದ್ದಿ ಸದಸ್ಯರು ಭಾಗವಹಿಸಿದರು. ಶಿಕ್ಷಕಿ ಶಕುಂತಲ ಪ್ರಾರ್ಥಿಸಿ ಶಾಲಾ ಮುಖ್ಯ ಶಿಕ್ಷಕರಾದ ನಾರಾಯಣ ಪೂಜಾರಿ ಸ್ವಾಗತಿಸಿ, ಶಿಕ್ಷಕಿ ಅನುಷಾ ವಂದಿಸಿದರು. ಶಿಕ್ಷಕಿ ಸಂಗೀತ ಶರ್ಮ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಶಾಲಾಭಿವೃದ್ಧಿ ಸಮಿತಿಯ ಸದಸ್ಯರಿಗೆ ವಿವಿಧ ಸ್ಪರ್ಧೆಗಳನ್ನು ಮಾಡಿ ಬಹುಮಾನ ವಿತರಿಸಲಾಯಿತು .

More from the blog

ವಿದ್ಯುತ್ ಸಮಸ್ಯೆಗೆ ಸ್ಪಂದಿಸಿದ ಗ್ರಾ.ಪಂ.ಸದಸ್ಯ ಹಾಶೀರ್ ಪೆರಿಮಾರ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ

ಬಂಟ್ವಾಳ: ವಿದ್ಯುತ್ ಸಮಸ್ಯೆಯಿಂದ ಬೇಸೆತ್ತ ಗ್ರಾಮಸ್ಥರ ಸಮಸ್ಯೆಗೆ ಸಕಾಲದಲ್ಲಿ ಸ್ಪಂದಿಸಿದ ಪುದು ಗ್ರಾಮಪಂಚಾಯತ್ ಸದಸ್ಯನಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ. ಪುದು ಗ್ರಾಮದ ಪೇರಿಮಾರ್ ವಾರ್ಡಿನ ರಾಷ್ಟ್ರೀಯ ಹೆದ್ದಾರಿ ಬದಿಯಿಂದ ದೇವಸ್ಯ, ಜಲಾಲಿಯ ನಗರ, ಮಾರಿಪಳ್ಳ...

Bantwal : ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ – ಪದಾಧಿಕಾರಿಗಳ ಪದಾಪ್ರಧಾನ, ರಜತ ಸಂಭ್ರಮ ಸಮಾರೋಪ

ಬಂಟ್ವಾಳ :ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ ರಿ, ಬಂಟ್ವಾಳ ವಲಯದ ನೂತನ ಪದಾಧಿಕಾರಿಗಳ ಪದಾಪ್ರಧಾನ ಸಮಾರಂಭ ಹಾಗು ರಜತ ಸಂಭ್ರಮದ ಸಮಾರೋಪ ಸಮಾರಂಭ ವು ಬಿಸಿ ರೋಡ್ ನ ಲಯನ್ಸ್ ಸೇವಾ...

B.C. Road : ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ

ಬಂಟ್ವಾಳ: ಬಂಟ್ವಾಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ ಬಿಸಿರೋಡಿನ ರಕ್ತೇಶ್ವರಿ...

ಕಟೀಲು 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.28ರ ಸೇವೆಯಾಟಗಳ ವಿವರ : ಆನಂದ ಎಂ. ಶೆಟ್ಟಿ, ಏಳಿಂಜೆ ಅಂಗಡಿಗುತ್ತು,...