Thursday, January 29, 2026

ನೇತ್ರಾವತಿ ನದಿಯಲ್ಲಿ ಅಪರಿಚಿತ ಶವ

ಬಂಟ್ವಾಳ: ಬಂಟ್ವಾಳ ಪುರಸಭಾ ವ್ಯಾಪ್ತಿಯ ಜೈನರಪೇಟೆ ಸುಣ್ಣದಗೂಡು ನೇತ್ರಾವತಿ ಹಳೆಯ ಸೇತುವೆಯ ಪಕ್ಕದಲ್ಲಿ ನದಿಯಲ್ಲಿ ಅಪರಿಚಿತ ಶವ ಕಂಡು ಬಂದಿದೆ.
ನೇತ್ರಾವತಿ ನದಿಯಲ್ಲಿ ತೇಲಾಡುವ ಸ್ಥಿತಿಯಲ್ಲಿ ಅಪರಿಚಿತ ಶವ ಬೆಳಿಗ್ಗೆ ಕಂಡು ಬಂದಿದ್ದು , ಸ್ಥಳೀಯ ನಿವಾಸಿ ಅಬೂಸಾಲಿ ಪಿ.ಜೆ . ನಗರ ಠಾಣಾ ಪೋಲೀಸರಿಗೆ ಮಾಹಿತಿ ನೀಡಿದ್ದಾರೆ.


ಈ ಮಾಹಿತಿ ಮೇಲೆ ಬಂಟ್ವಾಳ ನಗರ ಪೋಲೀಸ್ ಎಸ್.ಐ.ಚಂದ್ರಶೇಖರ್ ಹಾಗೂ ಅಪರಾಧ ವಿಭಾಗದ ಎಸ್ .ಐ.‌ಸುಧಾಕರ ತೋನ್ಸೆ ಸ್ಥಳಕ್ಕೆ ಬೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಗೂಡಿನ ಬಳಿಯ ಈಜುಗಾರರು ಶವವನ್ನು ಮೇಲಕ್ಕೆತ್ತಿದ್ದಾರೆ. ಶವದ ಅಂಗಿಯಲ್ಲಿ ಪೊಳಲಿ ನಿವಾಸಿ ಎಂಬುದಕ್ಕೆ ಚೀಟಿಯೊಂದು ದೊರೆತಿದ್ದು ಪೋಲೀಸರು ವಿಳಾಸ ದ ತನಿಖೆ ನಡೆಸುತ್ತಿದ್ದಾರೆ.
ಈತ ಆತ್ಮಹತ್ಯೆ ಮಾಡಿಕೊಂಡಿದ್ದಾನಾ, ಕಾಲು ಜಾರಿ ನದಿಗೆ ಬಿದ್ದು ಸತ್ತು ಹೋಗಿದ್ದಾನಾ ಅಥವಾ ಇನ್ನಾವುದೋ ಕಾರಣದಿಂದ ಸತ್ತಿದ್ದಾನಾ ಎಂಬುದು ಇನ್ನಷ್ಟೇ ತಿಳಿಯಬೇಕಾಗಿದೆ.

More from the blog

ಸಂಗಬೆಟ್ಟು ಗ್ರಾ.ಪಂ ವಿಶೇಷ ಗ್ರಾಮ ಸಭೆ : ವಿಬಿ-ಜಿ ರಾಮ್ ಜಿ ಯೋಜನೆ ಅನುಷ್ಠಾನಕ್ಕೆ ತೀರ್ಮಾನ 

ಬಂಟ್ವಾಳ : ಕೇಂದ್ರ ಸರಕಾರವು ಹೊಸದಾಗಿ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ("ವಿಕಸಿತ್ ಭಾರತ್ "ಗ್ಯಾರಂಟಿ ಯೋಜಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ್) ಯೋಜನೆಯು ಒಂದು ಅತ್ಯುತ್ತಮ ಯೋಜನೆಯಾಗಿದ್ದು, ಇದರಲ್ಲಿನ ಕೆಲವೊಂದು...

ಸೂರಿಕುಮೇರು : ರಾಷ್ಟ್ರೀಯ ಹೆದ್ದಾರಿಯಲ್ಲಿ ಡಿವೈಡರ್ ಹತ್ತಿ ನಿಂತ ಸರಕಾರಿ ಬಸ್

ಮಾಣಿ : ಇಲ್ಲಿನ ಸೂರಿಕುಮೇರು ರಾಜ್ ಕಮಲ್ ಹಾಲ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಸರಕಾರಿ ಬಸ್ ಡಿವೈಡರ್ ಹತ್ತಿ ನಿಂತ ಘಟನೆ ಸೋಮವಾರ ಬೆಳಗ್ಗಿನ ಜಾವ ನಡೆದಿದೆ. ಘಟನೆಯಿಂದ ಬಸ್‌ಗೆ...

ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ – ಅಶೋಕ ಕುಮಾರ್ ರಾಜ್ಯ ಮಟ್ಟಕ್ಕೆ ಆಯ್ಕೆ..

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಆಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಕರ್ನಾಟಕ ಸರಕಾರಿ ನೌಕರ ಸಂಘ, ದಕ್ಷಿಣ...

ಲಕ್ಷ್ಮೀ ಪ್ರಸಾದ್ ಬೊಟ್ಯಾಡಿ ವಿರುದ್ಧ FIR

  ಇತ್ತೀಚೆಗೆ ಪುತ್ತೂರು ವಿಧಾನಸಭಾ ಕ್ಷೇತ್ರದ ಭವಿಷ್ಯತ ಅಭ್ಯರ್ಥಿಯಾಗಿ ಹೆಸರು ಮುನ್ನೆಲೆಗೆ ಬಂದಿದ್ದ ಲಕ್ಷ್ಮಿ ಪ್ರಸಾದ್ ಬೊಟ್ಯಾಡಿ ವಿರುದ್ಧ FIR ದಾಖಲಾಗಿರುವುದು ಪುತ್ತೂರಿನ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಜ.21 ರಂದು ಹಿಂದೂ ಮುಖಂಡ...