Wednesday, January 28, 2026

ಅಭಿವೃದ್ಧಿಯ ಮೂಲಕ ಜನತೆಗೆ ಧನ್ಯವಾದ ಅರ್ಪಿಸುವುದೇ ನನ್ನ ಧ್ಯೇಯ: ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಯ ಮೂಲಕ ಮತದಾರರಿಗೆ ಧನ್ಯವಾದ ಹೇಳುವುದೇ ನಮ್ಮ ಧ್ಯೇಯ ವಾಕ್ಯ ಎಂದು ಬಂಟ್ವಾಳ ಶಾಸಕ‌ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಹೇಳಿದರು.

ಮಾಣಿ ಗ್ರಾಮ ಪಂ ವ್ಯಾಪ್ತಿಯ ವಿವಿಧ ಕಾಮಗಾರಿ ಗಳ ಶಿಲಾನ್ಯಾಸ ಮತ್ತು ಉದ್ಘಾಟನೆ ನಡೆಸಿದ ಬಳಿಕ ಅವರು ಮಾತನಾಡಿದರು.

ತಾಲೂಕಿನ ಜನರು ವಿಶ್ವಾಸವಿರಿಸಿ ನೀಡಿದ ಮತಕ್ಕೆ ಚ್ಯುತಿ ಬಾರದಂತೆ ಪ್ರತಿ ಗ್ರಾಮಗಳನ್ನು ಅಭಿವೃದ್ಧಿ ಪಡಿಸುವುದೇ ನನ್ನ ಕನಸು ಎಂದು ಅವರು ಹೇಳಿದರು.

ಅಭಿವೃದ್ಧಿ ವಿಚಾರಗಳು ಬಂದಾಗ ಎಲ್ಲರೂ ಒಂದಾಗಿ ಕೈ ಜೋಡಿಸಿ ಎಂದು ಅವರು ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿಯವರ ಚಿಂತನೆ ಹಾಗೂ ಆಡಳಿತ ಇತರ ದೇಶಗಳಿಗೆ ಮಾದರಿ ಯಾಗಿದ್ದು ಅವರು ಗುಣಗಾನ ಮಾಡುವಂತಾಗಿದೆ. ಕೋವಿಡ್ ವ್ಯಾಕ್ಸಿನ್ ನ ಮೂಲಕ ಇತರ ದೇಶಗಳಿಗೆ ನಾವು ದೊಡ್ಡಣ್ಣ ನಾಗಿ ಮೂಡಿಬಂದಿದ್ದೇವೆ.

ಅಂತಹ ದೇಶದಲ್ಲಿರುವ ನಾವು ಭಾಗ್ಯಶಾಲಿಗಳು ಎಂದು ಅವರು ಹೇಳಿದರು.

ಮಾಣಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜಗೇರಿಸುವಂತೆ ಜಿ.ಪಂ.ಸದಸ್ಯೆ ಮಂಜುಳಾ ಮಾದವ ಮಾವೆ ಅವರ ನೀಡಿದ ಮನವಿಗೆ ಸ್ಪಂದಿಸಿದ ಶಾಸಕ ರಾಜೇಶ್ ನಾಯ್ಕ್ ಅವರು ಈಗಾಗಲೇ ಪುಂಜಾಲಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರ ವನ್ನು ಮೇಲ್ದರ್ಜೆಗೆ ಏರಿಸುವ ಪ್ರಕ್ರಿಯೆ ನಡೆಯುತ್ತಿದೆ, ಮುಂದಿನ ದಿನಗಳಲ್ಲಿ ಮಾಣಿ ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸುವ ಮೂಲಕ ಜನರ ಉಪಯೋಗಕ್ಕೆ ಸಿಗುವಂತೆ ಮಾಡುವ ಭರವಸೆ ನೀಡಿದರು.

ಮಾಣಿ ಗಾಂಧಿ ಮೈದಾನದಲ್ಲಿ ರೂ 10 ಲಕ್ಷ ಜಿ.ಪಂ.ಅನುದಾನದ ಮೂಲಕ ನಿರ್ಮಾಣ ಮಾಡಿರುವ ರಂಗ ಮಂದಿರವನ್ನು ಉದ್ಘಾಟಿಸಿದ ಜಿ.ಪಂ.ಸದಸ್ಯೆ ಮಂಜುಳ ಮಾದವ ಮಾವೆ ಅವರು ಮಾತನಾಡಿ ಜಿ.ಪಂ.ಸದಸ್ಯೆಯಾಗಿ ಆಯ್ಕೆಯಾದ ಸಂದರ್ಬದಲ್ಲಿ ಈ ಭಾಗದ ಜನರ ಬೇಡಿಕೆಯಂತೆ ರಂಗ ಮಂದಿರ ನಿರ್ಮಾಣ ಮಾಡಿದ್ದೇನೆ, ಈ ರಂಗ ಮಂದಿರ ಹಾಗೂ ಮಾಣಿ ಸಂತೆ ಮಾರುಕಟ್ಟೆ ಸಮೀಪದಲ್ಲಿ ನಿರ್ಮಾಣವಾದ ಶೌಚಾಲಯವನ್ನು ಉತ್ತಮ ರೀತಿಯಲ್ಲಿ ಬಳಸಿಕೊಂಡು ಹೋಗುವ ಜವಬ್ದಾರಿ ಇಲ್ಲಿನ ಜನತೆಗಿದೆ ಎಂದರು.

