Thursday, January 29, 2026

ಮಾ.7ರಂದು (ನಾಳೆ) ಟೈಲರ್ಸ್ ಎಸೋಸಿಯೇಶನ್ ಸಂಸ್ಥಾಪನಾ ದಿನಾಚರಣೆ ಹೊಲಿಗೆ ಯಂತ್ರ ‌ವಿತರಣೆ

ಬಂಟ್ವಾಳ: ಕರ್ನಾಟಕ ಟೈಲರ್ಸ್ ಎಸೋಸಿಯೇಶನ್ (ರಿ) ಮಂಗಳೂರು.ಬಂಟ್ವಾಳ ಕ್ಷೇತ್ರ ಸಮಿತಿ ಇದರ ವತಿಯಿಂದ ಸಂಸ್ಥಾಪನ ದಿನಾಚರಣೆ ಅಂಗವಾಗಿ ಸಂಸ್ಥಾಪನಾ ದಿನಾಚರಣೆ ಹಾಗೂ ಅಶಕ್ತರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ ಕಾರ್ಯಕ್ರಮ ಕೆ.ಎಸ್.ಟಿ.ಎ
ಬಂಟ್ವಾಳ ಕ್ಷೇತ್ರ ಸಮಿತಿ ಇದರ ಅಧ್ಯಕ್ಷರಾದ ಶ್ರೀ ಈಶ್ವರ ಕುಲಾಲ್ ಇವರ ಅಧ್ಯಕ್ಷತೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಇವರು ಮಾ.7 ರಂದು ಭಾನುವಾರ ಬೆಳಗ್ಗೆ ಸ್ಪರ್ಶಾ ಕಲಾ ಮಂದಿರ ಬಿ.ಸಿ. ರೋಡು ಇಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಲಿರುವರು.

ಮುಖ್ಯ ಅತಿಥಿಗಳಾಗಿ ಸುರೇಶ್ ಸಾಲ್ಯಾನ್ ರಾಜ್ಯ ಉಪಾಧ್ಯಕ್ಷರು ಮತ್ತು ಸಂಚಾಲಕರು ಕಟ್ಟಡ ಸಮಿತಿ ಕೆ. ಎಸ್.ಟಿ .ಎ,
ಮುಹಮ್ಮದ್ ಶರೀಫ್ ಅಧ್ಯಕ್ಷರು ಪುರಸಭೆ ಬಂಟ್ವಾಳ, ಡಾ. ಗೋಪಾಲಕೃಷ್ಣ ಆಚಾರ್ಯ ಮಾಲಕರು, ಬಜಾರ್ ಸಮೂಹ ಸಂಸ್ಥೆಗಳು ಹಾಗೂ ಫ್ರೈಡ್ ಆಫ್ ಇಂಡಿಯಾ ಪ್ರಶಸ್ತಿ ಪುರಸ್ಕೃತರು, ಸುಂದರ ಪೂಜಾರಿ ಬೊಳಂಗಡಿ ಅಧ್ಯಕ್ಷರು, ಯುವವಾಹಿನಿ ಬಂಟ್ವಾಳ ತಾಲೂಕು ಘಟಕ, ಸುಭಾಶ್ಚಂದ್ರ ಜೈನ್ ಅಧ್ಯಕ್ಷರು, ವರ್ತಕರ ವಿ.ಸ.ಸಂಘ (ನಿ), ಜನಾರ್ಧನ ಟೈಲರ್ ಬೊಂಡಾಲ ನಿರ್ದೇಶಕರು, ಸುಮಾಜ ಸೇವಾ ಸಹಕಾರಿ ಬ್ಯಾಂಕ್, ಪುರುಷೋತ್ತಮ ಎಸ್.ಮಾಣಿಮಜಲು ಗ್ರಾಮ ಪಂಚಾಯತ್ ಸದಸ್ಯರು ನರಿಕೊಂಬು, ಮತ್ತು ನಿಕಟ ಪೂರ್ವ ಪ್ರಧಾನ ಕಾರ್ಯದರ್ಶಿ ಕೆ.ಎಸ್.ಟಿ.ಎ ಬಂಟ್ವಾಳ, ಈ ಕಾರ್ಯಕ್ರಮದಲ್ಲಿ ಎಲ್ಲರು ಪಾಲ್ಗೊಂಡು ಯಶಸ್ವಿ ಗೊಳಿಸುವಂತೆ ಎಂ.ನಾಗೇಶ್ ಪ್ರಧಾನ ಕಾರ್ಯದರ್ಶಿ, ಯಾದೇಶ್ ತುಂಬೆ ಕೋಶಾಧಿಕಾರಿ, ಈಶ್ವರ ಕುಲಾಲ್ ಅಧ್ಯಕ್ಷರು ಕ್ಷೇತ್ರ ಸಮಿತಿ ಮತ್ತು ವಲಯ ಸಮಿತಿ, ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು ಕೆ.ಎಸ್.ಟಿ.ಎ ಬಂಟ್ವಾಳ ಕ್ಷೇತ್ರ ಸಮಿತಿಯ ಪ್ರಕಟಣೆ ತಿಳಿಸಿದೆ.

