Thursday, January 29, 2026

ಟ್ವೆಕಾಂಡೋ ಪಂದ್ಯಾವಳಿಯಲ್ಲಿ  ರಾಜ್ಯ ಮಟ್ಟಕ್ಕೆ ಆಯ್ಕೆ

ಬಂಟ್ವಾಳ: ತಾಲೂಕಿನ ಪಾಣೆಮಂಗಳೂರು ಫಿಟ್ನೆಸ್ ಮಲ್ಟಿ ಜಿಂ ಆಂಡ್ ಮಾರ್ಶಲ್ ಆಟ್ರ್ಸ್ ಸೆಂಟರ್ ಹಾಗೂ ಕೃಷ್ಣಾಪುರ ಎಕ್ಸ್ರೀಂ ಫಿಟ್ನೆಸ್ ಆಂಡ್ ಮಾರ್ಶಲ್ ಆಟ್ರ್ಸ್ ಫೈಟ್ ಕ್ಲಬ್ ಇಲ್ಲಿನ ವಿದ್ಯಾರ್ಥಿಗಳು ತಲಪಾಡಿ-ಕೆ ಸಿ ರೋಡು ಶಾರದಾ ವಿದ್ಯಾನಿಕೇತನ ಪದವಿಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಟ್ವೆಕಾಂಡೋ ಪಂದ್ಯಾವಳಿಯಲ್ಲಿ  ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.


45 ಕೆಜಿ ವಿಭಾಗದಲ್ಲಿ ವಿಟ್ಲ ಪದವಿಪೂರ್ವ ಕಾಲೇಜು ವಿದ್ಯಾರ್ಥಿ ಮುಹಮ್ಮದ್ ಫಾಯಿಝ್ ಕಡಂಬು, 55 ಕೆಜಿ ವಿಭಾಗದಲ್ಲಿ ಮೊಡಂಕಾಪು ಕಾರ್ಮೆಲ್ ಪಿಯು ಕಾಲೇಜು ವಿದ್ಯಾರ್ಥಿ ವಿಲಾಯತ್ ರಾಫಿ ಗೂಡಿನಬಳಿ, 59 ಕೆಜಿ ವಿಭಾಗದಲ್ಲಿ ಕೆನರಾ ಪಿಯು ಕಾಲೇಜು ವಿದ್ಯಾರ್ಥಿ, ಕೀರ್ತಿ ಪ್ರಕಾಶ್ ಸುವರ್ಣ ಮೊಗರ್ನಾಡು-ನರಿಕೊಂಬು, 63 ಕೆಜಿ ವಿಭಾಗದಲ್ಲಿ ಮಿಲಾಗ್ರೀಸ್ ಪಿಯು ಕಾಲೇಜು ವಿದ್ಯಾರ್ಥಿ ಮುಹಮ್ಮದ್ ಫಾಯಿಝ್ ಫಾರೂಕ್ ಕೃಷ್ಣಾಪುರ, 68 ಕೆಜಿ ವಿಭಾಗದಲ್ಲಿ ಮಿಲಾಗ್ರೀಸ್ ಪಿಯು ಕಾಲೇಜು ವಿದ್ಯಾರ್ಥಿ ಮುಹಮ್ಮದ್ ಶಹಬಾನ್ ಕಾನಾ-ಕೃಷ್ಣಾಪುರ, 78 ಕೆಜಿ ಮೇಲ್ಪಟ್ಟ ವಿಭಾಗದಲ್ಲಿ ಕೈಕಂಬ ಸೈಂಟ್ ರೇಮಂಡ್ಸ್ ಕಾಲೇಜು ವಿದ್ಯಾರ್ಥಿ ಹಾಗೂ ಬಾಲಕಿಯರ ವಿಭಾಗದ 44 ಕೆಜಿ ವಿಭಾಗದಲ್ಲಿ ತುಂಬೆ ಬಿ ಎ ಪಿಯು ಕಾಲೇಜು ವಿದ್ಯಾರ್ಥಿನಿ ಫಾತಿಮಾ ಮುಸ್ಕಾನ್ ನೆಹರುನಗರ ಅವರು ತೇರ್ಗಡೆಗೊಂಡಿದ್ದು, ಚಿಕ್ಕಮಗಳೂರಿನ ಪದವಿಪೂರ್ವ ಕಾಲೇಜು ಮೈದಾನದಲ್ಲಿ ನಡೆಯುವ ರಾಜ್ಯ ಮಟ್ಟದ ಟ್ವೆಕಾಂಡೋ ಪಂದ್ಯಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ಇವರಿಗೆ ದಕ್ಷಿಣ ಕನ್ನಡ ಜಿಲ್ಲಾ ಟ್ವೆಕಾಂಡೋ ಮುಖ್ಯ ತರಬೆತುದಾರ ಇಸಾಕ್ ಇಸ್ಮಾಯಿಲ್ ನಂದಾವರ ಹಾಗೂ ಸಹ ತರಬೇತುದಾರರಾದ ಬಿ ಮುಹಮ್ಮದ್ ಶಾರೂಕ್ ಗೂಡಿನಬಳಿ, ಯೂಸುಫ್ ಹಫೀಝ್ ಬೋಗೋಡಿ, ಸುಹೈಲ್ ಕಡಂಬು-ವಿಟ್ಲ ಅವರುಗಳು ತರಬೇತಿ ನೀಡಿದ್ದಾರೆ.