ಅಭಿವೃದ್ಧಿ ನಿರಂತರವಾಗಿ ನಡೆಯುತ್ತಲೇ ಇರುತ್ತದೆ ಆದರೆ ಜನರ ಸಮಸ್ಯೆ ಗಳನ್ನು ಅರಿತುಕೊಂಡು ತುರ್ತಾಗಿ ಬೇಕಾಗಿರುವ ಮೂಲಭೂತ ಸೌಕರ್ಯಗಳ ಒದಗಿಸುವಲ್ಲಿ ಶಾಸಕ ರಾಜೇಶ್ ನಾಯ್ಕ್ ಅವರು ಪ್ರಮಾಣಿಕ ಪ್ರಯತ್ನ ಮಾಡುತ್ತಿದ್ದಾರೆ, ಅದಕ್ಕಾಗಿ ಅವರಿಗೆ ಅಭಿನಂದನೆಗಳು ಎಂದು ಅವರು ಹೇಳಿದರು.

ರೂ 10 ಲಕ್ಷ ವೆಚ್ಚದಲ್ಲಿ ಶಂಭುಗ -ಪಲ್ಲತ್ತಿಲ ರಸ್ತೆ ಕಾಂಕ್ರೀಟುಕರಣ, ರೂ 10 ಲಕ್ಷ ವೆಚ್ಚದಲ್ಲಿ ಮಾಣಿ -ಪಟ್ಲಕೋಡಿ, ರೂ 10 ಲಕ್ಷ ವೆಚ್ಚದಲ್ಲಿ ಮಾಣಿ-ಅರಿಯಕೋಡಿ, ರೂ. 6 ಲಕ್ಷ ವೆಚ್ಷದಲ್ಲಿ ಮಾಣಿ- ಕಾಪಿಕಾಡು, ರೂ 5 ಲಕ್ಷ ವೆಚ್ಚದಲ್ಲಿ ಕೊಡಾಜೆ -ಕೋಚಪಲ್ಕೆ, ರೂ.10 ಲಕ್ಷದಲ್ಲಿ ಗಾಂಧಿಮೈದಾನದ ರಂಗಮಂದಿರ ಹಾಗೂ ರೂ 4 ಲಕ್ಷ ವೆಚ್ಚದಲ್ಲಿ ಸಂತೆ ಮಾರುಕಟ್ಟೆ ಯಲ್ಲಿ ಶೌಚಾಲಯದ ಉದ್ಘಾಟನೆ ನಡೆಯಿತು.

ತಾ.ಪಂ.ಸದಸ್ಯೆ ಗೀತಾಚಂದ್ರಶೇಖರ್  ನೆಟ್ಲಮೂಡ್ನೂರು ಗ್ರಾ.ಪಂ .ಅಧ್ಯಕ್ಷ ಸತೀಶ್ ನೇರಳಕಟ್ಟೆ, ಉಪಾಧ್ಯಕ್ಷೆ ಶಕೀಲಾ, ಅಶೋಕ್, ಮಾಣಿ ಗ್ರಾ.ಪಂ.ಸದಸ್ಯ ನಾರಾಯಣ ಶೆಟ್ಟಿ ದೋಟ, ಮಿತ್ರಾಕ್ಷಿ ,

ನೇರಳಕಟ್ಟೆ ವಿ.ಎಸ್.ಎಸ್.ಬ್ಯಾಂಕ್ ಅಧ್ಯಕ್ಷ ಪುಷ್ಪರಾಜ ಚೌಟ, ಬ್ಯಾಂಕ್ ನಿರ್ದೇಶಕ ತನಿಯಪ್ಪ ಗೌಡ, ಸನತ್ ಕುಮಾರ್ ರೈ, ಪ್ರಮುಖರಾದ

ಗಣೇಶ್ ರೈ ಮಾಣಿ, ಭರತ್ ಕುಮಾರ್ ಶೆಟ್ಟಿ, ಪ್ರತಾಪ್ ಚಂದ್ರ ಆಳ್ವ, ಹರೀಶ್ ಮಾಣಿ, ಅಶೋಕ್, ವನಿತಾ, ರೂಪರಾಣಿ ಶೆಟ್ಟಿ, ಸುನೀತಾ, ವನಿತಾಕರುಣಾಕರ್, ಆನಂದ ಕುಲಾಲ್, ಸುಶೀಲಾ, ಸಂತೋಷ್ ರೈ ಮಾಣಿ, ಮುತ್ತಪ್ಪ, ಕರುಣಾಕರ ಪೂಜಾರಿ, ನರಸಿಂಹ ಶೆಟ್ಟಿ ಮಾಣಿ ಮತ್ತಿತರ ರು ಉಪಸ್ಥಿತರಿದ್ದರು.