More from the blog

ದೈವೀಕೃಪೆಯಿಂದ ಮಾತ್ರ ಜೀವನರಥ ಎಳೆಯಬಹುದು : ಒಡಿಯೂರುಶ್ರೀ

ವಿಟ್ಲ: ಆತ್ಮರೂಪಿ ಭಗವಂತ ದೇಹದೊಳಗಿರುವಾಗಲೇ ಬದುಕಿನ ಸಾರ್ಥಕತೆ ಪಡೆಯಬೇಕು. ಧರ್ಮದ ಬಗ್ಗೆ ಮನೆಯಿಂದಲೇ ಜಾಗೃತಿ ಮೂಡಿಸುವ ಕಾರ್ಯವಾಗಬೇಕು. ಆಧ್ಯಾತ್ಮಿಕ ಬೆಳಕಿನಿಂದ ಮಾತ್ರ ರಾಷ್ಟ್ರ ಬೆಳಗಲು ಸಾಧ್ಯ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ...

ಕೊಳ್ನಾಡು: ಕಾಲುಜಾರಿ ಬಾವಿಗೆ ಬಿದ್ದು ಕೃಷಿಕ ಸಾವು

ವಿಟ್ಲ: ದಾರಿ ಬದಿಯ ಆವರಣವಿಲ್ಲದ ಬಾವಿಗೆ ಆಕಸ್ಮಿಕವಾಗಿ ಬಿದ್ದು ಕೃಷಿಕ ಕೊಳ್ನಾಡು ಗ್ರಾಮದ ಸಾಲೆತ್ತೂರು ಕೋಡಿ ನಿವಾಸಿ ಕೃಷ್ಣಪ್ಪ ಪೂಜಾರಿ(70) ಮೃತ ಪಟ್ಟಿದ್ದಾರೆ. ಮಂಗಳವಾರ ಸಂಜೆ ಎಂದಿನಂತೆ ಸಾಲೆತ್ತೂರು ಪೇಟೆಗೆ ಹೋಗಿ ಹಿಂತಿರುಗಿ ಬರುವಾಗ...

ವಿದ್ಯುತ್ ಸಮಸ್ಯೆಗೆ ಸ್ಪಂದಿಸಿದ ಗ್ರಾ.ಪಂ.ಸದಸ್ಯ ಹಾಶೀರ್ ಪೆರಿಮಾರ್ ಅವರಿಗೆ ಗ್ರಾಮಸ್ಥರಿಂದ ಅಭಿನಂದನೆ

ಬಂಟ್ವಾಳ: ವಿದ್ಯುತ್ ಸಮಸ್ಯೆಯಿಂದ ಬೇಸೆತ್ತ ಗ್ರಾಮಸ್ಥರ ಸಮಸ್ಯೆಗೆ ಸಕಾಲದಲ್ಲಿ ಸ್ಪಂದಿಸಿದ ಪುದು ಗ್ರಾಮಪಂಚಾಯತ್ ಸದಸ್ಯನಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ. ಪುದು ಗ್ರಾಮದ ಪೇರಿಮಾರ್ ವಾರ್ಡಿನ ರಾಷ್ಟ್ರೀಯ ಹೆದ್ದಾರಿ ಬದಿಯಿಂದ ದೇವಸ್ಯ, ಜಲಾಲಿಯ ನಗರ, ಮಾರಿಪಳ್ಳ...

Bantwal : ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ – ಪದಾಧಿಕಾರಿಗಳ ಪದಾಪ್ರಧಾನ, ರಜತ ಸಂಭ್ರಮ ಸಮಾರೋಪ

ಬಂಟ್ವಾಳ :ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಸಿಯೇಷನ್ ರಿ, ಬಂಟ್ವಾಳ ವಲಯದ ನೂತನ ಪದಾಧಿಕಾರಿಗಳ ಪದಾಪ್ರಧಾನ ಸಮಾರಂಭ ಹಾಗು ರಜತ ಸಂಭ್ರಮದ ಸಮಾರೋಪ ಸಮಾರಂಭ ವು ಬಿಸಿ ರೋಡ್ ನ ಲಯನ್ಸ್ ಸೇವಾ...