Wednesday, January 28, 2026

ಎಲ್ಲಾ ಸಾಧನೆಗಳ ಮೂಲ ಯೋಗ

ಎಲ್ಲಾ ಸಾಧನೆಗಳ ಮೂಲ ಪ್ರೇರಣೆ ಯೋಗ. ಯೋಗವೆಂದರೆ ಕೇವಲ ದೈಹಿಕ ಕಸರತ್ತು ಮಾತ್ರ ಅಲ್ಲ ಬದಲಾಗಿ ಮನಸ್ಸಿನ, ಮೇಲಿನ ಹಿಡಿತ ಕೂಡಾ ಎಂದು ಖ್ಯಾತ ವಕೀಲರಾದ ಶ್ರೀ ಪ್ರಸಾದ ಕುಮಾರ್ ರೈ ಅಭಿಪ್ರಾಯಪಟ್ಟರು. ಅವರು ಸರಕಾರಿ ಪ್ರಥಮ ದರ್ಜೆ ಕಾಲೇಜು ಬಂಟ್ವಾಳ ಹಾಗೂ ಮುಡಿಪು ಸಹ ಆಶ್ರಯದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಅಂತರ್ ವಲಯ ಯೋಗ ಸ್ಫರ್ಧೆಯನು ಸರಕಾರಿ ಪ್ರಥಮ ದರ್ಜೆ ಕಾಲೇಜು ಬಂಟ್ವಾಳ ಇಲ್ಲಿ ಉದ್ಘಾಟಿಸಿ ಮಾತನಾಡುತ್ತಿದ್ದರು.

ಅವಿಶ್ಕಾರ್ ಯೋಗದ ಮುಖ್ಯಸ್ಥ ಕುಶಾಲಪ್ಪ ಗೌಡ ಮಾತನಾಡಿ ಯೋಗ ಎಂದು ವಿಶ್ವ ಮಾನ್ಯತೆ ಡಪೆದಿದ್ದು, ಎಲ್ಲಾ ವಯೋಮಾನದ, ವ್ಯಕ್ತಿಗಳ ಸರ್ವತೋಮುಖ ಬೆಳವಣಿಗೆಗೆ ಅನಿವಾರ್ಯವಾಗಿದೆ ಮಾತ್ರವಲ್ಲ ವಿಧ್ಯಾರ್ಥಿಗಳಿಗೆ ಯೋಗ ಒಂದು ಉದ್ಯೋಗ ಆಯ್ಕೆಯೂ ಆಗಿದೆ ಎಂದು ಅಭಿಪ್ರಾಯಪಟ್ಟರು.
ಪ್ರಾಂಸುಪಾಲರಾದ ಡಾ ಸತೀಶ್ ಗಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕರುಣಾಕರ್ ಹಾಗೂ ಸಂದೀಫ್ ವಿಶೇಷ ತಜ್ಙರಾಗಿ ಭಾಗವಹಿಸಿದ್ದರು. ದೈಹಿಕ ಶಿಕ್ಷಣ ನಿರ್ದೇಶಕಿಯರಾದ ಡಾ ಅಪರ್ಣ ಆಳ್ವ ಹಾಗೂ ಶುಭ ಕೆ. ಎಚ್ ಕಾರ್ಯಕ್ರಮ ಆಯೋಜಿಸಿದ್ದರು. ಮಮತಾ ಕಾರ್ಯಕ್ರಮ ನಿರೂಪಿಸದರು.

More from the blog

Bantwal : ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ – ಪದಾಧಿಕಾರಿಗಳ ಪದಾಪ್ರಧಾನ, ರಜತ ಸಂಭ್ರಮ ಸಮಾರೋಪ

ಬಂಟ್ವಾಳ :ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ ರಿ, ಬಂಟ್ವಾಳ ವಲಯದ ನೂತನ ಪದಾಧಿಕಾರಿಗಳ ಪದಾಪ್ರಧಾನ ಸಮಾರಂಭ ಹಾಗು ರಜತ ಸಂಭ್ರಮದ ಸಮಾರೋಪ ಸಮಾರಂಭ ವು ಬಿಸಿ ರೋಡ್ ನ ಲಯನ್ಸ್ ಸೇವಾ...

B.C. Road : ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ

ಬಂಟ್ವಾಳ: ಬಂಟ್ವಾಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ ಬಿಸಿರೋಡಿನ ರಕ್ತೇಶ್ವರಿ...

ಕಟೀಲು 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.28ರ ಸೇವೆಯಾಟಗಳ ವಿವರ : ಆನಂದ ಎಂ. ಶೆಟ್ಟಿ, ಏಳಿಂಜೆ ಅಂಗಡಿಗುತ್ತು,...

ಸಜೀಪ : ಜ.28, 29,30ರಂದು ಬೃಹತ್ 14ನೇ ವಾರ್ಷಿಕ ಜಲಾಲಿಯ್ಯಾ ರಾತೀಬ್

ಬಂಟ್ವಾಳ : ಜಲಾಲಿಯ್ಯಾ ಜುಮಾ ಮಸ್ಜಿದ್, ಚಟ್ಟೆಕ್ಕಲ್, ಸಜಿಪ ಇದರ ಆಶ್ರಯದಲ್ಲಿ ಬೃಹತ್ 14ನೇ ವಾರ್ಷಿಕ ಜಲಾಲಿಯ್ಯಾ ರಾತೀಬ್ ಬುರ್ದಾ ಮಜ್ಲಿಸ್ ಜಿಸ್ತಿಯಾ ಖುತ್‌ಬಿಯತ್ ಜ.28, 29,30 ರಂದು ಜಲಾಲಿಯ್ಯ ಜುಮಾ ಮಸೀದಿ...