Wednesday, February 12, 2025

ಮಾ. 26ರಿಂದ 29ರವರೆಗೆ ಕಾನೂನು ಸಾಕ್ಷರತಾ ರಥ ಮತ್ತು ಸಂಚಾರಿ ನ್ಯಾಯಾಲಯದ ಉದ್ಘಾಟಣೆ

ಬಂಟ್ವಾಳ: ತಾಲೂಕು ಕಾನೂನು ಸೇವೆಗಳ ಸಮಿತಿ ಬಂಟ್ವಾಳ, ವಕೀಲರ ಸಂಘ ಬಂಟ್ವಾಳ, ಸಾರ್ವಜನಿಕ ಶಿಕ್ಷಣ ಇಲಾಖೆ, ಬಂಟ್ವಾಳ ತಾಲೂಕು ಪಂಚಾಯತ್, ಕಂದಾಯ ಇಲಾಖೆ ಹಾಗೂ ಇತರ ಸರಕಾರಿ ಇಲಾಖೆಗಳ ಸಹಯೋಗದೊಂದಿಗೆ ಮಾ. 26ರಿಂದ 29ರವರೆಗೆ ಕಾನೂನು ಸಾಕ್ಷರತಾ ರಥ ಮತ್ತು ಸಂಚಾರಿ ನ್ಯಾಯಾಲಯದ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.
ಮಾ. 26ರಂದು ಬೆಳಿಗ್ಗೆ 10.30ಕ್ಕೆ ಬಂಟ್ವಾಳ ನ್ಯಾಯಾಲಯದ ಆವರಣದಲ್ಲಿ ಕಾನೂನು ಸಾಕ್ಷರತಾ ರಥಕ್ಕೆ ಹಿರಿಯ ಸಿವಿಲ್ ನ್ಯಾಯಾಧೀಶ ಮುಹಮ್ಮದ್ ಇಮ್ತಿಯಾಝ್ ಅಹ್ಮದ್ ಚಾಲನೆ ನೀಡುವರು. ಬಂಟ್ವಾಳ ವಕೀಲರ ಸಂಘದ ಅಧ್ಯಕ್ಷ ದೀಪಕ್ ಕುಮಾರ್ ಅಧ್ಯಕ್ಷತೆ ವಹಿಸುವರು. ಮಧ್ಯಾಹ್ನ 12ಕ್ಕೆ ಕೊಡಂಗೆ ಸರಕಾರಿ ಪ್ರೌಢಶಾಲೆ, ಸಂಜೆ 3ಕ್ಕೆ ಪುದು ಗ್ರಾಪಂ ವಠಾರದಲ್ಲಿ ಸಂಚರಿಸಲಿದೆ.
ಮಾ. 27ರಂದು ಬೆಳಿಗ್ಗೆ 10ಕ್ಕೆ ಗೊಳ್ತಮಜಲು ಗ್ರಾಪಂ, ಮಧ್ಯಾಹ್ನ 12ಕ್ಕೆ ನಂದಾವರ ಸರಕಾರಿ ಪ್ರೌಢಶಾಲೆ, ಸಂಜೆ 3ಕ್ಕೆ ಮಾಣಿ ಗ್ರಾಪಂ., ಮಾ. 28ರಂದು ಬೆಳಿಗ್ಗೆ 10ಕ್ಕೆ ಅಮ್ಟಾಡಿ ಗ್ರಾಪಂ, ಮಧ್ಯಾಹ್ನ 12ಕ್ಕೆ ಕೊಯಿಲಾ ಸರಕಾರಿ ಪ್ರೌಢಶಾಲೆ, ಸಂಜೆ 3ಕ್ಕೆ ಬಂಟ್ವಾಳ ತಾಲೂಕು ಪಂಚಾಯತ್ ಸಭಾಂಗಣ. ಮಾ. 29ರಂದು ಬೆಳಿಗ್ಗೆ 10ಕ್ಕೆ ಬಂಟ್ವಾಳ ಸರಕಾರಿ ಪ್ರಥಮ ದರ್ಜೆ ಕಾಲೇಜು, ಮಧ್ಯಾಹ್ನ 12ಕ್ಕೆ ತುಂಬೆ ಬಿ.ಎ.ಕೈಗಾರಿಕಾ ತರಬೇತಿ ಸಂಸ್ಥೆ, ಸಂಜೆ 4ಕ್ಕೆ ಬಿ.ಸಿ.ರೋಡ್ ನ್ಯಾಯಾಲಯದ ಆವರಣದಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ ಎಂದು ಬಂಟ್ವಾಳ ತಾಲೂಕು ಕಾನೂನು ಸೇವೆಗಳ ಸಮಿತಿಯ ಪ್ರಕಟನೆ ತಿಳಿಸಿದೆ.

More from the blog

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...

ನೇಣು ಬಿಗಿದು ಯುವಕ ಆತ್ಮಹತ್ಯೆ

ಬಂಟ್ವಾಳ: ಖಿನ್ನತೆಯಿಂದ ಅವಿವಾಹಿತ ವ್ಯಕ್ತಿಯೊರ್ವನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಮ್ಟಾಡಿ ನಿವಾಸಿ ಮೆಕ್ಸಿನ್ ತಾವ್ರೋ ಅವರ ಮಗ ಜೀವನ್  ತಾವ್ರೋ ( 37) ಆತ್ಮಹತ್ಯೆ ಮಾಡಿಕೊಂಡ ಯುವಕ. ‌‌‌ಜೀವನ್ ಅವರು ಅಗಾಗ...