Friday, June 27, 2025

ಟ್ವೆಕಾಂಡೋ ಪಂದ್ಯಾವಳಿಯಲ್ಲಿ  ರಾಜ್ಯ ಮಟ್ಟಕ್ಕೆ ಆಯ್ಕೆ

ಬಂಟ್ವಾಳ: ತಾಲೂಕಿನ ಪಾಣೆಮಂಗಳೂರು ಫಿಟ್ನೆಸ್ ಮಲ್ಟಿ ಜಿಂ ಆಂಡ್ ಮಾರ್ಶಲ್ ಆಟ್ರ್ಸ್ ಸೆಂಟರ್ ಹಾಗೂ ಕೃಷ್ಣಾಪುರ ಎಕ್ಸ್ರೀಂ ಫಿಟ್ನೆಸ್ ಆಂಡ್ ಮಾರ್ಶಲ್ ಆಟ್ರ್ಸ್ ಫೈಟ್ ಕ್ಲಬ್ ಇಲ್ಲಿನ ವಿದ್ಯಾರ್ಥಿಗಳು ತಲಪಾಡಿ-ಕೆ ಸಿ ರೋಡು ಶಾರದಾ ವಿದ್ಯಾನಿಕೇತನ ಪದವಿಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಟ್ವೆಕಾಂಡೋ ಪಂದ್ಯಾವಳಿಯಲ್ಲಿ  ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.


45 ಕೆಜಿ ವಿಭಾಗದಲ್ಲಿ ವಿಟ್ಲ ಪದವಿಪೂರ್ವ ಕಾಲೇಜು ವಿದ್ಯಾರ್ಥಿ ಮುಹಮ್ಮದ್ ಫಾಯಿಝ್ ಕಡಂಬು, 55 ಕೆಜಿ ವಿಭಾಗದಲ್ಲಿ ಮೊಡಂಕಾಪು ಕಾರ್ಮೆಲ್ ಪಿಯು ಕಾಲೇಜು ವಿದ್ಯಾರ್ಥಿ ವಿಲಾಯತ್ ರಾಫಿ ಗೂಡಿನಬಳಿ, 59 ಕೆಜಿ ವಿಭಾಗದಲ್ಲಿ ಕೆನರಾ ಪಿಯು ಕಾಲೇಜು ವಿದ್ಯಾರ್ಥಿ, ಕೀರ್ತಿ ಪ್ರಕಾಶ್ ಸುವರ್ಣ ಮೊಗರ್ನಾಡು-ನರಿಕೊಂಬು, 63 ಕೆಜಿ ವಿಭಾಗದಲ್ಲಿ ಮಿಲಾಗ್ರೀಸ್ ಪಿಯು ಕಾಲೇಜು ವಿದ್ಯಾರ್ಥಿ ಮುಹಮ್ಮದ್ ಫಾಯಿಝ್ ಫಾರೂಕ್ ಕೃಷ್ಣಾಪುರ, 68 ಕೆಜಿ ವಿಭಾಗದಲ್ಲಿ ಮಿಲಾಗ್ರೀಸ್ ಪಿಯು ಕಾಲೇಜು ವಿದ್ಯಾರ್ಥಿ ಮುಹಮ್ಮದ್ ಶಹಬಾನ್ ಕಾನಾ-ಕೃಷ್ಣಾಪುರ, 78 ಕೆಜಿ ಮೇಲ್ಪಟ್ಟ ವಿಭಾಗದಲ್ಲಿ ಕೈಕಂಬ ಸೈಂಟ್ ರೇಮಂಡ್ಸ್ ಕಾಲೇಜು ವಿದ್ಯಾರ್ಥಿ ಹಾಗೂ ಬಾಲಕಿಯರ ವಿಭಾಗದ 44 ಕೆಜಿ ವಿಭಾಗದಲ್ಲಿ ತುಂಬೆ ಬಿ ಎ ಪಿಯು ಕಾಲೇಜು ವಿದ್ಯಾರ್ಥಿನಿ ಫಾತಿಮಾ ಮುಸ್ಕಾನ್ ನೆಹರುನಗರ ಅವರು ತೇರ್ಗಡೆಗೊಂಡಿದ್ದು, ಚಿಕ್ಕಮಗಳೂರಿನ ಪದವಿಪೂರ್ವ ಕಾಲೇಜು ಮೈದಾನದಲ್ಲಿ ನಡೆಯುವ ರಾಜ್ಯ ಮಟ್ಟದ ಟ್ವೆಕಾಂಡೋ ಪಂದ್ಯಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ಇವರಿಗೆ ದಕ್ಷಿಣ ಕನ್ನಡ ಜಿಲ್ಲಾ ಟ್ವೆಕಾಂಡೋ ಮುಖ್ಯ ತರಬೆತುದಾರ ಇಸಾಕ್ ಇಸ್ಮಾಯಿಲ್ ನಂದಾವರ ಹಾಗೂ ಸಹ ತರಬೇತುದಾರರಾದ ಬಿ ಮುಹಮ್ಮದ್ ಶಾರೂಕ್ ಗೂಡಿನಬಳಿ, ಯೂಸುಫ್ ಹಫೀಝ್ ಬೋಗೋಡಿ, ಸುಹೈಲ್ ಕಡಂಬು-ವಿಟ್ಲ ಅವರುಗಳು ತರಬೇತಿ ನೀಡಿದ್ದಾರೆ.

More from the blog

ಬಡ ಮಗುವಿನ ಚಿಕಿತ್ಸೆ ನೆರವಿಗೆ ಮುಂದಾದ ಸಿದ್ದಕಟ್ಟೆ ಪ್ರಾ. ಕೃ. ಪತ್ತಿನ ಸಹಕಾರ ಸಂಘ…

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಇನ್ನೂ ಹೆಚ್ಚಿನ...

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...