More from the blog

ವಿದ್ಯುತ್ ಸಮಸ್ಯೆಗೆ ಸ್ಪಂದಿಸಿದ ಗ್ರಾ.ಪಂ.ಸದಸ್ಯ ಹಾಶೀರ್ ಪೆರಿಮಾರ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ

ಬಂಟ್ವಾಳ: ವಿದ್ಯುತ್ ಸಮಸ್ಯೆಯಿಂದ ಬೇಸೆತ್ತ ಗ್ರಾಮಸ್ಥರ ಸಮಸ್ಯೆಗೆ ಸಕಾಲದಲ್ಲಿ ಸ್ಪಂದಿಸಿದ ಪುದು ಗ್ರಾಮಪಂಚಾಯತ್ ಸದಸ್ಯನಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ. ಪುದು ಗ್ರಾಮದ ಪೇರಿಮಾರ್ ವಾರ್ಡಿನ ರಾಷ್ಟ್ರೀಯ ಹೆದ್ದಾರಿ ಬದಿಯಿಂದ ದೇವಸ್ಯ, ಜಲಾಲಿಯ ನಗರ, ಮಾರಿಪಳ್ಳ...

Bantwal : ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ – ಪದಾಧಿಕಾರಿಗಳ ಪದಾಪ್ರಧಾನ, ರಜತ ಸಂಭ್ರಮ ಸಮಾರೋಪ

ಬಂಟ್ವಾಳ :ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ ರಿ, ಬಂಟ್ವಾಳ ವಲಯದ ನೂತನ ಪದಾಧಿಕಾರಿಗಳ ಪದಾಪ್ರಧಾನ ಸಮಾರಂಭ ಹಾಗು ರಜತ ಸಂಭ್ರಮದ ಸಮಾರೋಪ ಸಮಾರಂಭ ವು ಬಿಸಿ ರೋಡ್ ನ ಲಯನ್ಸ್ ಸೇವಾ...

B.C. Road : ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ

ಬಂಟ್ವಾಳ: ಬಂಟ್ವಾಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನರೇಗಾ ಬಚಾವೋ ಸಂಗ್ರಾಮ ಕಾರ್ಯಕ್ರಮ ಬಿಸಿರೋಡಿನ ರಕ್ತೇಶ್ವರಿ...

ಕಟೀಲು 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.28ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.28ರ ಸೇವೆಯಾಟಗಳ ವಿವರ : ಆನಂದ ಎಂ. ಶೆಟ್ಟಿ, ಏಳಿಂಜೆ ಅಂಗಡಿಗುತ್ತು,...