More from the blog

ಒಡಿಯೂರಿನಲ್ಲಿ ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಭಾರತ ವಿಶ್ವದ ಉಸಿರಾಗಿದ್ದು, ಯಾವ ಸೆಳೆತಕ್ಕೂ ಒಳಗಾಗಿಲ್ಲ. ವಂದೇ ಮಾತರಂ ಗೀತೆಗೆ ರಾಷ್ಟ್ರಭಕ್ತಿ ಉದ್ದೀಪಿಸುವ ಶಕ್ತಿಯಿದೆ. ಭಾಷೆ ಸಂಸ್ಕೃತಿ ಬಹಳ ದೊಡ್ಡದಾಗಿದ್ದು, ಇದರ ಉಳಿವಿಗೆ ಒಗ್ಗಟ್ಟಾಗುವ ಅಗತ್ಯವಿದೆ. ವಿಶ್ವ ವಿದ್ಯಾಲಯಗಳಲ್ಲಿ ತುಳು...

ವಿದ್ಯಾರ್ಜನೆ ಪಡೆದ ಸಂಸ್ಥೆಗೆ ನೀಡುವ ಸಹಾಯಸ್ತ ದೇವತಾ ಕಾರ್ಯಕ್ಕೆ ಸಮಾನ : ಪ್ರಭಾಕರ ಪ್ರಭು

ಬಂಟ್ವಾಳ : ಬಾಲ್ಯದಲ್ಲಿ ಬಾಹ್ಯ ಪ್ರಪಂಚದಲ್ಲಿನ ಆಗುಹೋಗುಗಳ ಬಗ್ಗೆ ಪರಿಚಯಿಸಿ ಪ್ರಾಥಮಿಕ ಶಾಲಾ ಪೂರ್ವ ಶಿಕ್ಷನವನ್ನು ನೀಡುತ್ತಿರುವ ಅಂಗನವಾಡಿಗಳ ಮೂಲಭೂತ ಸೌಕರ್ಯಗಳಿಗೆ ನೀಡುವ ಸಹಾಯಸ್ತಾವು ದೇವತಾ ಕಾರ್ಯಕ್ಕೆ ಸಮಾನವಾಗಿರುತ್ತದೆ ಎಂದೂ ಸಿದ್ದಕಟ್ಟೆ ಪ್ರಾಥಮಿಕ...

ಮಣಿಹಳ್ಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಆಶ್ರಯದಲ್ಲಿ ಎಳ್ಳು ಗಂಟು ದೀಪೋತ್ಸವ..

ಬಂಟ್ವಾಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಮಣಿಹಳ್ಳ ಇದರ ಆಶ್ರಯದಲ್ಲಿ ವಿಶ್ವ ಶಾಂತಿಗಾಗಿ, ಲೋಕ ಕಲ್ಯಾಣಾರ್ಥವಾಗಿ, ಶನಿದೋಷ ಪರಿಹಾರಕ್ಕಾಗಿ ಸಕಲ ಇಷ್ಟಾರ್ಥ ಸಿದ್ಧಿಗಾಗಿ ಜ. 24ರಂದು ಶನಿವಾರ ನಡೆದ ಸತತ 14...

ಜಿಲ್ಲೆಯಲ್ಲಿ ಹೆಚ್ಚಿದ ಚಿರತೆ ಉಪಟಳ : ದಾಳಿಗೆ ನಾಯಿ, ಕಾಡುಹಂದಿ ಬಲಿ

ಬಂಟ್ವಾಳ : ಚಿರತೆಯೊಂದು ನಾಯಿಯನ್ನು ಕೊಂದು ಕುತ್ತಿಗೆಯ ಭಾಗದಿಂದ ಮಾಂಸವನ್ನು ತಿಂದು ಹೋದ ಘಟನೆ ಬೆಳ್ತಂಗಡಿ ತಾಲೂಕಿನ ಮಾಲಾಡಿಯ ಗ್ರಾಮದ ಪುರಿ ಎಂಬಲ್ಲಿ ನಡೆದಿದೆ. ಆನಂದ ನಾಯರ್ ಎಂಬವರ ಮನೆಯಲ್ಲಿ ಸಾಕಿದ ಕಪ್ಪು ಬಣ್ಣದ...